![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 12, 2022, 7:25 AM IST
ಮುಂಬಯಿ: ಹಾಲಿ ಚಾಂಪಿಯನ್ ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ರವೀಂದ್ರ ಜಡೇಜ ಗಾಯದ ಸಮಸ್ಯೆಯಿಂದಾಗಿ ಐಪಿಎಲ್ನಿಂದ ಹೊರಬಿದ್ದಿದ್ದಾರೆ.
ಆರ್ಸಿಬಿ ತಂಡದೆದುರಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಸಂದರ್ಭ ಅವರ ಕೈ ಮತ್ತು ಭುಜಕ್ಕೆ ಗಾಯವಾಗಿತ್ತು. ಆಬಳಿಕ ಅವರು ಫೀಲ್ಡಿಂಗ್ ಮುಂದುವರಿಸಿದ್ದರೂ ಡೆಲ್ಲಿ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು. ಈ ಪಂದ್ಯವನ್ನು ಚೆನ್ನೈ ಸುಲಭವಾಗಿ ಗೆದ್ದಿತ್ತು.
ಜಡೇಜ ಅವರಿಗಾದ ಗಾಯವನ್ನು ಚೆನ್ನೈ ತಂಡ ಗಂಭೀರವಾಗಿ ಪರಿಗಣಿಸುತ್ತಿದೆ. ಆದರೆ ಅವರಿನ್ನೂ ಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆದರೆ ಈ ಐಪಿಎಲ್ನಲ್ಲಿ ಅವರ ನಿರ್ವಹಣೆಯೂ ಸಾಧಾರಣ ಮಟ್ಟದಲ್ಲಿದೆ. ಆಡಿದ 10 ಪಂದ್ಯಗಳಿಂದ ಅವರು ಕೇವಲ 116 ಮತ್ತು 5 ವಿಕೆಟ್ ಉರುಳಿಸಿದ್ದಾರೆ.
ಈ ಬಾರಿಯ ಐಪಿಎಲ್ ಆರಂಭವಾಗುವ ಮೊದಲು ಚೆನ್ನೈ ತಂಡದ ನಾಯಕತ್ವದ ಜವಾಬ್ದಾರಿಯನ್ನು ಜಡೇಜ ಅವರಿಗೆ ವಹಿಸಲಾಗಿತ್ತು. ನಾಯಕತ್ವದ ಜವಾಬ್ದಾರಿಯಿಂದಾಗಿ ಅವರ ವೈಯಕ್ತಿಕ ನಿರ್ವಹಣೆ ಮೇಲೆ ಪರಿಣಾಮ ಬಿತ್ತು. ಬ್ಯಾಟಿಂಗ್ನಲ್ಲಿ ಅವರ ವೈಫಲ್ಯ ಮುಂದುವರಿಯಿತು. ಕೊನೆಗೆ ಇದರಿಂದ ಬೇಸತ್ತ ಅವರು ನಾಯಕತ್ವವನ್ನು ತ್ಯಜಿಸಲು ನಿರ್ಧರಿಸಿದರು. ಹೀಗಾಗಿ ಧೋನಿ ಅವರಿಗೆ ಮತ್ತೆ ನಾಯಕತ್ವದ ಜವಾಬ್ದಾರಿಯನ್ನು ವಹಿಸಲಾಯಿತು.
ಚೆನ್ನೈ ತಂಡವು ಗುರುವಾರ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಜಡೇಜ ಆಡುವುದಿಲ್ಲ, ಲೀಗ್ ಹಂತದ ಇನ್ನುಳಿದ ಎರಡು ಪಂದ್ಯಗಳಲ್ಲಿ ಚೆನ್ನೈ ತಂಡವು ಗುಜರಾತ್ ಮತ್ತು ರಾಜಸ್ಥಾನ ತಂಡವನ್ನು ಎದುರಿಸಲಿದೆ. ಈ ಮೂರು ಪಂದ್ಯಗಳಲ್ಲಿ ತಂಡವು ಗೆದ್ದರೆ ಒಟ್ಟಾರೆ 14 ಅಂಕ ಗಳಿಸಲಿದೆ. ಹೀಗಿದ್ದರೂ ತಂಡವು ಪ್ಲೇ ಆಫ್ಗೆ ತೇರ್ಗಡೆಯಾಗಬೇಕಾದರೆ ಆರ್ಸಿಬಿ ಮತ್ತು ರಾಜಸ್ಥಾನ ತಂಡಗಳ ಪರಿಸ್ಥಿತಿಯನ್ನು ಗಮನಿಸಬೇಕಾಗಿದೆ. ಯಾಕೆಂದರೆ ಈ ಎರಡೂ ತಂಡಗಳು ಈಗಾಗಲೇ 14 ಅಂಕ ಗಳಿಸಿವೆ. ಇನ್ನು ಒಂದು ಪಂದ್ಯದಲ್ಲಿ ಆರ್ಸಿಬಿ ಅಥವಾ ರಾಜಸ್ಥಾನ ಗೆದ್ದರೆ ಚೆನ್ನೈಯ ಎಲ್ಲ ಪ್ರಯತ್ನಗಳು ವಿಫಲವಾಗಲಿವೆ.
ಜಡೇಜ ಐಪಿಎಲ್ ಸಾಧನೆ
ಐಪಿಎಲ್ನಲ್ಲಿ 33ರ ಹರೆಯದ ಜಡೇಜ 210 ಪಂದ್ಯಗಳನ್ನಾಡಿದ್ದು 26.62 ಸರಾಸರಿಯಂತೆ 2502 ರನ್ ಗಳಿಸಿದ್ದಾರೆ. ಎರಡು ಅರ್ಧಶತಕ ಬಾರಿಸಿರುವ ಅವರು 132 ವಿಕೆಟ್ ಹಾರಿಸಿದ ಸಾಧನೆಯನ್ನು ಕೂಡ ಮಾಡಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.