3ನೇ ಗ್ಯಾರಂಟಿ ಜಾರಿ: ಅನ್ನಭಾಗ್ಯ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮುಂದಿನ ಹತ್ತು ದಿನಗಳಲ್ಲಿ ಎಲ್ಲ ಫ‌ಲಾನುಭವಿಗಳ ಖಾತೆಗೂ ಹಣ

Team Udayavani, Jul 11, 2023, 7:05 AM IST

3ನೇ ಗ್ಯಾರಂಟಿ ಜಾರಿ: ಅನ್ನಭಾಗ್ಯ ನಗದು ವರ್ಗಾವಣೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು:ರಾಜ್ಯದ ಬಡ ಕುಟುಂಬಗಳಿಗೆ ಆಹಾರದ ಭದ್ರತೆ ಒದಗಿಸಿರುವ “ಅನ್ನಭಾಗ್ಯ’ಕ್ಕೆ ಈಗ ದಶಕದ ಸಂಭ್ರಮ. ಹೆಚ್ಚುವರಿ ಐದು ಕೆಜಿ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸೋಮವಾರ ಈ ಸಂಭ್ರಮವನ್ನು ಅಕ್ಷರಶಃ ಇಮ್ಮಡಿಗೊಳಿಸಿತು.

2013ರಲ್ಲಿ ಇದೇ ಸರ್ಕಾರ ಕೇವಲ 1 ರೂ.ಗೆ ಕೆಜಿಯಂತೆ ಪ್ರತಿ ಕುಟುಂಬದ ವ್ಯಕ್ತಿಗೆ ತಲಾ ಐದು ಕೆಜಿ ಅಕ್ಕಿ ನೀಡುವ ಮೂಲಕ “ಅನ್ನಭಾಗ್ಯ’ಕ್ಕೆ ಚಾಲನೆ ನೀಡಿತ್ತು. ಈಗ ಅದೇ ಸರ್ಕಾರವು ದುಪ್ಪಟ್ಟು ಅಂದರೆ ಐದು ಕೆಜಿ ಅಕ್ಕಿಯ ಜತೆಗೆ ಹೆಚ್ಚುವರಿ ಐದು ಕೆಜಿ ಅಕ್ಕಿಗೆ ತಗಲುವ ಹಣವನ್ನು ನೇರವಾಗಿ ಫ‌ಲಾನುಭವಿಗಳ ಖಾತೆಗೆ ಜಮೆ ಮಾಡುವ ಯೋಜನೆಗೆ ಚಾಲನೆ ನೀಡಿತು. ಇದರೊಂದಿಗೆ ಹತ್ತು ವರ್ಷಗಳ ಅವಧಿಯಲ್ಲಿ ಸರ್ಕಾರದಿಂದ ಬಡವರ್ಗ ಪಡೆಯುವ ಅಕ್ಕಿಯ ಪ್ರಮಾಣ ದುಪ್ಪಟ್ಟಾಗಿದೆ. ಈ ಐತಿಹಾಸಿಕ ಕ್ಷಣಗಳಿಗೆ ವಿಧಾನಸೌಧ ಸೋಮವಾರ ಸಾಕ್ಷಿಯಾಯಿತು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ “ನೆಮ್ಮದಿಯ ಬದುಕಿಗೆ ಅನ್ನಭಾಗ್ಯ’ ಶೀರ್ಷಿಕೆ ಅಡಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಜಂಟಿಯಾಗಿ ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಫ‌ಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಿಗೆ ಹಣ (ಪ್ರತಿ ವ್ಯಕ್ತಿಗೆ 34×5=170 ರೂ.ಗಳಂತೆ)ವನ್ನು “ನೇರ ನಗದು ವರ್ಗಾವಣೆ’ ಮಾಡುವ ಮೂಲಕ ಚಾಲನೆ ನೀಡಿದರು. ಮುಂದಿನ ಹತ್ತು ದಿನಗಳಲ್ಲಿ ರಾಜ್ಯದ ಎಲ್ಲ ಫ‌ಲಾನುಭವಿಗಳಿಗೆ ಈ ಯೋಜನೆ ಅಡಿ ಹಣ ಕೈಸೇರಲಿದೆ.

2 ತಿಂಗಳು 3 ಗ್ಯಾರಂಟಿಗಳು
ಇದರೊಂದಿಗೆ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಅಧಿಕಾರಕ್ಕೆ ಬಂದ ಕೇವಲ ಎರಡು ತಿಂಗಳ ಅಂತರದಲ್ಲಿ ಮೂರು ಈಡೇರಿದಂತಾಗಿದೆ. ಈಗಾಗಲೇ ಶಕ್ತಿ ಯೋಜನೆಗೆ ಚಾಲನೆ ದೊರಕಿದ್ದು, ಅಭೂತಪೂರ್ವ ಸ್ಪಂದನೆ ದೊರೆಯುತ್ತಿದೆ. ಇನ್ನು ಉಚಿತ ವಿದ್ಯುತ್‌ ಕಲ್ಪಿಸುವ “ಗೃಹಜ್ಯೋತಿ’ಗೆ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಒಂದು ಕೋಟಿಗೂ ಅಧಿಕ ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ. ಬರುವ ತಿಂಗಳಿಂದ ಆ ವರ್ಗ ವಿದ್ಯುತ್‌ ಬಿಲ್‌ ಪಾವತಿಸಬೇಕಿಲ್ಲ. ಈಗ ಇದರ ಸಾಲಿಗೆ “ಅನ್ನಭಾಗ್ಯ’ವೂ ಸೇರಿಕೊಂಡಿದೆ.

ಇದರ ಬೆನ್ನಲ್ಲೇ ಸರ್ಕಾರ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ಎರಡು ಸಾವಿರ ರೂ. ನೀಡುವ “ಗೃಹಲಕ್ಷ್ಮೀ’ ಯೋಜನೆಗೆ ಸಿದ್ಧತೆ ಮಾಡಿಕೊಂಡಿದ್ದು, ಜುಲೈ 15ರಿಂದ ಯೋಜನೆ ಅಡಿ ನೋಂದಣಿ ಪ್ರಕ್ರಿಯೆ ಆರಂಭಿಸಲಿದೆ. ಇದಾಗಿ ಸರಿಯಾಗಿ ಒಂದು ತಿಂಗಳಲ್ಲಿ ಅಂದರೆ ಆಗಸ್ಟ್‌ 16ರಂದು ಕುಟುಂಬದ ಮುಖ್ಯಸ್ಥರಾಗಿರುವ ಮಹಿಳಾಮಣಿಗಳ ಖಾತೆಗೆ ಸರ್ಕಾರದಿಂದ 2 ಸಾವಿರ ರೂ. ಜಮೆ ಆಗಲಿದೆ. ನಂತರದ 3 ತಿಂಗಳಲ್ಲಿ ಐದನೇ ಗ್ಯಾರಂಟಿ “ಯುವನಿಧಿ’ಯನ್ನೂ ಸರ್ಕಾರ ಅನುಷ್ಠಾನಗೊಳಿಸಲಿದೆ. ಅದರಡಿ 2022-23ನೇ ಸಾಲಿನಲ್ಲಿ ಉತ್ತೀರ್ಣರಾದ ಪದವೀಧರರಿಗೆ ಮಾಸಿಕ ಮೂರು ಸಾವಿರ ರೂ. ಹಾಗೂ ಡಿಪ್ಲೊಮಾ ಪೂರೈಸಿದ ಯುವಕರಿಗೆ 1,500 ರೂ. ನೀಡಲಿದೆ. ಅಂದುಕೊಂಡಂತಾದರೆ, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಕೇವಲ ಎಂಟು ತಿಂಗಳಲ್ಲಿ ಐದೂ ಯೋಜನೆಗಳು ಜಾರಿಗೆ ಬಂದಂತಾಗುತ್ತದೆ. ಇದರಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ 4ರಿಂದ 5 ಸಾವಿರ ರೂ. ಸರ್ಕಾರದಿಂದಲೇ ಬರಲಿದೆ ಎಂದು ಅಂದಾಜಿಸಲಾಗಿದೆ.

“1 ಗಂಟೆಯಲ್ಲಿ ಜಾರಿಗೆ ತಂದಿದ್ದೆ’
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಅನ್ನಭಾಗ್ಯ’ ಹೊಸ ಕಾರ್ಯಕ್ರಮವಲ್ಲ; 2013ರಲ್ಲಿ ನಾನು ಪ್ರಮಾಣವಚನ ಸ್ವೀಕರಿಸಿದ ಒಂದು ಗಂಟೆಯಲ್ಲಿ ಈ ಯೋಜನೆ ಘೋಷಿಸಿದ್ದೆ. ಆಗ 3 ರೂ.ಗೆ ನೀಡುತ್ತಿದ್ದ ಕೆಜಿ ಅಕ್ಕಿಯನ್ನು ಕೇವಲ 1 ರೂ.ಗೆ ನೀಡಲು ಆರಂಭಿಸಿದೆವು. ನಂತರದಲ್ಲಿ ಸಂಪೂರ್ಣ ಉಚಿತವಾಗಿ ವಿತರಿಸಲಾಯಿತು. ಆಮೇಲೆ ತಲಾ 7 ಕೆಜಿಗೆ ಹೆಚ್ಚಿಸಲಾಯಿತು. ಇದು ಈಗ ಹತ್ತು ಕೆಜಿಗೆ ತಲುಪಿದೆ. ಈ ಯೋಜನೆಯನ್ನು ಬೇರೆ ರಾಜಕೀಯ ಪಕ್ಷ ಜಾರಿಗೆ ತಂದಿದ್ದಲ್ಲ’ ಎಂದು ಹೇಳಿದರು.

“ಅನ್ನಭಾಗ್ಯ’ದ ಲೋಗೋ ಬಿಡುಗಡೆಗೊಳಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಐದರಲ್ಲಿ ಮೂರು ಗ್ಯಾರಂಟಿಗಳನ್ನು ಸರ್ಕಾರ ಅಲ್ಪಾವಧಿಯಲ್ಲೇ ಜಾರಿಗೆ ತಂದಿದೆ. ಚುನಾವಣೆಗೆ ಮುನ್ನ ನಾವು ನೀಡಿದ ಭರವಸೆಗಳನ್ನು ಈಗ ಈಡೇರಿಸುವ ಮೂಲಕ ಇತರೆ ರಾಜ್ಯಗಳಿಗೆ ಮಾದರಿಯಾಗಿದ್ದೇವೆ. ವಿವಿಧ ಪಕ್ಷಗಳ ನಾಯಕರು ಈ ಅನ್ನಭಾಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಇದು ನಮ್ಮ ಬದ್ಧತೆಗೆ ಸಾಕ್ಷಿ ಎಂದು ಹೇಳಿದರು.

ಮಾಹಿತಿ ಪತ್ರ ಬಿಡುಗಡೆ
“ಆಹಾರ ವೈವಿಧ್ಯತೆಯೊಂದಿಗೆ ಹಸಿವು ಮುಕ್ತ ಕರ್ನಾಟಕ’ ಮಾಹಿತಿ ಪತ್ರವನ್ನು ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಎಚ್‌. ಮುನಿಯಪ್ಪ ಬಿಡುಗಡೆಗೊಳಿಸಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಇದು ಸರ್ಕಾರದ ದಿಟ್ಟ ಹೆಜ್ಜೆಯಾಗಿದೆ. ಮುಂದಿನ ಹತ್ತು ದಿನಗಳಲ್ಲಿ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿನ ಪ್ರತಿನಿಧಿಗಳಿಗೆ ಹಂತ-ಹಂತವಾಗಿ ನಗದು ವರ್ಗಾವಣೆ ಆಗಲಿದೆ’ ಎಂದರು.

ಸ್ಟೇಟಸ್‌ ತಿಳಿಯುವುದು ಹೇಗೆ?
“ಅನ್ನಭಾಗ್ಯ’ದ ಫ‌ಲಾನುಭವಿಗಳು ಖುದ್ದು ತಮ್ಮ ಪಡಿತರಚೀಟಿ ಸಂಖ್ಯೆ ನಮೂದಿಸುವ ಮೂಲಕ ಹಣ ವರ್ಗಾವಣೆ ಬಗ್ಗೆ ತಿಳಿಯಬಹುದು. http://ahara.kar.nic.in/lpg ಗೆ ಭೇಟಿ ನೀಡಿ ಅಲ್ಲಿ ಪಡಿತರಸಂಖ್ಯೆ ನಮೂದಿಸಿ, ಸ್ಟೇಟಸ್‌ ತಿಳಿಯಬಹುದು.

ಡರ್ಟಿ ಪಾಲಿಟಿಕ್ಸ್‌
ಅಕ್ಕಿ ಕೊಡುವುದಾಗಿ ಲಿಖೀತ ಭರವಸೆ ನೀಡಿ ನಂತರ ಕೈಕೊಟ್ಟ ಕೇಂದ್ರ ಸರ್ಕಾರ ಅನ್ನದ ವಿಚಾರದಲ್ಲಿ “ಡರ್ಟಿ ಪಾಲಿಟಿಕ್ಸ್‌’ ಮಾಡುತ್ತಿದೆ. ಇದು ಬಡವರ ವಿರೋಧಿ ಕ್ರಮ ಅಲ್ಲದೆ ಮತ್ತೇನು?
– ಸಿದ್ದರಾಮಯ್ಯ, ಮುಖ್ಯಮಂತ್ರಿ

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.