![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 25, 2021, 5:09 PM IST
ಚಿಂತಾಮಣಿ: ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದ ಇಬ್ಬರು ಬಾಲಕರನ್ನು ಪೋಷಕರು ಮೇಲೆತ್ತಿ 108 ಕರೆ ಮಾಡಿ ಗಂಟೆಗಳೇ ಕಳೆದರೂ ಬಾರದ ಕಾರಣ ಹಳೆ ಟೆಂಪೋದಲ್ಲಿ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಟೆಂಪೋ ಕೆಟ್ಟು ನಿಂತಿದ್ದು, ಬೇಗನೇ ತಪಾಸಣೆ ಮಾಡಿದ್ದರೆ ಮಕ್ಕಳು ಬದುಕುತ್ತಿದ್ದರು. 108 ಬಾರದಿರುವುದು ಹಾಗೂ ವೈದ್ಯರ ನಿರ್ಲಕ್ಷ್ಯವೇ ಮಕ್ಕಳ ಸಾವಿಗೆ ಕಾರಣ ಎಂದು ಪೋಷಕರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.
ಮೂಗಲ ಮರಿಯ ಶಿವರಾಜ್ ಅವರ ಮಗ ಚರಣ್(10) ಮತ್ತು ರಾಮಾಂಜಿ ಅವರ ಮಗ ತೇಜಸ್ (11) ಮೃತರು.
ಆಗಿದ್ದೇನು?: ತಾಲೂಕಿನ ಮೂಗಲಮರಿ ಗ್ರಾಮದ ಹೊರ ವಲಯ ದಲ್ಲಿಯ ಕೃಷಿ ಹೊಂಡಕ್ಕೆ ಮಕ್ಕಳು ಬಿದ್ದಿದ್ದರು. 108
ಬರದಿದ್ದರಿಂದ ಟೆಂಪೋದಲ್ಲಿ ಕರೆದ್ಯೊಯುತ್ತಿದ್ದ ವೇಳೆ ಕೆಟ್ಟು ನಿಂತಿದ್ದು, ಬೇರೊಂದು ವಾಹನದಲ್ಲಿ ಆಸ್ಪತ್ರೆಗೆ ತಲುಪಿದ ವೇಳೆ
ಕ್ಷಣಾರ್ಧದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಗ್ರಾಮದ ಯುವಕರು ನಗರದ ಸಾರ್ವಜನಿಕ ಆಸ್ಪತ್ರೆಯ ಕಿಟಕಿ, ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಟ್ಯಂತರ ರೂ. ವೆಚ್ಚ ಮಾಡಿ ತುರ್ತು ಸೇವೆಗೆಂದು ಸರ್ಕಾರ ನೇಮಿಸಿರುವ 108 ವಾಹನಗಳು ತಾಲೂಕಿನಲ್ಲಿ ಬಹಳ ಮಂದಗತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಹಲವು ಪ್ರಾಣಹಾನಿ ಆಗಿರುವ ಪ್ರಸಂಗಗಳು ಹೆಚ್ಚಿವೆ.
ಇದನ್ನೂ ಓದಿ:ಕೆಜಿಎಫ್: ಮೂರ್ತಿ ಭಂಜನ, ಕತ್ತಿ ಹಿಡಿದು ತಿರುಗಿದ ದುಷ್ಕರ್ಮಿ
ಆಸ್ಪತ್ರೆಯಿಂದ ಕ್ಷಣಾರ್ಧದಲ್ಲಿ ನಾಪತ್ತೆ
ಮಕ್ಕಳನ್ನು ಆಸ್ಪತ್ರೆಗೆ ಕರೆ ತಂದಾಗ ಮೃತಪಟ್ಟಿರುವುದು ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮದ ಯುವಕರು, ಆಸ್ಪತ್ರೆಯ ಕಿಟಕಿ ಬಾಗಿಲುಗಳ ಗಾಜು ಮತ್ತು ಸಹಾಯವಾಣಿ ಕೇಂದ್ರದ ಗಾಜುಗಳನ್ನು ಒಡೆದು ವೈದ್ಯರನ್ನು ಯುವಕರು ನಿಂದಿಸಿದ್ದಾರೆ. ಪೊಲೀಸರು ಬರುವಷ್ಟರಲ್ಲಿ ಆಸ್ಪತ್ರೆಯಿಂದ ಹೊರಟು ಹೋಗಿದ್ದಾರೆಂದು ಆಸ್ಪತ್ರೆಯ ಸಿಬ್ಬಂದಿ ತಿಳಿಸಿದರು.
ಆಸ್ಪತ್ರೆಯಲ್ಲಿ ಸಿಸಿ ಕ್ಯಾಮೆರಾ ರಿಪೇರಿ
ದಾಂಧಲೆ ನಡೆಸಿದ ಯುವಕರನ್ನು ಪತ್ತೆ ಹಚ್ಚಲು ಪೊಲೀಸರು ಆಸ್ಪತ್ರೆಯ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಸಿಸಿ ಕ್ಯಾಮೆರಾ ಕೆಟ್ಟಿರುವುದು ಬೆಳಕಿಗೆ ಬಂದಿದೆ. ಇದು ಆಸ್ಪತ್ರೆಯ ವೈದ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.
108 ಇರುವುದೇ ಮೂರು, ಒಂದು ಕೆಟ್ಟಿದೆ
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಸಂತೋಷ್, ತಾಲೂಕಿನಲ್ಲಿ 108 ವಾಹನಗಳು ಇರುವುದು ಮೂರು. ಅದರಲ್ಲಿ ಒಂದು ಕೆಟ್ಟಿರುವುದರಿಂದ ಉಳಿದವುಗಳಿಗೆ ಬಿಡುವಿರುವುದಿಲ್ಲ. ಯಾವುದೇ ಕರೆಗೆ ಸ್ಪಂದಿಸಿ ಅಲ್ಲಿಗೆ ತೆರಳಬೇಕಾದರೆ ತಡವಾಗುತ್ತದೆ. ಆ್ಯಂಬುಲೆನ್ಸ್ ಬಾರದ ಕೋಪಕ್ಕೆ ಆಸ್ಪತ್ರೆಯ ಮೇಲೆ ದಾಳಿ ಮಾಡಿರುವುದು ಸರಿಯಲ್ಲ. ಮುಳಬಾಗಿಲಿನಲ್ಲಿ ಏಳು 108 ವಾಹನಗಳಿವೆ. ಆದರೆ ನಮ್ಮ ತಾಲೂಕಿಗೆ ಕೇವಲ ಮೂರೇ ಮೂರು ವಾಹನಗಳಿರುವುದು ದುರದೃಷ್ಟಕರ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.