ಚಿಕ್ಕಮಗಳೂರು: 8 ಮಂದಿಗೆ ಕೋವಿಡ್‌-19 ಸೋಂಕು ದೃಢ


Team Udayavani, Jun 20, 2020, 8:40 PM IST

ಚಿಕ್ಕಮಗಳೂರು: 8 ಮಂದಿಗೆ ಕೋವಿಡ್‌-19 ಸೋಂಕು ದೃಢ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕೋವಿಡ್‌-19 ಸೋಂಕು ಶನಿವಾರ ರುದ್ರನರ್ತನ ಮಾಡಿದ್ದು ಒಂದೇ ದಿನ 8 ಮಂದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ.

ತರೀಕೆರೆ ತಾಲ್ಲೂಕಿನ ನಾಲ್ಕು ಪೊಲೀಸ್ ಸಿಬ್ಬಂದಿ, ಮಹಾರಾಷ್ಟ್ರದಿಂದ ಇತ್ತೀಚೆಗೆ ಎನ್‍ಆರ್‍ಪುರ ತಾಲ್ಲೂಕಿಗೆ ಬಂದಿದ್ದ ಇಬ್ಬರು, ತಮಿಳುನಾಡಿನಿಂದ ಕೊಪ್ಪ ತಾಲ್ಲೂಕಿಗೆ ಬಂದ ಒಬ್ಬರಿಗೆ ಹಾಗೂ ಕುವೈತ್‍ನಿಂದ ಶೃಂಗೇರಿ ತಾಲ್ಲೂಕಿಗೆ ಬಂದಿದ್ದ ಒಬ್ಬರಲ್ಲಿ ಕೋವಿಡ್‌-19 ಸೋಂಕಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಡಾಣ ಬಗಾದಿ ಗೌತಮ್ ತಿಳಿಸಿದ್ದಾರೆ.

ಕೋವಿಡ್‌-19 ಸೋಂಕಿತ 8 ಮಂದಿಯನ್ನು ಚಿಕ್ಕಮಗಳೂರು ನಗರದಲ್ಲಿ ತೆರೆಯಲಾಗಿರುವ ಕೋವಿಡ್‌-19 ಚಿಕಿತ್ಸಾ ಕೇಂದ್ರದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 16 ಕೋವಿಡ್‌-19 ಸಕ್ರೀಯ ಪ್ರಕರಣಗಳು ಕಂಡು ಬಂದಿವೆ ಎಂದು ತಿಳಿಸಿದ್ದಾರೆ.

23ವರ್ಷದ ಮಹಿಳೆ ಇತ್ತೀಚೆಗೆ ಕುವೈತ್‍ನಿಂದ ಜಿಲ್ಲೆಯ ಶೃಂಗೇರಿ ತಾಲ್ಲೂಕಿಗೆ ಹಿಂದೂರಿಗಿದ್ದರು. 38ವರ್ಷದ ಪುರುಷನಲ್ಲಿ, 54 ವರ್ಷದ ಪುರುಷ, 31 ವರ್ಷದ ಪುರುಷ, 47 ವರ್ಷದ ಪುರುಷರಲ್ಲಿ ಸೋಂಕು ಪತ್ತೆಯಾಗಿದ್ದು ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರದಿಂದ ಇತ್ತೀಚೆಗೆ ಎನ್‍ಆರ್‍ಪುರ ತಾಲ್ಲೂಕಿಗೆ ಆಗಮಿಸಿದ್ದ 18ವರ್ಷದ ಯುವಕ, 50ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದೆ. ತಮಿಳುನಾಡು ರಾಜ್ಯದಿಂದ ಕೊಪ್ಪ ತಾಲ್ಲೂಕಿಗೆ ಆಗಮಿಸಿದ್ದ 25 ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದೆ.

ಕುವೈತ್‍ನಿಂದ ಶೃಂಗೇರಿ ಪಟ್ಟಣಕ್ಕೆ ಬಂದಿದ್ದ 23ವರ್ಷದ ಮಹಿಳೆ ಗರ್ಭಿಣಿ ಸೇರಿದಂತೆ ನಾಲ್ವರು ಪೊಲೀಸರು ಹಾಗೂ ಹೊರ ರಾಜ್ಯದಿಂದ ಬಂದವರಲ್ಲಿ ಸೋಂಕು ಪತ್ತೆಯಾಗಿದೆ. ಇನ್ನೂ ತರೀಕೆರೆ ಪಟ್ಟಣದ ಡಿವೈಎಸ್‍ಪಿ ಸೇರಿದಂತೆ ನಾಲ್ಕು ಜನ ಪೊಲೀಸ್ ಸಿಬ್ಬಂದಿಗೆ ಸೋಂಕು ಹೇಗೆ ತಗುಲಿದೆ ಎಂದು ಪತ್ತೆ ಹಚ್ಚಲಾಗುತ್ತಿದೆ.

ತರೀಕೆರೆ ತಾಲ್ಲೂಕು ಡಿವೈಎಸ್‍ಪಿ ಕಚೇರಿಯನ್ನೇ ಸೀಲ್‍ಡೌನ್ ಮಾಡಲು ಜಿಲ್ಲಾಡಳಿತ ಮುಂದಾಗಿದ್ದು, ಪೊಲೀಸರ ಟ್ರಾವೆಲ್ ಹಿಸ್ಟರಿ ಭಯಾನಕವಾಗಿದೆ ಎಂದು ತಿಳಿದು ಬಂದಿದೆ. ಒಟ್ಟಾರೆ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್‌-19 ಸೋಂಕು ಏರಿಕೆಯಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಇಷ್ಟು ದಿನಗಳ ಕಾಲ ಹೊರ ರಾಜ್ಯದಿಂದ ಜಿಲ್ಲೆಗೆ ಬಂದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿತ್ತು, ಆದರೆ, ಕಳೆದ ಮೂರ್ನಾಕು ದಿನಗಳಿಂದ ಕಂಡು ಬರುತ್ತಿರುವ ಕೆಲವು ಸೋಂಕಿತ ಪ್ರಕರಣಗಳು ಸ್ಥಳೀಯರಾಗಿದ್ದು ಸೋಂಕು ಸಮುದಾಯಿಕವಾಗಿ ಹರಡುತ್ತಿದೇಯಾ ಎಂಬ ಅನುಮಾನವು ಕಾಡುತ್ತಿದೆ.

ಜೂನ್ ತಿಂಗಳ ಎರಡು ಮತ್ತು ಮೂರನೇ ವಾರ ಜಿಲ್ಲೆಗೆ ಕೋವಿಡ್‌-19 ಕಂಟಕವಾಗಿ ಪರಿಣಮಿಸಿದೆ. ಅಜ್ಜಂಪುರದ 72ವರ್ಷದ ವೃದ್ಧೆಯನ್ನು ಬಲಿ ಪಡೆದುಕೊಳ್ಳುವ ಮೂಲಕ ಕೋವಿಡ್‌-19 ಗೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದುಕೊಂಡಿತು. ಅದರ ಬೆನ್ನಲ್ಲೇ ಕಾರಾಗೃಹದಲ್ಲಿರುವ ಖೈದಿಗೆ ಕೋವಿಡ್‌-19 ವಕ್ಕರಿಸಿಕೊಂಡಿದೆ. ಕಾರಾಗೃಹ ಸಿಬ್ಬಂದಿ ಬೆಚ್ಚಿಬೀಳುವಂತೆ ಮಾಡಿತು. ಶನಿವಾರ ತರೀಕೆರೆ ತಾಲ್ಲೂಕಿನ ನಾಲ್ಕುಮಂದಿ ಪೊಲೀಸ್ ಸಿಬ್ಬಂದಿಯಲ್ಲಿ ಕಾಣಿಸಿಕೊಳ್ಳುವ ಮೂಲಕ ಹೆಮ್ಮಾರಿ ಖಾಕಿಗೂ ಕಂಟಕವಾಗಿದೆ.

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.