Chithrakoota ಚಿಕಿತ್ಸಾಲಯದ ಪಾರ್ಶ್ವವಾಯು ಪುನರ್ವಸತಿ ವಿಭಾಗ ಉದ್ಘಾಟನೆ
ಊರಿಗೆ ಹೆಮ್ಮೆ: ಶಾಸಕ ಗಂಟಿಹೊಳೆ
Team Udayavani, Sep 6, 2024, 12:14 AM IST
ಕುಂದಾಪುರ: ಚಿತ್ರಕೂಟ ಆಯುರ್ವೇದ ಸಂಸ್ಥೆಯನ್ನು ಆರಂಭಿಸುವ ಮೂಲಕ ಆಲೂರಿಗೆ ಡಾ| ಬಾಯರಿ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಇದರ ಯಶಸ್ಸು ಕೇವಲ ಅವರಿಗೆ ಮಾತ್ರವಲ್ಲ, ಇಡೀ ಊರಿಗೆ ಸಲ್ಲುತ್ತದೆ. ಈ ಪುಟ್ಟ ಊರಿಗೆ ಚಿಕಿತ್ಸೆಗಾಗಿ ವಿದೇಶಿಗರು ಕೂಡ ಬರುತ್ತಿರುವುದು ಹೆಮ್ಮೆಯ ವಿಚಾರ. ಸಂಸ್ಥೆ ಇನ್ನಷ್ಟು ಪ್ರಗತಿ ಕಾಣಲಿ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಅವರು ಗುರುವಾರ ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪಾರ್ಶ್ವ ವಾಯು ಪುನರ್ವಸತಿ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದರು.
ಸಮ್ಮಾನ ಸ್ವೀಕರಿಸಿದ ಆಯುರ್ವೇದ ಗುರು ಡಾ| ರಘುರಾಮ ಶಾಸ್ತ್ರಿ ಮಾತನಾಡಿ, ಎಲ್ಲರೂ ಕನಸು ಕಾಣು ವುದು ಸಹಜ. ಆದರೆ ಅದನ್ನು ನನಸು ಮಾಡುವುದು ಮುಖ್ಯ. ಆ ಕಾರ್ಯವನ್ನು ಡಾ| ರಾಜೇಶ್ ಬಾಯರಿ ಮಾಡಿದ್ದಾರೆ ಎಂದರು.
ಗ್ರಾಮೀಣ ಭಾಗದಲ್ಲಿ ಈ ಸಂಸ್ಥೆಯನ್ನು ಕಟ್ಟಿ ಬೆಳೆಸಿರುವುದರ ಹಿಂದೆ ಅವರ ಅಪಾರ ಪರಿಶ್ರಮ, ಸೇವಾ ಮನೋಭಾವ ಇದೆ ಎಂದು ಉಡುಪಿ ಎಸ್ಡಿಎಂಸಿ ಆಯುರ್ವೇದ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ನಾಗರಾಜ್ ಪೂಜಾರಿ ಹೇಳಿದರು.
ಕುಂದಾಪುರದ ಉದ್ಯಮಿ ಅಭಿನಂದನ್ ಶೆಟ್ಟಿ ಮಾತನಾಡಿ, ನಗರದ ವ್ಯಾಮೋಹ ಹೆಚ್ಚುತ್ತಿರುವ ಈ ಕಾಲಘಟ್ಟದಲ್ಲೂ ಡಾ| ಬಾಯರಿಯವರು ತನ್ನೂರಿನಲ್ಲೇ ಆಯುರ್ವೇದ ಸಂಸ್ಥೆಯನ್ನು ಸ್ಥಾಪಿಸಿ, ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿರುವುದು ಖುಷಿಯ ವಿಚಾರ.ಚಿತ್ರಕೂಟದ ಮೂಲಕ ಆಲೂರು, ಚಿತ್ತೂರು ಗ್ರಾಮಗಳು ಎಲ್ಲೆಡೆ ಗುರುತಿಸು ವಂತಾಗಲಿ ಎಂದು ಹಾರೈಸಿದರು.
“ಲಾವಣ್ಯ’ ಕಾಸ್ಮೆಟಿಕ್ ವಿಭಾಗವನ್ನು ಆಲೂರು ಗ್ರಾ.ಪಂ. ಅಧ್ಯಕ್ಷ ರಾಜೇಶ್ ದೇವಾಡಿಗ ಉದ್ಘಾಟಿಸಿದರು. ಮಹಾ ಬಲ ಬಾಯರಿ ಉಪಸ್ಥಿತರಿದ್ದರು.
ವ್ಯವಸ್ಥಾಪಕ ನಿರ್ದೇಶಕ ಡಾ| ರಾಜೇಶ್ ಬಾಯರಿ ಪ್ರಸ್ತಾವಿಸಿ, ಚಿತ್ರಕೂಟದ ಚಿಕಿತ್ಸಾ ಪದ್ಧತಿ, ಸಂಸ್ಥೆ ನಡೆದು ಬಂದ ಹಾದಿ ಬಗ್ಗೆ ವಿವರಿಸಿದರು.ಸ್ಥಳೀಯ ಶಾಲಾ ಶಿಕ್ಷಕಿ ಶ್ರೀಮತಿ ಜಿ. ಹೆಗ್ಗಡೆ ಅವರನ್ನು ಸಮ್ಮಾನಿಸಲಾಯಿತು.
ಆದ್ಯಾ ಬಾಯರಿ ಪರಿಚಯಿಸಿ, ಡಾ| ಅನುಲೇಖಾ ಬಾಯರಿ ವಂದಿಸಿದರು. ಭಾಗ್ಯಶ್ರೀ ಐತಾಳ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ
Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.