ಕೃಷಿ ಚಟುವಟಿಕೆಗಿಲ್ಲ ಲಾಕ್‌ಡೌನ್‌ ಬಿಸಿ

ನಗರ ಪ್ರದೇಶ ಬಹುತೇಕ ಸ್ತಬ್ಧಹಳ್ಳಿಗಳಲ್ಲಿ ಗರಿಗೆದರಿದ ಚಟುವಟಿಕೆಮುಂದಿನ ಬೆಳೆ ಬೆಳೆಯಲು ಸಜ್ಜು

Team Udayavani, Apr 13, 2020, 11:14 AM IST

13-April-03

ಚಿತ್ರದುರ್ಗ: ಜೆ.ಎನ್‌.ಕೋಟೆ ಗ್ರಾಮದ ಜಮೀನೊಂದರಲ್ಲಿ ರೈತರು ಈರುಳ್ಳಿ ಸಂಸ್ಕರಣೆಯಲ್ಲಿ ತೊಡಗಿರುವ ದೃಶ್ಯ.

ಚಿತ್ರದುರ್ಗ: ಬರಸಿಡಿಲಿನಂತೆ ಬಂದಪ್ಪಳಿಸಿರುವ ಕೋವಿಡ್‌ 19 ವೈರಸ್‌ ಗೆ ಇಡೀ ಜಗತ್ತು ಬೆಚ್ಚಿ ಬಿದ್ದಿದೆ. ಬದುಕಿನ ಹಳಿ ತಪ್ಪುತ್ತಿರುವುದರಿಂದ ಜನ ಕೂಡಾ ಆತಂಕದಲ್ಲೇ ಕಾಲ ಕಳೆಯುತ್ತಿದ್ದಾರೆ. ಆದರೆ, ಈ ನಡುವೆ ಕೆಲ ಅಚ್ಚರಿ ಎಂಬಂತಹ ಸಂಗತಿಗಳು ಗ್ರಾಮೀಣ ಪ್ರದೇಶಗಳಲ್ಲಿ ಸಂಚಾರಿಸಿದಾಗ ಕಾಣ ಸಿಗುತ್ತಿವೆ.

ನಗರ ಪ್ರದೇಶಗಳು ಕೊರೊನಾ ಮಹಾಮಾರಿ ಕಾರಣಕ್ಕೆ ಬಿಕೋ ಎನ್ನುತ್ತಿದ್ದರೆ ಗ್ರಾಮೀಣ ಪ್ರದೇಶಗಳು ಸ್ವತ್ಛಂಧವಾಗಿವೆ. ನಗರ ಪ್ರದೇಶದ ಬದುಕು ಬಹುತೇಕ ಸ್ತಬ್ಧಗೊಂಡಿದ್ದರೆ, ಹಳ್ಳಿಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರುತ್ತಿವೆ. ಈಗಾಗಲೇ ತರಕಾರಿ ಮತ್ತಿತರೆ ಬೆಳೆದಿರುವ ರೈತರು ನಿರೀಕ್ಷಿತ ಬೆಳೆ, ಮಾರುಕಟ್ಟೆ ಸಿಗುತ್ತಿಲ್ಲ ಎಂಬ ಸಂಕಟದಲ್ಲಿದ್ದಾರೆ. ಆದರೆ, ಇಷ್ಟಕ್ಕೆ ದೃತಿಗೆಡದ ರೈತರು ಮುಂದಿನ ಬೆಳೆ ಬೆಳೆಯಲು ಸಜ್ಜಾಗುತ್ತಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ರೈತರು ಸಾಮಾಜಿಕ ಅಂತರ ಎನ್ನುವುದಕ್ಕಿಂತ ಸಾಮಾನ್ಯ ಬದುಕಿನಂತೆಯೇ ತಮ್ಮಷ್ಟಕ್ಕೆ ತಾವು ತಮ್ಮ ಕೆಲಸಗಳಲ್ಲಿ ಮಗ್ನರಾಗಿದ್ದಾರೆ. ಭತ್ತ, ರಾಗಿ ಮತ್ತಿತರೆ ಒಕ್ಕಣೆ, ಈರುಳ್ಳಿ ಸಂಸ್ಕರಣೆ, ಗೋಧಿ  ಒಕ್ಕಣೆ, ರಾಗಿ ಕೂಯ್ಲು, ಹೂ ಬಿಡಿಸುವುದು, ವಿಳ್ಯೆದೆಲೆ ಬಳ್ಳಿ ಪೋಷಣೆ ಸೇರಿ ಹಲವು ಕೆಲಸಗಳಲ್ಲಿ ರೈತರು ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಗ್ರಾಮಗಳಿಗೆ ಮರಳಿದವರು ಹೊರ ಬಾರದೆ ಅಂತರ ಕಾಯ್ದುಕೊಂಡಿದ್ದಾರೆ.

ಮುಂಗಾರಿಗೆ ಕಾಲಿಟ್ಟ ರೈತ: ನಗರ ಪ್ರದೇಶಗಳಲ್ಲಿ ಮನೆ ಸೇರಿರುವ ಜನ ಮುಂದೇನು, ಎಲ್ಲಿಗೆ ಬರುತ್ತೆ ಕೊರೊನಾ, ಯಾವಾಗ ಮುಗಿಯುತ್ತೆ ಲಾಕ್‌ ಡೌನ್‌, ನನ್ನ ಕೆಲಸ ಉಳಿಯುತ್ತಾ, ನನ್ನ ಸಂಬಳ ಬರುತ್ತಾ ಎಂಬ ನೂರಾರು ಚಿಂತೆಯಲ್ಲಿದ್ದಾರೆ. ಆದರೆ, ಹಳ್ಳಿಗಳಲ್ಲಿ ರೈತರು ಬೆಳಗ್ಗೆಯೇ ಮುದ್ದೆ ಮುರಿದು, ಮಧ್ಯಾಹ್ನಕ್ಕೂ ಒಂದಿಷ್ಟು ಕಟ್ಟಿಕೊಂಡು ಎತ್ತು, ಗಾಡಿಗಳ ಜತೆಗೆ ಜಮೀನು ಸೇರುತ್ತಿದ್ದಾರೆ. ಯುಗಾದಿ ನಂತರ ಹೊನ್ನಾರು ಪೂಜೆ ಮಾಡಿ, ಮುಂಗಾರಿಗೆ ಅಣಿಯಾಗುತ್ತಿದ್ದಾರೆ.

ಈಗಾಗಲೇ ಬಹುತೇಕ ಜಮೀನು ಹದಗೊಂಡಿದ್ದು ಇನ್ನೊಂದು ಮಳೆ ನಂತರ ಕೃಷಿ ಚಟುವಟಿಕೆ ಚುರುಕುಗೊಳ್ಳುತ್ತವೆ. ಕುಸಿದ ಬೆಲೆ ನಡುವೆಯೂ ಮೆಕ್ಕೆಜೋಳ ಮಾರಾಟ: ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಳೆಯುವ ರೈತರು ಸಾಮಾನ್ಯವಾಗಿ ಯುಗಾದಿ ಮುಗಿಯುವವರೆಗೆ ಮಾರುಕಟ್ಟೆಗೆ ತರದೆ ಹಾಗೇ ಇಟ್ಟಿರುತ್ತಾರೆ. ಯುಗಾದಿ ನಂತರ ಬೆಲೆ ಹೆಚ್ಚಾಗುತ್ತದೆ ಎನ್ನುವುದು ರೈತರ ಲೆಕ್ಕಾಚಾರ. ಆದರೆ, ಈ ವರ್ಷ ರೈತರ ಲೆಕ್ಕಾಚಾರ ತಲೆಕೆಳಗಾಗಿದೆ. ಸಂಗ್ರಹಿಸಿಟ್ಟಿದ್ದ ಮೆಕ್ಕೆಜೋಳಕ್ಕೆ ಬೆಲೆ ಸಿಗುತ್ತಿಲ್ಲ. ಆದರೂ, ಕೊರೊನಾ ಆತಂಕದಿಂದ ಎಲ್ಲವೂ ಬಂದ್‌ ಆಗುತ್ತಿರುವುದರಿಂದ ರೈತರು ಮುಂದೇನು ಎಂಬ ಆತಂಕದ ಕಾರಣಕ್ಕೆ ಸಿಕ್ಕಿದ ಬೆಲೆಗೆ ಮೆಕ್ಕೆಜೋಳ ಮಾರಾಟ ಮಾಡುತ್ತಿದ್ದಾರೆ.

ಈರುಳ್ಳಿ ಕುಯ್ಲಿಗೆ ಒತ್ತು: ಹಿಂಗಾರು ಹಂಗಾಮಿನಲ್ಲಿ ಬೆಳೆದ ಈರುಳ್ಳಿ ಬೆಳೆ ಕೂಯ್ಲಿಗೆ ಬಂದಿದೆ. ಈರುಳ್ಳಿಯನ್ನು ಕಿತ್ತು ಸಂಸ್ಕರಣೆ ಮತ್ತು ಮಾರಾಟಕ್ಕೆ ಇದು ಸಕಾಲ. ಆಗಾಗ ಮಳೆ ಬೀಳುತ್ತಿರುವುದರಿಂದ ಗೆಡ್ಡೆ ಹಾಳಾಗುವ ಆತಂಕವೂ ಕಾಡುತ್ತಿದೆ. ಹೀಗಾಗಿ, ರೈತರು ಈರುಳ್ಳಿ ಕೂಯ್ಲಿಗೆ ಒತ್ತು ನೀಡಿದ್ದಾರೆ. ಮುಂಗಾರು ಹಂಗಾಮಿನ ಕೊನೆಗೆ ಈರುಳ್ಳಿ ಬೆಲೆ ಗಗನಕ್ಕೆ ಏರಿದ್ದರಿಂದ ಬಿತ್ತನೆ ಹೆಚ್ಚಾಗಿತ್ತು. ಆದರೆ, ಈಗ ಬೆಲೆ ಕುಸಿತವಾಗಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಲಾಕ್‌ಡೌನ್‌ನಿಂದ ಕೃಷಿ ಚಟುವಟಿಕೆಗೆ ತೊಂದರೆಯಾಗಿಲ್ಲ. ಕೂಲಿ ಕಾರ್ಮಿಕರು ಕೆಲಸಕ್ಕೆ ಬರುತ್ತಿದ್ದಾರೆ. ಎಲ್ಲವೂ ಸಹಜವಾಗಿಯೇ ನಡೆಯುತ್ತಿವೆ. ಆಗಾಗ ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಗುಂಪು ಸೇರದಂತೆ ಎಚ್ಚರಿಸಿ ಹೋಗುತ್ತಿದ್ದಾರೆ.
ಬಸವರಾಜಪ್ಪ ಸಜ್ಜನ,
ಜೆ.ಎನ್‌. ಕೋಟೆ ರೈತ ತಿಪ್ಪೇಸ್ವಾಮಿ ನಾಕೀಕೆರೆ

ಟಾಪ್ ನ್ಯೂಸ್

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

4

Karkala: ಈ ರಸ್ತೆಯಲ್ಲಿ ಬಸ್‌ ತಂಗುದಾಣಗಳೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.