![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 16, 2022, 5:40 AM IST
ಉಡುಪಿ: ಶ್ರೀಕೃಷ್ಣ ಮಠದಲ್ಲಿ ವಾರ್ಷಿಕವಾಗಿ ನಡೆಯುವ ಚೂರ್ಣೋತ್ಸವ ಹಾಗೂ ಅವಭೃಥ ಸ್ನಾನ ಶನಿವಾರ ಪರ್ಯಾಯ ಪೀಠದ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯಿತು.
ಭಾವಿ ಪರ್ಯಾಯ ಮಠಾಧೀಶ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು, ಶ್ರೀ ವಿದ್ಯಾ ರಾಜೇಶ್ವರ ತೀರ್ಥರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾ ವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು. ಬ್ರಹ್ಮರಥದಲ್ಲಿ ಕೃಷ್ಣ ಮುಖ್ಯಪ್ರಾಣ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಪರ್ಯಾಯ ಶ್ರೀಪಾದರು ಮಧ್ವ ಮಂಟಪದಲ್ಲಿ ತೊಟ್ಟಿಲು ಪೂಜೆ ನೆರವೇರಿಸಿ ಅಷ್ಟ ಮಠಾಧೀಶರಿಗೆ ಗಂಧಾದ್ಯುಪಚಾರಗಳನ್ನು ಮಾಡಿ ಗೌರವಿಸಿದರು.
ಪರ್ಯಾಯ ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಯಿತು. ಅನಂತರ ಮಧ್ವಸರೋವರದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಉತ್ಸವ ಮೂರ್ತಿಗಳಿಗೆ ಅವಭೃಥ ನಡೆಯಿತು.
ಇದನ್ನೂ ಓದಿ:ಭಾರತದ ಪ್ರಸಿದ್ಧ ಮೋಟಾರು ವಾಹನ ಸಂಸ್ಥೆಯಾದ ಮಾರುತಿ ಕಾರುಗಳ ಬೆಲೆ ಶೇ.4.3 ಏರಿಕೆ
ಅದಮಾರು ಮಠ ಪರ್ಯಾಯದ ಕೊನೆಯ ಉತ್ಸವ ಇದಾಗಿದ್ದು ಸೋಮವಾರ ಮಧ್ಯರಾತ್ರಿ ಬಳಿಕ ಮಂಗಳವಾರ ಬೆಳಗ್ಗೆ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಪರ್ಯಾಯ ಉತ್ಸವ ನಡೆಯಲಿದೆ.
ಗರುಡ ಪ್ರದಕ್ಷಿಣೆ
ಚೂರ್ಣೋತ್ಸವದಂದು ಗರುಡ ಆಗಸದಲ್ಲಿ ಪ್ರದಕ್ಷಿಣೆ ಬರುತ್ತದೆ ಎಂಬ ನಂಬಿಕೆ ಇದೆ. ಅದರಂತೆ ಶ್ರೀಕೃಷ್ಣನಿಗೆ ಬ್ರಹ್ಮರಥೋತ್ಸವ ನಡೆಯುವಾಗ ಗರುಡನೂ ಆಗಸದಲ್ಲಿ ಬಂದು ಪ್ರದಕ್ಷಿಣೆ ಹಾಕಿದ.
ಉರುಳುಸೇವೆ
ರಥ ಮುಂದೆ ಸಾಗಿದಂತೆ ಅದರ ಹಿಂದೆ ಕೆಲವು ಭಕ್ತರು ಉರುಳುಸೇವೆ ನಡೆಸಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.