ಸಾವಿರ ಗ್ರಾಮಗಳಲ್ಲಿ “ಸ್ವಚ್ಛಮೇವ ಜಯತೆ’ ಆಂದೋಲನ


Team Udayavani, Jun 10, 2019, 3:08 AM IST

savira

ಬೆಂಗಳೂರು: ರಾಜ್ಯದ ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ “ಸ್ವಚ್ಛಮೇವ ಜಯತೆ’ಗೆ ಕಾಲ ಕೂಡಿ ಬಂದಿದೆ. 2019-20ನೇ ಸಾಲಿನ ಬಜೆಟ್‌ ಘೋಷಣೆಯನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ “ಸ್ವಚ್ಛ ಭಾರತ-ಸ್ವಸ್ಥ ಭಾರತ’ ನಿರ್ಮಾಣದ ಗುರಿಗೆ ಪೂರಕವಾಗಿ ಈಗಾಗಲೇ ಕರ್ನಾಟಕ ಸಂಪೂರ್ಣ “ಬಯಲು ಬಹಿರ್ದೆಸೆ ಮುಕ್ತ’ ರಾಜ್ಯ ಎಂದು ಘೋಷಿಸಿಕೊಂಡಿದೆ. ಅದರ ಮುಂದಿನ ಹೆಜ್ಜೆಯಾಗಿ ರಾಜ್ಯವನ್ನು ಸ್ವಚ್ಛ ಮತ್ತು ಸುಂದರವನ್ನಾಗಿ ಮಾಡುವ ವಿಶಾಲ ದೃಷ್ಠಿಕೋನದಿಂದ ಗ್ರಾಮೀಣ ಭಾಗದ ಘನ ಮತ್ತು ದ್ರವ ತ್ಯಾಜ್ಯದ ಸಮರ್ಪಕ ನಿರ್ವಹಣೆಯ ಉದ್ದೇಶವನ್ನು ಈ “ಸ್ವಚ್ಛಮೇವ ಜಯತೆ’ ಕಾರ್ಯಕ್ರಮ ಹೊಂದಿದೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು 2019ರ ಫೆ.8ರಂದು ಮಂಡಿಸಿದ ಬಜೆಟ್‌ನಲ್ಲಿ ಘೋಷಿಸಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಈ “ಸ್ವಚ್ಛಮೇವ ಜಯತೆ’ ಕಾರ್ಯಕ್ರಮಕ್ಕೆ ರಾಜ್ಯಮಟ್ಟದಲ್ಲಿ ಜೂನ್‌ 11ರಂದು ಚಾಲನೆ ನೀಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಇದರ ಜತೆಗೆ ಈಗಾಗಲೇ ಜಾರಿಯಲ್ಲಿರುವ “ಜಲಾಮೃತ’ ಯೋಜನೆಯಡಿಯಲ್ಲಿ ರಾಜ್ಯದ 6 ಸಾವಿರ ಗ್ರಾಪಂಗಳಲ್ಲಿ 30 ಲಕ್ಷ ಸಸಿಗಳನ್ನು ನೆಡುವ ವಿಶೇಷ ಕಾರ್ಯಕ್ರಮಕ್ಕೂ ಇದೇ ವೇಳೆ ಚಾಲನೆ ನೀಡಲಾಗುತ್ತಿದೆ. ಸ್ವಚ್ಛಮೇವ ಜಯತೆ ಮತ್ತು ಜಲಾಮೃತ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳನ್ನು ಜೂ.11ರಿಂದ ಜುಲೈ 11ರವರೆಗೆ ಅಭಿಯಾನದ ರೂಪದಲ್ಲಿ ಅನುಷ್ಠಾನಕ್ಕೆ ತರಲು ಇಲಾಖೆ ಕ್ರಿಯಾ ಯೋಜನೆಯನ್ನು ರೂಪಿಸಿದೆ.

ಏನಿದು ಸ್ವಚ್ಛಮೇವ ಜಯತೆ: ಹಳ್ಳಿಗಳಲ್ಲಿ ದಿನೇ ದಿನೆ ಪ್ಲಾಸ್ಟಿಕ್‌, ಗಾಜು, ಬಾಟಲ್‌ ಇತ್ಯಾದಿ ಘನ ತ್ಯಾಜ್ಯಗಳ ಶೇಖರಣೆ ಹೆಚ್ಚಾಗುತ್ತಿದೆ. ಇದು ಗ್ರಾಮೀಣ ಜನತೆಯ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಗ್ರಾಮಗಳ ಸ್ವಚ್ಛತೆ ಹಾಗೂ ಸೌಂದರ್ಯ ನಶಿಸುತ್ತಿದೆ. ನಗರ ಪ್ರದೇಶಗಳಿಗೆ ಹತ್ತಿರದಲ್ಲಿರುವ ಗ್ರಾಮಗಳಲ್ಲಿ ಕಸದ ಸಮಸ್ಯೆ ಇನ್ನೂ ಹೆಚ್ಚಾಗುತ್ತಿದೆ. ಅಲ್ಲದೇ ನಗರದ ಕಸವನ್ನು ಗ್ರಾಮಗಳಲ್ಲಿ ತಂದು ಹಾಕುವ ಪ್ರವೃತ್ತಿ ಬೆಳೆಯುತ್ತಿದೆ.

ಈ ಸಮಸ್ಯೆಗೆ ಪರಿಹಾರ ಒದಗಿಸುವ ಅವಶ್ಯಕತೆಯಿದೆ. ಘನ ತ್ಯಾಜ್ಯ ವಿಲೇವಾರಿಯಲ್ಲಿ ಒಣ ಮತ್ತು ಹಸಿ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ, ಒಣ ಕಸವನ್ನು ಮರು ಬಳಕೆ ಮಾಡುವುದು ಹಾಗೂ ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವ ವ್ಯವಸ್ಥೆ ರೂಪಿಸಲು 2019-20ನೇ ಸಾಲಿನಲ್ಲಿ “ಸ್ವಚ್ಛಮೇವ ಜಯತೆ’ ಕಾರ್ಯಕ್ರಮದಡಿ ಆಯ್ದ ಸಾವಿರ ಗ್ರಾಪಂಗಳಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಇದಕ್ಕಾಗಿ 2 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ.

6 ಸಾವಿರ ಗ್ರಾಪಂಗಳಲ್ಲಿ 30 ಲಕ್ಷ ಸಸಿ: 2019ನೇ ವರ್ಷವನ್ನು “ಜಲ ವರ್ಷ’ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಜಲ ಸಾಕ್ಷರತೆ, ನೀರಿನ ಮಿತ ಬಳಕೆ, ಸಾಂಪ್ರದಾಯಿಕ ಜಲ ಮೂಲಗಳ ಸಂರಕ್ಷಣೆ ಮತ್ತು ಪುನರುಜ್ಜೀವನ ಹಾಗೂ ಹಸಿರೀಕರಣಕ್ಕೆ ಒತ್ತು ಕೊಡುವ “ಜಲಾಮೃತ’ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದ್ದು, ಅದನ್ನು 2019ರ ಫೆ.28ರಂದು ಜಾರಿಗೆ ತರಲಾಗಿದೆ.

ಈಗ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ “ಜಲಾಮೃತ’ ಯೋಜನೆಯಡಿ ರಾಜ್ಯದ 6,021 ಗ್ರಾಪಂಗಳಲ್ಲಿ ಪ್ರತಿ ಗ್ರಾ.ಪಂ.ನಲ್ಲಿ 500ರಂತೆ ರಾಜ್ಯಾದ್ಯಂತ 30 ಲಕ್ಷ ಸಸಿಗಳನ್ನು ನೆಡುವ, 20 ಸಾವಿರ ಚೆಕ್‌ ಡ್ಯಾಂ ನಿರ್ಮಿಸುವ ಕಾರ್ಯಕ್ಕೆ ಜೂ.11ರಿಂದ ಚಾಲನೆ ನೀಡಲು ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ಧರಿಸಿದೆ. ಜಲಾಮೃತ ಯೋಜನೆಗೆ 500 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ.

ಗ್ರಾಮೀಣ ಭಾಗದಲ್ಲಿ ತ್ಯಾಜ್ಯ ವಿಲೇವಾರಿಯನ್ನು ಪರಿಣಾಮಕಾರಿಯಾಗಿ ಮತ್ತು ಸಮರ್ಪಕವಾಗಿ ನಿರ್ವಹಿಸಿ ಅದನ್ನು ಮರು ಬಳಕೆ ಮಾಡುವ ಉದ್ದೇಶದ “ಸ್ವಚ್ಛಮೇವ ಜಯತೆ’ ಕಾರ್ಯಕ್ರಮಕ್ಕೆ ಜೂ.11ರಂದು ಚಾಲನೆ ನೀಡಲಾಗುತ್ತಿದೆ. ಇದೇ ವೇಳೆ, “ಜಲಾಮೃತ’ ಯೋಜನೆಯಡಿ 30 ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಅಲ್ಲದೆ, ಜಲ ಸಂರಕ್ಷಣಾ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.
-ಎಲ್‌.ಕೆ.ಅತೀಕ್‌, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.