Time: ಮಿಂಚಿ ಹೋದ ಕಾಲಕ್ಕೆ ಚಿಂತಿಸಿ ಫಲವಿಲ್ಲ…:ಗಡಿಯಾರದ ನಡಿಗೆ!

ಕಾಲ ಎನ್ನುವುದು ಎಲ್ಲರಿಗೂ ಒಂದು ಅವಕಾಶವನ್ನು ನೀಡುತ್ತದೆ

Team Udayavani, Nov 29, 2023, 11:21 AM IST

5-time

ಎಲ್ಲರಿಗೂ ತಿಳಿದಿರುವಂತೆ ಸಮಯವು ಯಾರಿಗೂ ಕಾಯುವುದಿಲ್ಲ. ಮತ್ತು ಅದು ಹಿಂದಕ್ಕೂ ಬರುವುದಿಲ್ಲ. ಹಾಗಾಗಿ ಸಮಯಕ್ಕೆ ಸರಿಯಾಗಿ ನಾವು ಸಾಗಬೇಕು. “ನಾವು ಸಮಯವನ್ನು ಗೌರವಿಸದಿದ್ದರೆ, ಸಮಯವು ನಮ್ಮನ್ನು ಗೌರವಿಸುವುದಿಲ್ಲ”. ಸಮಯಕ್ಕೆ ಸರಿಯಾಗಿ ಏಳುವುದು, ಊಟ ಮಾಡುವುದು, ಓದುವುದು ಮತ್ತು ನಿದ್ದೆ ಮಾಡುವುದು ಹೀಗೆ ಎಲ್ಲಾ ಕೆಲಸವನ್ನು ಮಾಡುವುದೇ ಉತ್ತಮ.

“ಕಾಲ ಕೆಟ್ಟಿತೆಂದು ಜನರು ಹೇಳುತ್ತಾರೆ. ಆದರೆ, ಕಾಲ ಕೆಡುವುದಿಲ್ಲ, ಕೆಡುವುದು ಜನರ ನಡತೆ ಮತ್ತು ಆಚಾರ-ವಿಚಾರ ಮಾತ್ರ. ಎಲ್ಲರೂ ಕಾಲಕ್ಕೆ ತಕ್ಕಂತೆ ಸಾಗಬೇಕು ಮತ್ತು ಬದಲಾಗಬೇಕು. ಸಮಯ ಬರುತ್ತದೆ ಹಾಗೇ ಹೋಗುತ್ತೆ ಯಾರಿಗಾಗಿಯೂ ನಿಲ್ಲುವುದಿಲ್ಲ. ಇದನ್ನು ಯಾರಿಂದಲೂ ಮಾರಲು ಸಾಧ್ಯವಿಲ್ಲ ಹಾಗೇ ಖರೀದಿಸಲೂ ಸಾಧ್ಯವಿಲ್ಲ. ಕಚೇರಿಗಳಲ್ಲಿ ಕೆಲಸ ಮಾಡುವ ವ್ಯಕ್ತಿಯಾಗಲೀ ಅಥವಾ ಮನೆಯಲ್ಲಿ ಕೆಲಸ ಮಾಡುವ ವ್ಯಕ್ತಿಗಾಗಲೀ ಎಲ್ಲರಿಗೂ ಒಂದೇ ಸಮಯ ಅದುವೇ ಜೀವನದಲ್ಲಿ ಬಹಳ ಮುಖ್ಯವಾಗಿರುತ್ತದೆ. ಇದರ ಬಗ್ಗೆ ತಿಳಿದವರು ಎಂದಿಗೂ ಜೀವನದಲ್ಲಿ ಮುಂದೆ ಸಾಗುತ್ತಾರೆ.

“ಮಿಂಚಿ ಹೋದ ಕಾಲಕ್ಕೆ ಚಿಂತಿಸಿ ಫಲವಿಲ್ಲ”ಎಂಬ ಗಾದೆ ನೂರಕ್ಕೆ ನೂರು ಸತ್ಯ. ಹಾಗೆಯೇ ಎಲ್ಲರೂ ಕೂಡ ತಮ್ಮ ಜೀವನದ ಪಯಣಕ್ಕಾಗಿ ಮನಸ್ಸಿನ ಒಂದು ವೇಳಾಪಟ್ಟಿಯನ್ನು ನಿರ್ಮಿಸಿಕೊಂಡಿದ್ದಾರೆ. ಅದಕ್ಕೆ ಅನುಗುಣವಾಗಿ ದೈನಂದಿನ ಜೀವನ ನಡೆಯುತ್ತದೆ.

ವಿದ್ಯಾರ್ಥಿಯ ಜೀವನದಲ್ಲಿ ಸಮಯ ಹೇಗೆ ಮಹತ್ವ ಎಂದರೆ, ಎಲ್ಲಾ ವಿದ್ಯಾರ್ಥಿಗಳ ಜೀವನದಲ್ಲಿಯೂ ಇದರ ಮೌಲ್ಯವು ತುಂಬಾ ಹೆಚ್ಚಿರುತ್ತದೆ. ಹೇಗೆಂದರೆ ಈ ವಿದ್ಯಾರ್ಥಿ ಜೀವನದಲ್ಲಿ ಸಮಯಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ತಮ್ಮ ಸರಿ ಮತ್ತು ತಪ್ಪುಗಳನ್ನು ಗುರುತಿಸಿ ತಿದ್ದಿಕೊಳ್ಳಲು ಇದು ಅವಶ್ಯವಿದೆ. ವಿದ್ಯಾರ್ಥಿ ಎಂದರೆ ಸಮಯಪಾಲನೆ ಮತ್ತು ಶಿಸ್ತುಪಾಲನೆಯನ್ನು ಮಾಡುವವರು ಎಂದರ್ಥ. ವಿದ್ಯಾರ್ಥಿಗಳು ಸಮಯಪಾಲನೆಯಿಂದ ಅವರ ಜೀವನದ ಯಶಸ್ಸನ್ನು ಕಾಣಬಹುದು.

ಇದರ ಮಹತ್ವವನ್ನು ತಿಳಿದಿರುವ ಯಾವುದೇ ವ್ಯಕ್ತಿಯಾದರೂ ತನ್ನ ಕೆಲಸವನ್ನು ಎಂದಿಗೂ ಮುಂದೂಡಲು ಬಯಸುವುದಿಲ್ಲ. ಹಾಗೆಯೇ ಯಶಸ್ಸಿನ ದಾರಿಯಲ್ಲಿ ಸಾಗುತ್ತಾನೆ. “ಅದೃಷ್ಟವಂತ ಎಂದರೆ ಅವಕಾಶವನ್ನು ಪಡೆಯುವವನು, ಬುದ್ದಿವಂತ ಎಂದರೆ ಅವಕಾಶವನ್ನು ಸೃಷ್ಟಿಸಿಕೊಳ್ಳುವವನು.”ಕಾಲ ಎನ್ನುವುದು ಎಲ್ಲರಿಗೂ ಒಂದು ಅವಕಾಶವನ್ನು ನೀಡುತ್ತದೆ. ಅದರಲ್ಲಿ ನಾವು ವಿಜಯವನ್ನು ಅಥವಾ ಸೋಲನ್ನು ಕಾಣಬಹುದು. ಕೆಲವು ಅದ್ಭುತವಾದ ಅವಕಾಶವನ್ನು ಒಮ್ಮೆ ಕಳೆದುಕೊಂಡರೆ ಮತೊಮ್ಮೆ  ಆ ಅವಕಾಶ ಮರಳಿಬಾರದು.

“ಸಮಯವು ಯಾವುದೇ ಆರಂಭ ಅಥವಾ ಅಂತ್ಯವನ್ನು ಹೊಂದಿರದ ಅದ್ಬುತ ವಿಷಯವಾಗಿದೆ.”

– ನಾಗಮಣಿ. ಈ

ಪ್ರಥಮ ಪತ್ರಿಕೋದ್ಯಮ

ಎಂಜಿಎಂ ಕಾಲೇಜು ಉಡುಪಿ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganapa

Ganesha Festival: ಇಂದು ಗಣೇಶ ಚತುರ್ಥಿ; ವಿಘ್ನ ನಿವಾರಕ ವಿನಾಯಕ ವಿಶ್ವನಾಯಕನೂ ಹೌದು

ETTINAHOLE

Ettinahole Drinking Water Project: ದಶಕದ ಬಳಿಕ ಎತ್ತಿನಹೊಳೆ ಯೋಜನೆ ಸಾಕಾರ

Gouri-Puja-

Gowri Festival: ಇಂದು ಗೌರಿ ತದಿಗೆ: ಭಾದ್ರಪದ ಶುಕ್ಲ ತೃತೀಯಾ ಹರಿತಾಲಿಕಾ ವ್ರತಂ

ETTINAHOLE1

Ettinahole Project: ಬತ್ತಿದ ಕನಸುಗಳಿಗೆ ಎತ್ತಿನಹೊಳೆ ಜೀವಜಲ ಧಾರೆ!

10-uv-fusion

Teacher’s Day: ಆದರ್ಶ ಬದುಕಿಗೆ ದಾರಿ ತೋರುವ ಗುರು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.