CM Siddaramaiah ಯಾವುದಕ್ಕೂ ಜಗ್ಗುವುದಿಲ್ಲ: ಸಹೋದರ ಸಿದ್ದೇಗೌಡ
Team Udayavani, Aug 20, 2024, 12:58 AM IST
ಮೈಸೂರು: ನಮ್ಮಣ್ಣ ಯಾವ ತಪ್ಪೂ ಮಾಡಿಲ್ಲ. ಅವರು ರಾಜೀನಾಮೆ ಕೊಡುವುದೂ ಇಲ್ಲ. ಅವ್ನು ಯಾವದಕ್ಕೂ ಜಗ್ಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಹೇಳಿದರು.
ಮುಡಾ ಹಗ ರಣ ಸಂಬಂಧ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ-ಜೆಡಿಎಸ್ನವರ ಕೈವಾಡದಿಂದ ರಾಜ್ಯಪಾಲರು ಹೀಗೆ ಮಾಡ್ತಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಹೇಳಿದಂತೆ ಕುಣಿಯುತ್ತಿದ್ದಾರೆ ಎಂದು ವಿರುದ್ಧ ಕಿಡಿಕಾರಿದರು.
ಅಷ್ಟು ಸುಲಭದಲ್ಲಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಅವ ತಪ್ಪು ಮಾಡಿದ್ದರೆ ರಾಜೀನಾಮೆ ಕೊಡುವ, ತಪ್ಪೇ ಮಾಡದಿದ್ದ ಮೇಲೆ ಯಾಕ್ ಕೊಡ್ತಾರೆ. ಅವರು ತಪ್ಪೇ ಮಾಡಿ ಲ್ವಲ್ಲ. 108 ಸಲ ನಾ ತಪ್ಪು ಮಾಡಿಲ್ಲ, ನಾ ಯಾರಿಗೂ ಜ ಗ್ಗೋದಿಲ್ಲ ಎಂದು ಅವರೇ ಹೇಳಿದ್ದಾರಲ್ಲ. ತಪ್ಪು ಮಾಡಿದ್ದರೆ ರಾಜೀನಾಮೆ ಕೇಳಲಿ. ಅದು ಬಿಟ್ಟು ರಾಜೀ ನಾಮೆ ಕೊಡಿ ಅಂದ್ರೆ ಹೆಂಗೆ ಎಂದು ಪ್ರಶ್ನಿಸಿದರು.
ನಮ್ಮ ತಂದೆ ಮಾಡಿರುವುದರಲ್ಲಿ ತಪ್ಪಿಲ್ಲ ಎಂಬುದು ನಮ್ಮ ತಾಯಿಯವರಿಗೂ ಗೊತ್ತಿದೆ. ಆದರೂ ನನ್ನ ವಿಚಾರದಲ್ಲಿ ಇವರ ಮೇಲೆ ಆರೋಪ ಬರುತ್ತಿದೆಯಲ್ಲ ಎಂಬ ಬೇಸರವೂ ಇದೆ. ಕಾನೂನು ಮೂಲಕ ಹೋರಾಟ ಮಾಡಿ ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. -ಡಾ. ಯತೀಂದ್ರ ಸಿದ್ದರಾಮಯ್ಯ, ಸಿಎಂ ಪುತ್ರ, ಎಂಎಲ್ಸಿ
ಪ್ರತಿಭಟನೆಗೆ ಬರದಿದ್ದರೆ ಗ್ಯಾರಂಟಿ ಸ್ಥಗಿತ: ಡಂಗೂರ!
ನಂಜನಗೂಡು: ಪ್ರತಿಭಟನೆಗೆ ಬಾರದಿದ್ದರೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ವಿಚಾರವಾಗಿ ಡಂಗೂರ ಸಾರಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸೋಮವಾರ ವೈರಲ್ ಆಗಿದೆ.
ನಂಜನಗೂಡು ತಾಲೂಕಿನ ಚಿನ್ನದಗುಡಿ ಹುಂಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮಂಗಳವಾರ ಪಟ್ಟಣದಲ್ಲಿ ರಾಜ್ಯಪಾಲರ ವಿರುದ್ಧದ ಪ್ರತಿಭಟನೆಗೆ ಬಾರದಿದ್ದರೆ ಗ್ಯಾರಂಟಿಗಳನ್ನು ನಿಲ್ಲಿಸಲಾಗುತ್ತದೆ ಎಂದು ಡಂಗೂರ ಸಾರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದೆ. ಕಾಂಗ್ರೆಸ್ ನಾಯಕರು ಜನರಿಗೆ ಗ್ಯಾರಂಟಿಗಳನ್ನು ನಿಲ್ಲಿಸುವ ಬೆದರಿಕೆಯೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಪ್ರತಿಭಟನೆ ಮಾಡಲು ಕರೆತರುತ್ತಿದ್ದಾರೆ ಎಂದು ಮುಖಂಡರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.