ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಮಾರುಕಟ್ಟೆಯಲ್ಲಿ 70 ರೂ. ತಲುಪಿದ ಎಳನೀರು ದರ

Team Udayavani, Oct 16, 2024, 5:07 PM IST

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಉದಯವಾಣಿ ಸಮಾಚಾರ
ಮಂಡ್ಯ: ತೆಂಗು ಬೆಳೆಯಲ್ಲಿ ಏರಿಳಿತವಾದ ಹಿನ್ನೆಲೆಯಲ್ಲಿ ಎಳನೀರು ಪೂರೈಕೆ ಕುಸಿತವಾಗಿದ್ದು ಇದರ ಪರಿಣಾಮ ಎಳನೀರಿನ ಬೆಲೆ ಗಗನಕ್ಕೇರಿದೆ. ಜತೆಗೆ ಮೊದಲ ಬಾರಿಗೆ ರೈತರಿಗೆ ಬಂಪರ್‌ ದರ ದೊರೆಯುತ್ತಿದೆ. ಕಳೆದ ಸಾಲಿನ ಭೀಕರ ಬರ ಹಾಗೂ ಹೆಚ್ಚು
ಬಿಸಿಲಿನಿಂದ ಕೂಡಿದ ವಾತಾವರಣದ ಹಿನ್ನೆಲೆಯಲ್ಲಿ ತೆಂಗಿನ ಬೆಳೆ ಮೇಲೆ ಸಾಕಷ್ಟು ಹಾನಿಯಾಗಿತ್ತು.

ಇದರಿಂದ ನೀರಿನ ಕೊರತೆ ಉಂಟಾಗಿ ಎಳನೀರು ಬೆಳೆ ಸಿಗದಂತಾಗಿದೆ. ಎಳನೀರಿಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದರವೂ ಹೆಚ್ಚಾಗಿದೆ. ಮಂಡ್ಯದಲ್ಲಿ ದಲ್ಲಾಳಿಗಳು ರೈತರಿಂದ 36 ರೂ.ಗೆ ಎಳನೀರು ಖರೀದಿಸುತ್ತಿದ್ದಾರೆ. ಈ ಹಿಂದೆ ಬೆಳೆಗಾರರಿಂದ
ದಲ್ಲಾಳಿಗಳು ಖರೀದಿಸುತ್ತಿರುವ ದರ 20 ರೂ. ಆಜುಬಾಜಿನಲ್ಲೇ ಇತ್ತು. ಇದೇ ಮೊದಲ ಬಾರಿ 33, 35 ಮತ್ತು 36 ರೂ. ಕೊಟ್ಟು ರೈತರಿಂದ ಎಳೆನೀರು ಖರೀದಿಸಲಾಗುತ್ತಿದೆ. ಇದು ಸದ್ಯದ ಮಟ್ಟಿಗೆ ದಾಖಲೆಯಾಗಿದೆ.

ಮಂಡ್ಯದಲ್ಲಿ ಸೋಮವಾರ ಒಂದು ಎಳನೀರಿಗೆ 43 ರೂ. ಇತ್ತು. ಉತ್ತಮ ಗುಣಮಟ್ಟದ ಎಳನೀರು 50 ರೂ. ಇದ್ದರೆ, ಸ್ವಲ್ಪ ಸಣ್ಣ ಗಾತ್ರವಿರುವ ಎಳನೀರಿಗೆ 35 ರೂ. ಇದೆ. ಅದರಂತೆ ಚುಕ್ಕೆ ಇರುವ ಎಳನೀರು 15ರಿಂದ 20 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಒಂದು ಎಳನೀರಿಗೆ 70 ರೂ. ಇದ್ದರೆ, ಹೊರ ರಾಜ್ಯಗಳಿಗೆ ಸರಬರಾಜಾಗುವ ಎಳನೀರು 100 ರೂ. ಗಡಿ ದಾಟಿದೆ.

ಇಡೀ ಏಷ್ಯಾದಲ್ಲೇ ಅತಿ ದೊಡ್ಡ ಮಾರುಕಟ್ಟೆಯಾಗಿರುವ ಮದ್ದೂರು ಎಳನೀರು ಮಾರುಕಟ್ಟೆಯಲ್ಲೂ ಎಳನೀರು ಪೂರೈಕೆ ಇಳಿಕೆಯಾಗಿದೆ. ಎಳನೀರಿಗೆ ಹೊರ ರಾಜ್ಯಗಳಲ್ಲಿ ಬೇಡಿಕೆ ಹೆಚ್ಚಿರುವುದರಿಂದ ಪೂರೈಸಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಇರುವ ಎಳನೀರು ಕೊಯ್ಲು ಮಾಡಿ ಪೂರೈಸಲಾಗಿದೆ. ಆದರೂ ಬೇಡಿಕೆ ಮಾತ್ರ ನಿಂತಿಲ್ಲ.

ಹೊರ ರಾಜ್ಯಗಳಿಗೆ ಸರಬರಾಜು: ಜಿಲ್ಲೆಯ ಮದ್ದೂರು ಹಾಗೂ ಕೆ.ಆರ್‌.ಪೇಟೆ ಎಳನೀರು ಮಾರುಕಟ್ಟೆಯಿಂದ ದೇಶದ ದೆಹಲಿ, ಪಂಜಾಬ್‌, ಹರಿಯಾಣ, ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತಿದೆ. ಆದರೆ ಬೇಡಿಕೆಗೆ ತಕ್ಕಂತೆ ಎಳನೀರು ಸಿಗುತ್ತಿಲ್ಲ. ಮಳೆಗಾಲವಿದ್ದರೂ ಎಳನೀರಿಗೆ ಬೇಡಿಕೆ ಕಡಿಮೆಯಾಗಿಲ್ಲ. ಮದ್ದೂರು ಹಾಗೂ ಕೆ.ಆರ್‌.ಪೇಟೆ ಎಳನೀರು ಮಾರುಕಟ್ಟೆಗಳಿಗೆ ಹೊರ ಜಿಲ್ಲೆಗಳಿಂದಲೂ ಎಳನೀರು ಬರುತ್ತಿದೆ. ಎಳನೀರಿಗೆ ಬೇಡಿಕೆ ಹೆಚ್ಚಾಗಿದ್ದು ದಲ್ಲಾಳಿಗಳು ಪ್ರತಿದಿನ ರೈತರ ತೆಂಗಿನ ತೋಟಗಳಿಗೆ ಲಗ್ಗೆ ಇಡುತ್ತಿದ್ದಾರೆ. ಆದರೂ ಬೇಡಿಕೆ ತಕ್ಕಂತೆ ಪೂರೈಸಲಾಗುತ್ತಿಲ್ಲ.

ಇದರಿಂದ ದಲ್ಲಾಳಿಗಳು ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ತುಮ ಕೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಎಳನೀರು ತಂದು ಹೊರ ರಾಜ್ಯಗಳಿಗೆ ಪೂರೈಸಲಾಗುತ್ತಿದೆ ಎಂದು ವರ್ತಕರೊಬ್ಬರು ತಿಳಿಸಿದರು.

ಡಿಸೆಂಬರ್‌ಗೆ ದರ ಇಳಿಕೆ?
ಕಳೆದ ಸಾಲಿನಲ್ಲಿ ಮಳೆ ಬಾರದೆ ಜಿಲ್ಲೆಯು ಭೀಕರ ಬರಗಾಲಕ್ಕೆ ತುತ್ತಾಗಿತ್ತು. ಇದರಿಂದ ನೀರಿನ ಕೊರತೆ ಉಂಟಾಗಿ ಸಾಕಷ್ಟು ಬೆಳೆ ಒಣಗಿ ನಷ್ಟ ಎದುರಾಗಿತ್ತು.ಆಗ ಮಳೆ ಬಿದ್ದಿದ್ದರೆ ಉತ್ತಮ ಫಲ ಸಿಗುತ್ತಿತ್ತು. ಆದರೆ ಈಗ ಮಳೆ ಬೀಳುತ್ತಿದ್ದರೂ ತೆಂಗಿನ ಫಸಲು ಉತ್ತಮವಾಗಿಲ್ಲ. ಮುಂದಿನ ಡಿಸೆಂಬರ್‌ ವೇಳೆಗೆ ಹೆಚ್ಚು ಎಳನೀರು ಸಿಗಲಿದೆ ಎಂದು ರೈತರೊಬ್ಬರು ತಿಳಿಸಿದರು.

ಬೇಸಿಗೆ ಪರಿಣಾಮ ರೈತರ ತೆಂಗಿನ ತೋಟಗಳಲ್ಲಿ ಎಳನೀರು ಸಿಗುತ್ತಿಲ್ಲ. ಎಳನೀರಿಗೆ ಹೊರರಾಜ್ಯಗಳಲ್ಲೂ ಬೇಡಿಕೆ ಹೆಚ್ಚಿದ್ದರೂ ಅಪೇಕ್ಷೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಡಿಸೆಂಬರ್‌ ವೇಳೆಗೆ ಎಳನೀರು ಯಥೇಚ್ಛವಾಗಿ ಮಾರುಕಟ್ಟೆಗೆ ಬರಲಿದೆ. ಆಗ ದರ ಕಡಿಮೆಯಾಗಲಿದೆ.
●ರವಿ, ಚೌಡೇನಹಳ್ಳಿ, ಎಳನೀರು ವರ್ತಕ

*ಎಚ್‌.ಶಿವರಾಜು

ಟಾಪ್ ನ್ಯೂಸ್

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

15

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.