2023 ರ ವಿಧಾನಸಭಾ ಚುನಾವಣೆ ನಂತರ ಸಮ್ಮಿಶ್ರ ಸರಕಾರ ಖಚಿತ : ಗಾಲಿ ಜನಾರ್ಧನ ರೆಡ್ಡಿ
Team Udayavani, Mar 4, 2023, 8:15 PM IST
ಗಂಗಾವತಿ: ಮುಂಬರುವ 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಪಕ್ಷಗಳಿಗೆ ಬಹುಮತ ಲಭಿಸುವುದಿಲ್ಲ. ಆದ್ದರಿಂದ ಕೆಆರ್ಪಿಪಿ ಪಕ್ಷ ಮಹತ್ವದ ಪಾತ್ರ ವಹಿಸಲಿದ್ದು ಖಚಿತವಾಗಿ ಸಮ್ಮಿಶ್ರ ಸರಕಾರ ರಚನೆಯಾಗಲಿದೆ ಎಂದು ಕೆಆರ್ಪಿ ಪಾರ್ಟಿ ಸಂಸ್ಥಾಪಕ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು.
ಅವರು ನಗರದ ಕನಕಗಿರಿ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯ ಅಮಿತ್ ಷಾ ಸೇರಿ ಕಾಂಗ್ರೆಸ್ನ ಯಾವೊಬ್ಬ ಮುಖಂಡರ ಬಗ್ಗೆಯೂ ಟೀಕೆ ಮಾಡುವುದಿಲ್ಲ.ಇನ್ನೂ 17 ದಿನಗಳಲ್ಲಿ ಬಳ್ಳಾರಿಯ ಬಿಜೆಪಿ ಕೆಲ ಮುಖಂಡರು ನನ್ನ ಸಂಬಂಧಿಕರು ಕೆಆರ್ಪಿ ಪಾರ್ಟಿ ಸೇರಲಿದ್ದಾರೆ. ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತದೆ.
ಮುಖ್ಯವಾಗಿ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ, ಕೋಲಾರ, ಚಿತ್ರದುರ್ಗಾ ಮತ್ತು ತುಮಕೂರು ಜಿಲ್ಲೆಯ ಕೆಲ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಲಾಗುತ್ತದೆ. ಗಂಗಾವತಿಯಲ್ಲಿ ನಾನು ಸ್ಪರ್ಧೆ ಮಾಡುತ್ತಿದ್ದು ಇಲ್ಲಿ ಬಿಎಸ್.ಯಡಿಯೂರಪ್ಪನವರ ಪುತ್ರ ಸೇರಿ ಬಿಜೆಪಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ರಾಜ್ಯ ಮುಖಂಡರು ಅಥವಾ ಅವರ ಪುತ್ರರು ಸಂಬಂಧಿಕರು ನನ್ನ ವಿರುದ್ಧ ಸ್ಪರ್ಧೆ ಮಾಡಿದರೂ ಹೆದರುವ ಪ್ರಶ್ನೆ ಯೇ ಇಲ್ಲ. ಈಗಾಗಲೇ ಗಂಗಾವತಿ ಕ್ಷೇತ್ರದಲ್ಲಿ ಪಕ್ಷಾತೀತವಾಗಿ ಜನತೆ ನನಗೆ ಆಶೀರ್ವಾದ ಮಾಡುತ್ತಿದ್ದಾರೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಯುವ ಕಾರ್ಯಕರ್ತರು ಹಾಗೂ ಪ್ರಮುಖ ಮುಖಂಡರು ಕೆಆರ್ಪಿ ಪಾರ್ಟಿ ಸೇರಿ ನನಗೆ ಶಕ್ತಿ ತುಂಬಿದ್ದಾರೆ.
ಮುಂದಿನ ಸರಕಾರದಲ್ಲಿ ಕೆಆರ್ಪಿ ಪಾರ್ಟಿ ಪ್ರಮುಖ ಪಾತ್ರ
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬರುವುದಿಲ್ಲ. ಕೆಆರ್ಪಿ ಪಾರ್ಟಿ ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 2008 ರಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ರಾಜ್ಯದ 27 ಕ್ಷೇತ್ರಗಳಲ್ಲಿ ನಮ್ಮ ಆತ್ಮೀಯರಿಗೆ ಬಿಜೆಪಿ ಟಿಕೇಟ್ ಕೊಡಿಸಿ ಗೆಲ್ಲಿಸಿಕೊಂಡು ಬಂದು ಪಕ್ಷೇತರ ಶಾಸಕರ ಸಹಕಾರದೊಂದಿಗೆ ಬಿ.ಎಸ್.ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ ಅನುಭವ ತಮಗಿದ್ದು 2023 ರ ಚುನಾವಣೆಯಲ್ಲಿಯೂ ಗಂಗಾವತಿ ಜನತೆ ಮತ್ತು ಕಿಷ್ಕಿಂಧಾ ಅಂಜನಾದ್ರಿಯ ಕೃಪಾಶೀರ್ವಾದಿಂದ ಗಾಲಿ ಜನಾರ್ದನರೆಡ್ಡಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಬಿಜೆಪಿ ಅಥವಾ ಕಾಂಗ್ರೆಸ್ ಜತೆ ಕೆಆರ್ಪಿ ಪಾರ್ಟಿ ಪ್ರಣಾಳಿಕೆ ಅನುಷ್ಠಾನ ಮಾಡುವರರ ಜತೆ ಸರಕಾರ ರಚಿಸಲಾಗುತ್ತದೆ.
ರೈತರಿಗೆ ಯುವಜನರಿಗೆ, ಮಕ್ಕಳಿಗೆ ಮಹಿಳೆಯರಿಗೆ ದೀನ ದುರ್ಬಲರಿಗೆ, ಅಲ್ಪಸಂಖ್ಯಾತರಿಗೆ, ಮುಂದುವರಿದ ವರ್ಗಗಳಲ್ಲಿರುವ ಬಡ ಜನತೆಗೆ ಯೋಜನೆ ರೂಪಿಸಿ ಸಾಮಾಜಿಕ ಭದ್ರತೆ ಕಲ್ಪಿಸಲಾಗುತ್ತದೆ.
ಸುದ್ದಿಗೋಷ್ಠಿಯಲ್ಲಿ ಕೆಆರ್ಪಿ ಪಾರ್ಟಿ ಜಿಲ್ಲಾಧ್ಯಕ್ಷ ಮನೋಹರಗೌಡ, ಮುಖಂಡರಾದ ಅಲಿಖಾನ್, ಯಮನೂರ ಚೌಡ್ಕಿ, ರಾಜೇಶ್ವರಿ, ದುರುಗಪ್ಪ ಆಗೋಲಿ, ಅಮರಜ್ಯೋತಿ ನರಸಪ್ಪ, ರಾಮಕೃಷ್ಣ ಇಳಿಗೇರ್, ಸಂಗಮೇಶ ಬಾದವಾಡಗಿ, ಚಿಲಕಮುಕ್ಕಿ ಮಲ್ಲೇಶಪ್ಪ, ವಿರೇಶ ಸುಳೇಕಲ್, ಜಿಲಾನಿ ಪಾಷಾ, ಚಂದ್ರಶೇಖರಗೌಡ, ಶಿವು ಆದೋನಿ,
ಬಿಜೆಪಿ ಪಕ್ಷದ ಯುವ ಮುಖಂಡ ರವಿ ಬಾದಷಾ ಲಿಂಗರಾಜ ಕ್ಯಾಂಪ್, ಸೋಮನಾಥ ಕಂಪ್ಲಿ, ಸಿದ್ದಪ್ಪ, ಬಿ.ಆರ್.ಗೌಸ್, ಮೌಲ ಮನಿಯಾರ್, ಜಾಕೀರ್ ಬಿಚ್ಚಗತ್ತಿ, ಬಾಷಾ, ಮಹಮದ್ ಚಾವೂಸ್, ಪರಂಜ್ಯೋತಿ, ನಾಗರಾಜ ನಾಯಕ, ಸೇರಿ ನೂರಾರು ಯುವಕರು ಗಾಲಿ ಜನಾರ್ದನರೆಡ್ಡಿ ಸಮ್ಮುಖದಲ್ಲಿ ಕೆಆರ್ಪಿ ಪಾರ್ಟಿ ಸೇರ್ಪಡೆಗೊಂಡರು.
ಇದನ್ನೂ ಓದಿ : ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮಾಜದಿಂದ ಹೆದ್ದಾರಿ ತಡೆ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.