![T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ](https://www.udayavani.com/wp-content/uploads/2024/07/surya-415x229.jpg)
AI: ಬರಲಿದೆ ಓಲಾ ಚಾಟ್ ಜಿಪಿಟಿ – ಭಾರತಕ್ಕೆಂದೇ ವಿಶೇಷವಾಗಿ ತಯಾರಿಸಲಾದ ತಂತ್ರಜ್ಞಾನ
ಜನವರಿಯಲ್ಲಿ ಬೇಟಾ ಆವೃತ್ತಿ ಬಿಡುಗಡೆ
Team Udayavani, Dec 16, 2023, 9:57 PM IST
![ola chat gpt](https://www.udayavani.com/wp-content/uploads/2023/12/ola-chat-gpt-620x349.jpg)
ನವದೆಹಲಿ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನವು ಕಂಪನಿಗಳ ನಡುವೆ ಪೈಪೋಟಿ ಹುಟ್ಟುಹಾಕಿರುವಂತೆಯೇ ಈಗ ಓಲಾ ಕಂಪನಿಯು “ಮೇಡ್ ಫಾರ್ ಇಂಡಿಯಾ’ ಚಾಟ್ಜಿಪಿಟಿಯನ್ನು ಪರಿಚಯಿಸಲು ಮುಂದಾಗಿದೆ.
ಭಾರತಕ್ಕಾಗಿಯೇ ವಿಶೇಷವಾಗಿ ಇದನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಭಾರತದ 10 ಭಾಷೆಗಳಲ್ಲಿ ಇದು ಲಭ್ಯವಿರಲಿದೆ ಎಂದು ಓಲಾ ಸ್ಥಾಪಕ ಭವಿಶ್ ಅಗರ್ವಾಲ್ ಹೇಳಿದ್ದಾರೆ.
ಅಗರ್ವಾಲ್ ಅವರ ಎಐ ಕಂಪನಿಗೆ “ಕೃತ್ರಿಮ್” (ಸಂಸ್ಕೃತ ಭಾಷೆಯಲ್ಲಿ ಕೃತಕ ಎಂದರ್ಥ) ಎಂದು ಹೆಸರಿಡಲಾಗಿದೆ. ಕಳೆದ ಏಪ್ರಿಲ್ನಿಂದಲೇ ಕೃತ್ರಿಮ್ ಎಸ್ಐ ಡಿಸೈನ್ಸ್ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು, ಬೆಂಗಳೂರು ಮತ್ತು ಸ್ಯಾನ್ಫ್ರಾನ್ಸಿಸ್ಕೋದಲ್ಲಿ ಕಚೇರಿಗಳನ್ನು ಹೊಂದಿದೆ. ಜನವರಿಯಲ್ಲೇ ಚಾಟ್ ಜಿಪಿಟಿಯ ಬೇಟಾ ಆವೃತ್ತಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದೂ ಅಗರ್ವಾಲ್ ತಿಳಿಸಿದ್ದಾರೆ.
ಓಲಾ ಚಾಟ್ ಜಿಪಿಟಿಯು ಬೇರೆ ಬೇರೆ ಭಾಷೆಗಳಲ್ಲಿ ಲಭ್ಯವಿರಲಿದೆ. ಬಂಗಾಳಿ ಭಾಷೆಯ ಕವಿತೆಗಳಿಂದ ಹಿಡಿದು ಬಾಲಿವುಡ್ ಸಿನಿಮಾಗಳು, ಮಸಾಲಾ ದೋಸೆ ತಯಾರಿಸುವುದು ಹೇಗೆ ಎನ್ನುವಲ್ಲಿಯವರೆಗೆ ಇದು ಭರಪೂರ ಮಾಹಿತಿ ನೀಡಲಿದೆ. ಎಐ ಮಾಡೆಲ್ಗಳ ಜತೆ ನೀವು ಮಾತುಕತೆಯನ್ನೂ ನಡೆಸಬಹುದಾಗಿದೆ ಎಂದಿದ್ದಾರೆ ಅಗರ್ವಾಲ್.
ಈಗಾಗಲೇ ಭಾರತದಲ್ಲಿ ಸರ್ಕಾರದ ಭಾಷಿಣಿ ಯೋಜನೆಯನ್ನು ಆಧರಿಸಿ ಹಲವು ಸಂಸ್ಥೆಗಳು ಭಾರತೀಯ ಭಾಷಾ ಡೇಟಾಬೇಸ್ ರೂಪಿಸುವ ಮತ್ತು ಅದನ್ನು ಬಳಸಿಕೊಂಡು ಎಐ ಮಾಡೆಲ್ಗಳಿಗೆ ತರಬೇತಿ ನೀಡುವ ಕೆಲಸ ಮಾಡುತ್ತಿವೆ.
ಟಾಪ್ ನ್ಯೂಸ್
![T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ](https://www.udayavani.com/wp-content/uploads/2024/07/surya-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ](https://www.udayavani.com/wp-content/uploads/2024/07/anant-150x83.jpg)
Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ
![Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ](https://www.udayavani.com/wp-content/uploads/2024/07/Lucknoe-150x93.jpg)
Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
![Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್](https://www.udayavani.com/wp-content/uploads/2024/07/Court-2-150x86.jpg)
Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಕೋರ್ಟ್
MUST WATCH
ಹೊಸ ಸೇರ್ಪಡೆ
![T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ](https://www.udayavani.com/wp-content/uploads/2024/07/surya-150x83.jpg)
T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ
![Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ](https://www.udayavani.com/wp-content/uploads/2024/07/anant-150x83.jpg)
Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ
![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-150x83.jpg)
Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು
![2-hunsur](https://www.udayavani.com/wp-content/uploads/2024/07/2-hunsur-150x90.jpg)
Hunsur: ಮಲಗಿದ್ದಲ್ಲೇ ಮೃತಪಟ್ಟ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್
![Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ](https://www.udayavani.com/wp-content/uploads/2024/07/Drought-Relief-150x82.jpg)
Drought Relief: 4168 ರೈತರ ಖಾತೆಗೆ 2.25ಕೋಟಿ ಜಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.