Udupi: 1947ರ ಮೊದಲ ಸ್ವಾತಂತ್ರ್ಯ ದಿನದ ಸಂಭ್ರಮ ನೆನಪು

ಉಡುಪಿ ನಗರದಲ್ಲಿ 24 ಗಂಟೆಯೂ ಆಚರಣೆ | ನಗಾರಿ, ಬೆಡಿ ಸದ್ದಿನ ಅಬ್ಬರ

Team Udayavani, Aug 15, 2024, 2:41 PM IST

8

ಉಡುಪಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ 1947ರಲ್ಲಿ ಆ. 14ರ ಸಂಜೆಯಿಂದ ಮರುದಿನ ಸಂಜೆ ವರೆಗೆ 24 ಗಂಟೆ ಉಡುಪಿ ನಗರದಲ್ಲಿ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಲಾಯಿತು. ಇದರ ಅನಂತರ ಇಷ್ಟು ದೀರ್ಘ‌ ಕಾಲದ ಸ್ವಾತಂತ್ರ್ಯ ದಿನಾಚರಣೆ ನಡೆಯಲಿಲ್ಲ ಎಂದು ತಿಳಿದುಬರುತ್ತದೆ.

1947ರ ಆಗಸ್ಟ್‌ 14ರ ಸಂಜೆ ಯಿಂದಲೇ ಚಟುವಟಿಕೆ ಆರಂಭ ವಾಯಿತು. ರಾತ್ರಿ 9.30ರಿಂದ ಮರುದಿನ ರಾತ್ರಿ 7.30ರವರೆಗೆ ಪ್ರಥಮ ಸ್ವಾತಂತ್ರ್ಯೋತ್ಸವ ಆಚರಣೆಯಾಯಿತು. ಎಲ್ಲ ದೇವಸ್ಥಾನಗಳು, ಮಠಗಳು, ಮನೆಗಳು, ರಸ್ತೆಗಳು ಅಲಂಕರಣ ಗೊಂಡಿದ್ದವು. ಆ. 14ರ ರಾತ್ರಿ ಪತ್ರಕರ್ತ ಎಂ.ವಿ.ಹೆಗ್ಡೆ ಅವರು ರಚಿಸಿದ “ಸ್ವರಾಜ್ಯ ವಿಜಯ’ ಯಕ್ಷಗಾನ ತಾಳಮದ್ದಲೆಯನ್ನು ಯುವಕ ಮಂಡಲದ ಸದಸ್ಯರು ಶ್ರೀಅನಂತೇಶ್ವರ ದೇವಸ್ಥಾನದ ಹೆಬ್ಟಾಗಿಲಿನಲ್ಲಿ ಪ್ರಸ್ತುತಪಡಿಸಿದರು. 1919ರಿಂದಲೂ ಉಡುಪಿ ರಥಬೀದಿ ಸ್ವಾತಂತ್ರ್ಯ ಸಂಗ್ರಾಮದ ಕೇಂದ್ರ ಸ್ಥಾನವಾಗಿತ್ತು. ರಥಬೀದಿಗೆ ಆಗಸ್ಟ್‌ 14ರ ರಾತ್ರಿ ಸ್ಥಳೀಯರು ಮತ್ತು ಆಸುಪಾಸಿನವರು ಜಮಾಯಿಸಿದರು.
ಮಧ್ಯರಾತ್ರಿ ವೇಳೆ ಸಂಭ್ರಮದ ಸಂಕೇತವಾಗಿ ಶ್ರೀಕೃಷ್ಣಮಠ ಮತ್ತು ದೇವಸ್ಥಾನಗಳ ನಗಾರಿ ಬಾರಿಸಲಾಯಿತು. ಇದಾದ ಬಳಿಕ ಬೆಡಿ ಸಿಡಿಸಲಾಯಿತು. ಆಗಿನ ಪರ್ಯಾಯ ಪೀಠಸ್ಥರಾಗಿದ್ದ ಶೀರೂರು ಮಠದ ಶ್ರೀಲಕ್ಷ್ಮೀಂದ್ರತೀರ್ಥ ಸ್ವಾಮೀಜಿ ಮತ್ತು ಇತರ ಅಷ್ಟಮಠಗಳ ಸ್ವಾಮೀಜಿಯವರು, ಭಂಡಾರಕೇರಿ ಮಠದ ಸ್ವಾಮೀಜಿ, ಸ್ವಾತಂತ್ರ್ಯ ಹೋರಾಟಗಾರರು, ಸತ್ಯಾಗ್ರಹಿಗಳು ರಥಬೀದಿಯಲ್ಲಿ ನಡೆದ ಜನಸಂಭ್ರಮದ ಮೆರವಣಿಗೆಯಲ್ಲಿ ಪಾಲ್ಗೊಂಡು ರಾಷ್ಟ್ರಧ್ವಜವನ್ನು ಅರಳಿಸಿದರು. (ಆ ಸಭೆಯಲ್ಲಿ ಪಾಲ್ಗೊಂಡ ಪೇಜಾವರ ಮಠದ ಶ್ರೀವಿಶ್ವೇಶತೀರ್ಥರು 2019ರ ವರೆಗೆ ಇದ್ದರು).

ಪ್ರಥಮ ಸ್ವಾತಂತ್ರ್ಯೋತ್ಸವವನ್ನು ಮಧ್ಯರಾತ್ರಿ ಆಚರಿಸುವಾಗ ಉಡುಪಿಯಲ್ಲಿ ಸಾಮಾನ್ಯ ಮಳೆಯಾಯಿತು. ಬಾಲಕರ ತರಬೇತಿ ಶಾಲೆಯ ಮುಖ್ಯ ಶಿಕ್ಷಕ ಸಂಜೀವ ಭಟ್‌ ಸಭಾಧ್ಯಕ್ಷತೆ ವಹಿಸಿದ್ದರು. ಶ್ರೀಚಂದ್ರಮೌಳೀಶ್ವರ ದೇವಸ್ಥಾನದ “ಕಲಾವೃಂದ’ ಸಾಂಸ್ಕೃತಿಕ ಸಂಸ್ಥೆಯಲ್ಲಿ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು.

ಆ. 15ರ ಬೆಳಗ್ಗೆ ಶ್ರೀಕೃಷ್ಣಮಠದಿಂದ ಶಿಸ್ತುಬದ್ಧ ಪ್ರಭಾತ್‌ಭೇರಿ ಮೆರವಣಿಗೆ ಹೊರಟು 1919ರಿಂದ ಸ್ವಾತಂತ್ರ್ಯ ಹೋರಾಟದ ಇನ್ನೊಂದು ಪ್ರಮುಖ ಕೇಂದ್ರವಾದ ಅಜ್ಜರಕಾಡು ಗಾಂಧೀ ಮೈದಾನದಲ್ಲಿ ಸಮಾಪನಗೊಂಡಿತು. (ಗಾಂಧೀಜಿಯವರು 1934ರ ಫೆಬ್ರವರಿ 25ರಂದು ಈ ಮೈದಾನದಲ್ಲಿ ಭಾಷಣ ಮಾಡಿದ್ದರು). ಉಡುಪಿಯ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರ್ತಿ ಪಾಂಗಾಳ ನಾಯಕ್‌ ಕುಟುಂಬದ ಪಿ. ಮನೋರಮಾ ಬಾಯಿ ರಾಷ್ಟ್ರಧ್ವಜವನ್ನು ಅರಳಿಸಿದರು. ಸೇವಾದಲ ಮತ್ತು ಶಾಲಾ ಮಕ್ಕಳು ರಾಷ್ಟ್ರಗೀತೆ ಮತ್ತು ದೇಶಭಕ್ತಿಗೀತೆಗಳನ್ನು ಹಾಡಿದರು. ಶಾಲೆಗಳಲ್ಲಿ ಸಿಹಿತಿಂಡಿ ವಿತರಿಸಲಾಯಿತು. ಸಂಜೆಯೂ ಅಜ್ಜರಕಾಡು ಪರಿಸರದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈಗಲೂ ಇದೇ ಮೈದಾನದಲ್ಲಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯೋತ್ಸವ ಆಚರಣೆಯಾಗುತ್ತಿದೆ.

1947ರಲ್ಲಿ ಮುನ್ಸಿಫ‌ರಾಗಿದ್ದ ಪಾಂಗಾಳ ಮೂಡಲಗಿರಿ ನಾಯಕ್‌ ತಮ್ಮ ಕಚೇರಿಯಲ್ಲಿ ರಾಷ್ಟ್ರಧ್ವಜವನ್ನು ಅರಳಿಸಿದರು. ಹಿರಿಯರಾದ ಡಾ|ಕೆ.ಎಲ್‌.ಐತಾಳ್‌ ಡಾ|ಪಾಂಗಾಳ ರಾಘವೇಂದ್ರ ನಾಯಕ್‌, ಉಡುಪಿ ಪುರಸಭೆಯ ಸ್ಥಾಪಕಾಧ್ಯಕ್ಷ ಆರೂರು ಲಕ್ಷ್ಮೀನಾರಾಯಣ ರಾವ್‌, ವಿಟ್ಠಲ ಕಾಮತ್‌, ಕೆ.ಕೆ. ಶಾನುಭಾಗ್‌, ಪಾಂಗಾಳ ಲಕ್ಷ್ಮೀನಾರಾಯಣ ನಾಯಕ್‌, ಪಾಂಗಾಳ ಮನೋರಮಾ ಬಾಯಿ, ಆಗಿನ ಕಾಂಗ್ರೆಸ್‌ ಅಧ್ಯಕ್ಷ ಬಾಳ್ಕಟ್ಟಬೀಡು ಕೃಷ್ಣಯ್ಯ ಹೆಗ್ಡೆ ಮತ್ತು ತಹಶೀಲ್ದಾರ್‌ ಸದಾನಂದ ಪೈ ಮೊದಲಾದವರು ಪಾಲ್ಗೊಂಡಿ ದ್ದರು.

ಚಿತ್ರ ಸಂಗ್ರಹ: ಡಾ| ರವೀಂದ್ರನಾಥ ಶಾನುಭೋಗ್‌

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.