ಈಗ ಸೆಬಿ ರಂಗಪ್ರವೇಶ: ಷೇರು ಮಾರುಕಟ್ಟೆ ಸಮಗ್ರತೆ ರಕ್ಷಣೆಗೆ ಬದ್ಧ

ಅದಾನಿ ಪ್ರಕರಣ ಹಿನ್ನೆಲೆ ಸೆಬಿ ಸ್ಪಷ್ಟನೆ

Team Udayavani, Feb 5, 2023, 6:50 AM IST

ಈಗ ಸೆಬಿ ರಂಗಪ್ರವೇಶ: ಷೇರು ಮಾರುಕಟ್ಟೆ ಸಮಗ್ರತೆ ರಕ್ಷಣೆಗೆ ಬದ್ಧ

ಹೊಸದಿಲ್ಲಿ: “ಕಳೆದೊಂದು ವಾರದಲ್ಲಿ ಬೃಹತ್‌ ಉದ್ಯಮ ಸಂಸ್ಥೆ(ಅದಾನಿ ಗ್ರೂಪ್‌)ಯೊಂದರ ಷೇರು ಗಳ ಬೆಲೆಯಲ್ಲಿ ಭಾರೀ ಏರಿಳಿತವನ್ನು ನಾವು ಗಮನಿಸಿದ್ದೇವೆ. ಷೇರು ಮಾರುಕಟ್ಟೆಯ ಸಮ ಗ್ರತೆ ಯನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ.’

ಅದಾನಿ ಸಮೂಹ ಸಂಸ್ಥೆಗಳ ಷೇರುಗಳು ಪತನಗೊಳ್ಳು ತ್ತಿರುವ ನಡುವೆಯೇ ಶನಿವಾರ ಮಾರುಕಟ್ಟೆ ನಿಯಂತ್ರಣ ಸಂಸ್ಥೆ ಸೆಬಿ(ಭಾರತೀಯ ಷೇರುಗಳು ಮತ್ತು ವಿನಿಮಯ ಮಂಡಳಿ) ಹೊರಡಿಸಿದ ಪ್ರಕಟನೆಯಲ್ಲಿನ ಅಂಶಗಳಿವು.

ದೇಶದ ಬ್ಯಾಂಕಿಂಗ್‌ ವ್ಯವಸ್ಥೆಯು ಸ್ಥಿರವಾಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಸ್ಪಷ್ಟಪಡಿಸಿದ ಬೆನ್ನಲ್ಲೇ ಸೆಬಿ ಕೂಡ ಸ್ಪಷ್ಟನೆ ನೀಡಿದ್ದು, “ಮಾರುಕಟ್ಟೆಯ ಸಮಗ್ರತೆಯನ್ನು ಕಾಪಾಡುವಲ್ಲಿ ನಾವು ಬದ್ಧರಾಗಿದ್ದೇವೆ. ಮಾರುಕಟ್ಟೆಯಲ್ಲಿ ಯಾವುದೇ ಅಡ್ಡಿ, ಆತಂಕಗಳಿಲ್ಲದೇ ಪಾರದರ್ಶಕವಾಗಿ ಮತ್ತು ದಕ್ಷ ರೀತಿಯಲ್ಲಿ ಕೆಲಸ ಮಾಡುವಂಥ ರಚನಾತ್ಮಕತೆ ಮುಂದುವರಿಯುವಂತೆ ನಾವು ನೋಡಿಕೊಳ್ಳುತ್ತಿದ್ದೇವೆ’ ಎಂದಿದೆ. ಆದರೆ ಪ್ರಕಟನೆಯಲ್ಲಿ ಎಲ್ಲೂ ಅದಾನಿ ಸಮೂಹ ಸಂಸ್ಥೆಯ ಹೆಸರನ್ನು ಸೆಬಿ ಉಲ್ಲೇಖಿಸಿಲ್ಲ.ಇದೇ ವೇಳೆ ಯಾವುದೇ ನಿರ್ದಿಷ್ಟ ಕಂಪೆನಿಗೆ ಸಂಬಂಧಿಸಿದ ಯಾವುದೇ ಮಾಹಿತಿ ಕೇಳಿಬಂದರೂ, ನಾವು ನೀತಿ ನಿಬಂಧನೆಗಳ ಅನುಸಾರ, ಪರಿಶೀಲನೆ ನಡೆಸುತ್ತೇವೆ. ಬಳಿಕವೇ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದೂ ಸೆಬಿ ಹೇಳಿದೆ.

ಸೆಬಿ ಕುರಿತು ಟಿಎಂಸಿ ಸಂಸದೆ ಪ್ರಶ್ನೆ: ಅದಾನಿ ಪ್ರಕರಣವನ್ನು ಸೆಬಿ ತನಿಖೆ ನಡೆಸುತ್ತಿರುವುದು ನಿಜವಾದರೆ ಸೆಬಿಯ ಪ್ರಮುಖ ಸದಸ್ಯರಲ್ಲಿ ಒಬ್ಬರಾದ ವಕೀಲ ಸಿರಿಲ್‌ ಶ್ರಾಫ್ ಅವರು ತನಿಖೆಯಿಂದ ಹಿಂದೆ ಸರಿಯಬೇಕು ಎಂದು ತೃಣಮೂಲ ಕಾಂಗ್ರೆಸ್‌ ಸಂಸದೆ ಮಹುವಾ ಮೊಯಿತ್ರಾ ಮನವಿ ಮಾಡಿದ್ದಾರೆ. “ನನಗೆ ಲಾಯರ್‌ ಸಿರಿಲ್‌ ಶ್ರಾಫ್ ಬಗ್ಗೆ ಬಹಳ ಗೌರವವಿದೆ. ಆದರೆ ಅವರ ಮಗಳು ಗೌತಮ್‌ ಅದಾನಿ ಅವರ ಪುತ್ರನನ್ನು ವಿವಾಹವಾಗಿದ್ದಾರೆ. ಹೀಗಾಗಿ ಈ ಕುರಿತ ತನಿಖೆಯಿಂದ ಸಿರಿಲ್‌ ಅವರು ಹಿಂದೆಸರಿದರೆ ಉತ್ತಮ ಎನ್ನುವುದು ನನ್ನ ಭಾವನೆ’ ಎಂದು ಮೊಯಿತ್ರಾ ಟ್ವೀಟ್‌ ಮಾಡಿದ್ದಾರೆ.

ಭಾರತದ ವರ್ಚಸ್ಸಿಗೆ ಧಕ್ಕೆಯಾಗಿಲ್ಲ: ನಿರ್ಮಲಾ
20 ಸಾವಿರ ಕೋಟಿ ರೂ.ಗಳ ಎಫ್ಪಿಒ ವಾಪಸ್‌ ಪಡೆಯುವ ಅದಾನಿ ಗ್ರೂಪ್‌ನ ನಿರ್ಧಾರದಿಂದಾಗಿ ಭಾರತದ ವರ್ಚಸ್ಸಿಗೆ ಯಾವುದೇ ಧಕ್ಕೆಯಾಗಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪುನರುಚ್ಚರಿಸಿದ್ದಾರೆ. ಶನಿವಾರ ಮಾತನಾಡಿದ ಅವರು “ಎಫ್ಪಿಒಗಳು ಬರುತ್ತವೆ ಹೋಗುತ್ತವೆ. ಇಂಥ ಏರಿಳಿತಗಳು ಎಲ್ಲ ಮಾರುಕಟ್ಟೆಗಳಲ್ಲೂ ಸಾಮಾನ್ಯ. ಈ ಎಲ್ಲ ಬೆಳವಣಿಗೆಗಳ ನಡುವೆಯೂ ಕಳೆದ 2 ದಿನಗಳಲ್ಲಿ ಭಾರತದ ವಿದೇಶಿ ವಿನಿಮಯ ಮೀಸಲು ನಿಧಿಯಲ್ಲಿ 8 ಶತಕೋಟಿ ಡಾಲರ್‌ನಷ್ಟು ಹೆಚ್ಚಳವಾಗಿದೆ. ಇದು ನಮ್ಮ ದೇಶದ ಆರ್ಥಿಕ ಸದೃಢತೆಗೆ ಸಾಕ್ಷಿ’ ಎಂದು ತಿಳಿಸಿದ್ದಾರೆ.

ಬಾಂಡ್‌ ಮಾರಾಟವನ್ನೂ ಕೈಬಿಟ್ಟ ಅದಾನಿ?
ಎಫ್ಪಿಒ(ಫಾಲೋ ಆನ್‌ ಪಬ್ಲಿಕ್‌ ಆಫ‌ರ್‌) ವಾಪಸ್‌ ಪಡೆದ ಎರಡೇ ದಿನಗಳಲ್ಲಿ ಅದಾನಿ ಎಂಟರ್‌ಪ್ರೈಸಸ್‌ ಲಿ. ತನ್ನ ಬಾಂಡ್‌ ಮಾರಾಟ ಯೋಜನೆಯನ್ನು ಕೂಡ ಕೈಬಿಟ್ಟಿದೆ. ಮೊತ್ತ ಮೊದಲ ಬಾರಿಗೆ ಬಾಂಡ್‌ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಿ 1,000 ಕೋಟಿ ರೂ.ಗಳನ್ನು ಸಂಗ್ರಹಿಸಲು ಕಂಪೆನಿ ಯೋಜಿಸಿತ್ತು. ಹೀಗೆ ಸಂಗ್ರಹವಾದ ಹಣವನ್ನು ತನ್ನ ಹೊಸ ಏರ್‌ಪೋರ್ಟ್‌, ಬಂದರು, ವಿದ್ಯುತ್‌ ಸ್ಥಾವರ ಸೇರಿದಂತೆ ವಿವಿಧ ನಿರ್ಮಾಣ ಕಾಮಗಾರಿಗಳಿಗೆ ಬಳಸುವುದು ಕಂಪೆನಿಯ ಲೆಕ್ಕಾಚಾರವಾಗಿತ್ತು. ಆದರೆ ಹಿಂಡನ್‌ಬರ್ಗ್‌ ವರದಿ ಬಳಿಕ ಕಂಪೆನಿಯ ಷೇರುಗಳು, ಮಾರುಕಟ್ಟೆ ಮೌಲ್ಯ ಪತನಗೊಂಡ ಕಾರಣ ಈಗ ಅದು ಬಾಂಡ್‌ ಮಾರಾಟ ನಿರ್ಧಾರದಿಂದಲೂ ಹಿಂದಕ್ಕೆ ಸರಿದಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.