![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 12, 2024, 12:10 AM IST
ಬೆಂಗಳೂರು: ಗ್ಯಾರಂಟಿ ಜಾರಿ ಬಗ್ಗೆ ನಿಗಾ ವಹಿಸಲು ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ಕಾರ್ಯಕರ್ತರ ಸಮಿತಿ ರಚಿಸಲು ಮುಂದಾಗಿರುವ ಸರಕಾರದ ನಿರ್ಧಾರದ ಬಗ್ಗೆ ವಿಪಕ್ಷ ಬಿಜೆಪಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ರಾಜ್ಯದ ಬೊಕ್ಕಸ ಖಾಲಿಯಾಗುತ್ತಿರುವಾಗ ಕಾಂಗ್ರೆಸ್ ಸರಕಾರ ಕಾರ್ಯಕರ್ತರನ್ನು ಮೆಚ್ಚಿಸಲು ಹೋಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
ಈ ಬಗ್ಗೆ ಸುದ್ದಿಗಾರರ ಜತೆಗೆ ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್, ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರಕಾರದಲ್ಲಿ ಹಣವಿಲ್ಲ. ಆದರೆ ಪಕ್ಷದ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ದುಡ್ಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಚೇಲಾಗಳಿಗೆ ಅನುಕೂಲ
ಗ್ಯಾರಂಟಿ ಜಾರಿ ಸಮಿತಿಯ 3 ಸಾವಿರ ಕಾಂಗ್ರೆಸ್ ಕಾರ್ಯಕರ್ತರಿಗೆ ವಾರ್ಷಿಕ 25 ಕೋಟಿ ರೂ. ಖರ್ಚು ಮಾಡಲಾಗುತ್ತದೆ. ಕಾಂಗ್ರೆಸ್ ಚೇಲಾಗಳಿಗೆ ಕ್ಯಾಬಿನೆಟ್ ದರ್ಜೆ ನೀಡಲಾಗುತ್ತದೆ. ಸರಕಾರ ರೈತರಿಗೆ ಯಾವಾಗ ಪರಿಹಾರ ನೀಡಲಿದೆ ಎಂದು ಪ್ರಶ್ನಿಸಿದರು.
ಜನರ ಗಮನ ತಪ್ಪಿಸಲು ಸಿಎಂ ತಂತ್ರ
ಜನಸಾಮಾನ್ಯರಿಗೆ ಮೋಸ ಮಾಡುವ ಮತ್ತೂಂದು ಯೋಚನೆ ಇದು. ಕಾರ್ಯಕರ್ತ ರನ್ನು ಸಾಕುವ ಹೊಸ ಕಾರ್ಯಕ್ರಮ. ಸಿದ್ದರಾಮಯ್ಯ ನವರ ಪಂಚೆಗೆ ಜನರು ಕೈ ಹಾಕುತ್ತಿದ್ದಾರೆ. ಅವರ ಗಮನ ಬೇರೆಡೆ ಸೆಳೆಯಲು ಈ ತಂತ್ರ ಹೂಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಟೀಕಿಸಿದ್ದಾರೆ.
ಯಾರಪ್ಪನ ಹಣ ಎಂದು ಹಂಚುತ್ತಿದ್ದೀರಿ?
ಮಾಜಿ ಸಚಿವ ಸಿ.ಟಿ.ರವಿ ಅವರು, ಯಾರಪ್ಪನ ಮನೆ ಹಣ ಎಂದು ಜನರ ತೆರಿಗೆಯನ್ನು ನಿಮ್ಮ ಕಾರ್ಯಕರ್ತರಿಗೆ ನೀಡುತ್ತೀರಿ? ರಾಜ್ಯದ ಬೊಕ್ಕಸವನ್ನು ನೀವು ದೋಚಿದ್ದು ಸಾಕಾಗಿಲ್ಲ ಎಂದು ನಿಮ್ಮ ಕೆಳಗಿನವರಿಗೂ ಅವಕಾಶ ಕೊಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ಜನರ ತೆರಿಗೆ ಹಣ ಇರುವುದು ನಿಮ್ಮ ಕಾರ್ಯಕರ್ತರಿಗೆ ಕೊಡುವುದಕ್ಕೆ ಅಲ್ಲ. ಇದರ ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತೇವೆ. ಅಂಗನವಾಡಿ ಕಾರ್ಯ
ಕರ್ತೆಯರ ಗೌರವಧನಕ್ಕೆ, ಶಾಸಕರ ಕ್ಷೇತ್ರಕ್ಕೆ ಅನುದಾನ ನೀಡುವುದಕ್ಕೆ ಕಾರಣ ನೀಡುವ ಸರಕಾರ ಈಗ ದುಂದುವೆಚ್ಚಕ್ಕೆ ಮುಂದಾಗಿದೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡುತ್ತೇವೆ.
-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
ಸಿದ್ದರಾಮಯ್ಯನವರೇ ಇದು ಕಾನೂನಾತ್ಮಕವಾಗಿ ಸರಿಯಲ್ಲ. ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ. ಬೊಕ್ಕಸದ ಹಣ ದುಂದು ವೆಚ್ಚ ಮಾಡಬೇಡಿ. ಬೆಂಬಲಿಗರನ್ನು ತೃಪ್ತಿಪಡಿಸಲು ಈ ಸಮಿತಿ ಮಾಡಿದ್ದಾರೆ.
-ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.