![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 5, 2024, 12:36 AM IST
ರಾಂಚಿ: ಝಾರ್ಖಂಡ್ನ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿರುವ ಜೆಎಂಎಂ ನಾಯಕ ಚಂಪೈ ಸೊರೇನ್ ಅವರು ಸೋಮವಾರ ವಿಶ್ವಾಸಮತದ ಅಗ್ನಿಪರೀಕ್ಷೆ ಎದುರಿಸಲಿದ್ದಾರೆ.
ಸೋಮವಾರ ಬೆಳಗ್ಗೆ ವಿಧಾನಸಭೆಯಲ್ಲಿ ಸಿಎಂ ಚಂಪೈ ವಿಶ್ವಾಸಮತ ಕೇಳಲಿದ್ದು, ಸರಕಾರ ಉಳಿಯುತ್ತದೆಯೋ, ಉರುಳುತ್ತದೆಯೋ ಎಂಬ ಕುತೂಹಲ ಮನೆ ಮಾಡಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಜೆಎಂಎಂ ನಾಯಕ, ಮಾಜಿ ಸಿಎಂ ಹೇಮಂತ್ ಸೊರೇನ್ ಬಂಧನವಾದ ಬಳಿಕ ಚಂಪೈ ಅವರು ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದರು. ರಾಜ್ಯಪಾಲರು ಅವರಿಗೆ ವಿಶ್ವಾಸಮತ ಸಾಬೀತುಪಡಿಸಲು 10 ದಿನಗಳ ಕಾಲಾವಕಾಶ ನೀಡಿದ್ದರು. ಆದರೆ ಹೆಚ್ಚು ದಿನ ಕಳೆದರೆ ಶಾಸಕರ ಖರೀದಿ ನಡೆಯಬಹುದು ಎಂಬ ಭೀತಿಯಿಂದ ಚಂಪೈ ಅವರು ಫೆ. 5ರಂದೇ ವಿಶ್ವಾಸಮತ ಸಾಬೀತುಪಡಿಸುವುದಾಗಿ ಘೋಷಿಸಿದ್ದರು. ಅದರಂತೆ ಜೆಎಂಎಂ ಸರಕಾರದ ಅಳಿವು-ಉಳಿವಿನ ಪ್ರಶ್ನೆಗೆ ಸೋಮವಾರ ಉತ್ತರ ಸಿಗಲಿದೆ.
ರೆಸಾರ್ಟ್ನಲ್ಲಿದ್ದ ಜೆಎಂಎಂ ಪಕ್ಷದ ಶಾಸಕರು ಸೋಮವಾರ ವಿಶ್ವಾಸ ಮತ ಹಿನ್ನೆಲೆಯಲ್ಲಿ ರವಿವಾರವೇ ರಾಂಚಿಗೆ ವಾಪಸಾಗಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.