Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್ ಚೌಟ
ಕಾವೂರು ಜಂಕ್ಷನ್ನಲ್ಲಿ ರಾಹುಲ್ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ
Team Udayavani, Jul 8, 2024, 11:42 PM IST
ಕಾವೂರು: ಭಾರತದಲ್ಲಿ ಹಿಂದೂ ಸಮಾಜದ ಭಾವನೆಯ ವಿರುದ್ಧ ಏನು ಮಾತನಾಡಿದರೂ ಯಾರೂ ವಿರೋಧಿಸುವುದಿಲ್ಲ ಎಂಬ ಭಾವನೆ ಕಾಂಗ್ರೆಸ್ನಲ್ಲಿ ಇದ್ದಂತಿದೆ. ಹೀಗಾಗಿಯೇ ಹಿಂದೂ ಸಮಾಜದ ಹಾಗೂ ಈ ದೇಶದ ಮಣ್ಣಿನ ವಿರುದ್ಧ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ಇದು ಕಾಂಗ್ರೆಸ್ನ ಮಾನಸಿಕ ದಾರಿದ್ರÂದ ಪರಮಾವಧಿ ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಟೀಕಿಸಿದರು.
ರಾಹುಲ್ ಗಾಂಧಿ ಲೋಕಸಭಾ ಕಲಾಪದಲ್ಲಿ ನೀಡಿರುವ ಹಿಂದೂ ವಿರೋಧಿ ಹೇಳಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾ ಬಿಜೆಪಿ ಯುವ ಮೋರ್ಚಾವು ಕಾವೂರು ಜಂಕ್ಷನ್ನಲ್ಲಿ ಸೋಮವಾರ ಆಯೋಜಿಸಿದ ಪ್ರತಿಭಟನಾ ಸಭೆಯನ್ನು ದ್ದೇಶಿಸಿ ಅವರು ಮಾತನಾಡಿದರು.
ಕೇವಲ 99 ಸ್ಥಾನ ಪಡೆದಿರುವ ಕಾಂಗ್ರೆಸ್ ನಾಯಕರು ದೇಶವನ್ನೇ ಗೆದ್ದವರಂತೆ ಸಂಸತ್ತಿನ ಒಳಗೆ ಹಾಗೂ ಹೊರಗೆ ಮಾತನಾಡುತ್ತಿದ್ದಾರೆ. ಅವರ ಹಿಂದೂ ವಿರೋಧಿ ನಿಲುವಿನ ವಿರುದ್ಧ ನಾವೆಲ್ಲರೂ ಜಾಗೃತರಾಗಬೇಕಿದೆ ಎಂದು ಹೇಳಿದರು.
ಶಾಸಕ ಡಾ| ಭರತ್ ಶೆಟ್ಟಿ ಮಾತನಾಡಿ, ರಾಹುಲ್ ಗಾಂಧಿ ಮತಿಭ್ರಮಣರಾದಂತೆ ವರ್ತಿಸುತ್ತಿದ್ದಾರೆ. ಹಿಂದೂಗಳನ್ನು ಕಂಡ ಕೂಡಲೇ ದ್ವೇಷಿಸತೊಡಗುತ್ತಾರೆ. ಈಗ ಹಿಂದೂ ಸಮಾಜದ ನಡುವೆ ಒಡಕು ಮೂಡಿಸಲು ಯತ್ನಿಸಿದ್ದು, ಅವರ ಕೆನ್ನೆಗೆ ಬಾರಿಸಿ ಬುದ್ಧಿ ಹೇಳುವ ಸಮಯ ಬಂದಿದೆ ಎಂದು ವಾಗ್ಧಾಳಿ ನಡೆಸಿದರು.
ಶಾಸಕ ವೇದವ್ಯಾಸ ಕಾಮತ್ ಮಾತ ನಾಡಿ, ಮತ ಬ್ಯಾಂಕ್ ರಾಜಕೀಯ ನಡೆ ಸುತ್ತಿರುವ ರಾಹುಲ್ಗೆ ಈ ದೇಶದ ಬಹುಸಂಖ್ಯಾಕ ಹಿಂದೂಗಳು ತಕ್ಕ ಪಾಠ ಕಲಿಸಲಿದ್ದಾರೆ. ಪಕ್ಷವನ್ನು ಹಿಂದೂ ಸಮಾಜ ತಿರಸ್ಕರಿಸುವ ಸಮಯ ಬಂದಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಲೋಕಸಭೆಯಲ್ಲಿ ಹಿಂದೂ
ವಿರೋಧಿ ಹೇಳಿಕೆ ನೀಡಿರುವ ರಾಹುಲ್ ಗಾಂಧಿ ಅವರು ಒಂದು ಧರ್ಮದ ಓಲೈಕೆಯ ಪ್ರಯತ್ನದಲ್ಲಿದ್ದಾರೆ ಎಂದರು.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಕ್ಷಿತ್ ಆರ್. ಪೂಜಾರಿ, ಜಿಲ್ಲಾಧ್ಯಕ್ಷ ನಂದನ್ ಮಯ್ಯ, ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಪ್ರೇಮಾನಂದ ಶೆಟ್ಟಿ, ಯತೀಶ್ ಆಳ್ವ, ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷ ಭರತರಾಜ್ ಕೃಷ್ಣಾಪುರ, ಮಂಗಳೂರು ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಮಂಗಳೂರು ನಗರ ಪಾಲಿಕೆಯ ಕಾರ್ಪೊರೇಟರ್ಗಳು, ಮಹಿಳಾ ಮೋರ್ಚಾ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Mangalore: ಊದು ಪೂಜೆ: ಹುಲಿ ವೇಷಕ್ಕೆ ಮುಹೂರ್ತ!
Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!
Kasaragod: ಗಾಯಕಿಯ ಮಾನಭಂಗ; ದೂರು: ಗಾಯಕ ರಿಯಾಸ್ ಬಂಧನ
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.