Politics: ಅ.9ಕ್ಕೆ ಕಾಂಗ್ರೆಸ್ CWC ಸಭೆ-ಜಾತಿ ಗಣತಿ,ಪಂಚರಾಜ್ಯ ಚುನಾವಣೆಯೇ ಪ್ರಮುಖ ಚರ್ಚೆ?
Team Udayavani, Oct 5, 2023, 11:30 PM IST
ಹೊಸದಿಲ್ಲಿ: ಜಾತಿಗಣತಿ ವಿಚಾರ ದೇಶಾದ್ಯಂತ ಸಂಚಲನ ಮೂಡಿಸಿರುವ ನಡುವೆಯೇ, ಪಂಚರಾಜ್ಯಗಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜುಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಅ.9ರಂದು ಪಕ್ಷದ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ನಡೆಯಲಿದೆ ಎಂದು ಹೇಳಲಾಗಿದೆ. ಛತ್ತೀಸ್ಗಢ, ರಾಜಸ್ಥಾನ ದಲ್ಲಿ ಅಧಿಕಾರ ಉಳಿಸಿಕೊಳ್ಳುವುದರ ಜತೆಗೆ ಮಧ್ಯ ಪ್ರದೇಶದಲ್ಲಿ ಬಿಜೆಪಿಯನ್ನು ಕೆಳಗಿಳಿಸಲು ಹಾಗೂ ತೆಲಂಗಾಣ ಮತ್ತು ಮಿಜೋರಾಂಗಳಲ್ಲೂ ಅಧಿಕಾರ ಸ್ಥಾಪನೆಗೆ ಪಕ್ಷ ಈಗಿನಿಂದಲೇ ಸಿದ್ಧತೆ ನಡೆಸುತ್ತಿದೆ. ಅದಕ್ಕಾಗಿ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಕುರಿತಂತೆ ಕಾರ್ಯತಂತ್ರವನ್ನು ಈ ಸಭೆಯಲ್ಲಿ ರೂಪಿಸುವ ಸಾಧ್ಯತೆಗಳಿವೆ. ಬಿಹಾರದ ಜಾತಿಗಣತಿ ವಿಚಾರವನ್ನು ಪ್ರಬಲವಾಗಿ ಸಮರ್ಥಿಸಿಕೊಂಡಿದ್ದ ಕಾಂಗ್ರೆಸ್ ಇತರ ಹಿಂದುಳಿದ ವರ್ಗಗಳ ಜನಸಂಖ್ಯಾ ಆಧಾರದ ಮೇಲೆ ದೇಶದಲ್ಲಿ ಹಕ್ಕುಗಳ ಹಂಚಿಕೆಯಾಗಬೇಕೆಂದು ಆಗ್ರಹಿಸಿತ್ತು ಈ ಹಿನ್ನೆಲೆಯಲ್ಲಿ ಜಾತಿ ಗಣತಿ ಬಗ್ಗೆಯೂ ಸಭೆಯಲ್ಲಿ ಚರ್ಚಿಸುವ ನಿರೀಕ್ಷೆ ಇದೆ.
ಕಳೆದ ತಿಂಗಳಷ್ಟೇ 2024ರ ಲೋಕಸಭೆ ಚುನಾವಣೆ ವಿಚಾರವಾಗಿ ಹೈದರಾಬಾದ್ನಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಇದೀಗ ದಿಲ್ಲಿ ಯಲ್ಲಿರುವ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.