Politics: ಸರಕಾರವನ್ನು ಬೀಳಿಸುವ ಸಾಮರ್ಥ್ಯ ಕಾಂಗ್ರೆಸ್ನವರಿಗೇ ಇದೆ: ಸಿ.ಟಿ. ರವಿ
Team Udayavani, Oct 20, 2023, 12:01 AM IST
ಚಿಕ್ಕಮಗಳೂರು: ಹಾಲಿನದ್ದು ಹಾಲಿಗೆ, ನೀರಿನದ್ದು ನೀರಿಗೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ ನೀಡಿದ್ದು ಸರಿಯಾಗಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಪ್ರಾಮಾಣಿಕರಿಗೆ ತೊಂದರೆ ಆಗಬಾರದು. ಅಕ್ರಮವನ್ನು ಯಾರು ಮಾಡಿದರೂ ಅದು ಇಂದಲ್ಲ ನಾಳೆ ಬಯಲಿಗೆ ಬರುತ್ತದೆ. ಸತ್ಯವನ್ನು ದೀರ್ಘಕಾಲ ಹೂತು ಹಾಕಲು ಸಾಧ್ಯವಿಲ್ಲ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಹೋಗಿದ್ದಾಗ, ಅವರನ್ನು ಭೇಟಿಯಾಗಲು ಹೋಗಬೇಡಿ ಎಂದು ಸತೀಶ್ ಜಾರಕಿಹೊಳಿಗೆ ನಾವು ಹೇಳಿದ್ದೇವಾ? 20 ಹಿರಿಯ ಶಾಸಕರು ಪತ್ರ ಬರೆದಿದ್ದು, ಅದನ್ನೂ ನಾವು ಹೇಳಿ ಮಾಡಿದ್ದಾ? ಐವರನ್ನು ಡಿಸಿಎಂ ಮಾಡಿ ಅಂತ ಸಚಿವ ರಾಜಣ್ಣರಲ್ಲಿ ನಾವು ಹೇಳಿದ್ದಾ? ಇದನ್ನೆಲ್ಲ ಗಮನಿಸುವಾಗ ರಾಜ್ಯ ಸರಕಾರವನ್ನು ಬೀಳಿಸುವ ತಾಕತ್ತು ಕಾಂಗ್ರೆಸ್ನವರಿಗೆ ಮಾತ್ರ ಇದೆ ಎಂದನಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.