ಲವ್‌ ಜಿಹಾದ್‌ ಬಗ್ಗೆ ಮಾತನಾಡಿ ಎಂಬ ಹೇಳಿಕೆ: ಕಟೀಲು ಮಾತಿಗೆ ಕಾಂಗ್ರೆಸ್‌, ಜೆಡಿಎಸ್‌ ಟೀಕೆ


Team Udayavani, Jan 5, 2023, 6:22 AM IST

TDY-54

ಬೆಂಗಳೂರು: ರಸ್ತೆ-ಚರಂಡಿ ಸರಿಯಿಲ್ಲ ಎಂದು ಕೇಳಬೇಡಿ, ಲವ್‌ ಜಿಹಾದ್‌ ಬಗ್ಗೆ ಮಾತನಾಡಿ ಎಂಬ ನಳಿನ್‌ ಕುಮಾರ್‌ ಕಟೀಲು ಹೇಳಿಕೆಗೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿ, ಬಿಜೆಪಿಯವರಿಗೆ ಇಂತಹದ್ದು ಬಿಟ್ಟು ಬೇರೆ ಏನೂ ಅಜೆಂಡಾ ಇಲ್ಲ. ಅಭಿವೃದ್ಧಿ ಬಿಟ್ಟು ವಿವಾದಾತ್ಮಕ ವಿಚಾರಗಳೇ ಇವರಿಗೆ ಬೇಕು. ಗಾಂಧೀಜಿ ಕೊಂದ ಗೋಡ್ಸೆ ಸಂಸ್ಕೃತಿ ಅವರದು. ಹೀಗಾಗಿ, ಅವರಿಂದ ಇಂತಹುದು ಮಾತ್ರ ನಿರೀಕ್ಷಿಸಲು ಸಾಧ್ಯ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಭಾರತ ಜೋಡಿಸಲು ಯತ್ನಿಸುತ್ತದೆ. ಎಲ್ಲ ಸಮುದಾಯದವರು ಪ್ರೀತಿ ಪ್ರೇಮ, ವಿಶ್ವಾಸ, ಸ್ನೇಹದಿಂದ ಬದುಕಬೇಕು. ಶಿಕ್ಷಣ, ಉದ್ಯೋಗ, ಬಡತನ , ಅಭಿವೃದ್ದಿ ವಿಚಾರಗಳು ನಮ್ಮ ಆದ್ಯತೆ. ಬಿಜೆಪಿಯವರಿಗೆ ಇದ್ಯಾವುದೂ ಆದ್ಯತೆ ಅಲ್ಲ ಎಂದು ಕುಟುಕಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಾತನಾಡಿ, ಬಿಜೆಪಿಗೆ ಭಾವನಾತ್ಮಕ ಅಜೆಂಡಾಗಳೇ ಬಂಡವಾಳ. ಆವರಿಗೆ ಇದೇ ಬೇಕೇ ಹೊರತು ಅಭಿವೃದ್ಧಿಯ ಅಜೆಂಡಾ ಬೇಕಾಗಿಲ್ಲ. ಆದರೆ ಕಾಂಗ್ರೆಸ್‌ ಜನಸಾಮಾನ್ಯರ ಬದುಕಿನ ವಿಚಾರಕ್ಕೆ ಆದ್ಯತೆ ನೀಡುತ್ತದೆ. ಉದ್ಯೋಗವಿಲ್ಲದೆ, ಹಸಿವಿನಿಂದ ಬಳಲುತ್ತಿರುವವರ ಬದುಕು ಕಟ್ಟಿಕೊಡಲು ಪ್ರಯತ್ನಿಸುತ್ತದೆ ಎಂದು ಹೇಳಿದ್ದಾರೆ.

ನಳಿನ್‌ ಅವರು ತಮ್ಮ ಪಕ್ಷದ ಅಜೆಂಡಾ ಹೇಳಿದ್ದಾರೆ. ಬಿಜೆಪಿ ಅಜೆಂಡಾ ಜನರ ಮನಸ್ಸು ಕೆಡಿಸಿ ಸಮಾಜದ ಶಾಂತಿ ಕದಡಲು ಬಯಸುತ್ತದೆ. ಇದೇ ಕಾರಣಕ್ಕೆ ರಾಹುಲ್‌ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆ ಮಾಡಿ ದೇಶದ ಜನರ ಮನಸ್ಸು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಜನಸಾಮಾನ್ಯರಲ್ಲಿ ಪರಸ್ಪರ ದ್ವೇಷ ಹುಟ್ಟು ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ. ನಳಿನ್‌ ಕುಮಾರ್‌ ಹಾಗೂ ಬಿಜೆಪಿ ನಾಯಕರ ಹೇಳಿಕೆಯನ್ನು ಇಡೀ ದೇಶ ಖಂಡಿಸುತ್ತದೆ. ಪಕ್ಷದ ಅಧ್ಯಕ್ಷನಾಗಿ ನಾನು ಕೂಡ ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಸಿಎಂ ಇಬ್ರಾಹಿಂ ಖಂಡನೆ:

ಈ ಮಧ್ಯೆ, ನಳಿನ್‌ ಹೇಳಿಕೆ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಬಿಜೆಪಿ ಅಜೆಂಡಾ ಅಭಿವೃದ್ಧಿ ಅಲ್ಲ, ಪ್ರಚೋದನೆ ಎಂಬುದು ಅವರ ಹೇಳಿಕೆಯಿಂದ ಸಾಬೀತಾಗಿದೆ. ಚುನಾವಣೆಯಲ್ಲಿ ಇಂತಹವರನ್ನು ಜನತೆ ಒದ್ದು ಹೊರಗೆ ಕಳುಹಿಸಬೇಕು. ಲವ್‌ ಮಾಡದ ಇವರಿಗೆ ಯಾವುದೂ ಅರ್ಥವಾಗದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.