Congress ಮುಖಂಡನ ಕಾರನ್ನು ಬೆನ್ನಟ್ಟಿ ಬಂದ ಅಪರಿಚಿತರು!
Team Udayavani, Aug 26, 2024, 6:40 AM IST
ಕಾಪು: ಅಪರಿಚಿತರ ತಂಡವೊಂದು ಕೊಲೆ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಮುಖಂಡ ಗುಲಾಂ ಮಹಮ್ಮದ್ ಹೆಜಮಾಡಿ (55) ಅವರ ಕಾರನ್ನು ಬೆನ್ನಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ನಡೆದಿದೆ.
ಗುಲಾಂ ಮಹಮ್ಮದ್ ಅವರು ತನ್ನ ಕಾರು ಚಾಲಕ ಆಸೀಫ್ ಮತ್ತು ಮೇಲ್ವಿಚಾರಕ ಅಬೂಬಕ್ಕರ್ ಅವರೊಂದಿಗೆ ಮಣಿಪಾಲದಿಂದ ಹೆಜಮಾಡಿಗೆ ಬರುತ್ತಿದ್ದ ವೇಳೆ ಉದ್ಯಾವರ ಸೇತುವೆಯ ಬಳಿ ಹಿಂದಿನಿಂದ ಬಿಳಿ ಬಣ್ಣದ ಸೆಲೇರಿಯೋ ಕಾರಿನಲ್ಲಿ ಬೆನ್ನಟ್ಟಿಕೊಂಡು ಬಂದಿರುವುದಾಗಿ ದೂರಲಾಗಿದೆ.
ಗುಲಾಂ ಅವರ ಕಾರಿಗೆ ಹಿಂದಿನಿಂದ ಢಿಕ್ಕಿ ಹೊಡೆಸುವ ರೀತಿಯಲ್ಲಿ ಕಾರನ್ನು ದುಡುಕುತನದಿಂದ ಚಲಾಯಿಸಿಕೊಂಡು ಹೋಗಿದ್ದರು. ಅಲ್ಲಿಂದ ಕಟಪಾಡಿ ಜಂಕ್ಷನ್ ಬಳಿ ಕಾರನ್ನು ನಿಲ್ಲಿಸಿದಾಗ ಮೂವರು ತಮ್ಮ ಕಾರಿನ ಕಿಟಕಿಯ ಮೂಲಕ ಗುಲಾಂ ಅವರನ್ನು ದುರುಗುಟ್ಟಿಕೊಂಡು ನೋಡುತ್ತಿದ್ದರೆನ್ನಲಾಗಿದೆ.
ಈ ವೇಳೆ ಭಯಗೊಂಡು ಗುಲಾಂ ಮಹಮ್ಮದ್ ಅವರ ಚಾಲಕ ಕಾರನ್ನು ಶಿರ್ವ ರಸ್ತೆ ಕಡೆಗೆ ಚಲಾಯಿಸಿದ್ದು, ಬೆನ್ನಟ್ಟಿಕೊಂಡು ಬಂದಿದ್ದ ಅಪರಿಚಿತ ಕಾರಿನವರು ಮಂಗಳೂರು ಕಡೆಗೆ ತೆರಳಿದ್ದಾರೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ.
ಈ ಮೂವರು ಅಪರಿಚಿತರು ಗುಲಾಂ ಮಹಮ್ಮದ್ ಅವರನ್ನು ಕೊಲ್ಲುವ ಉದ್ದೇಶದಿಂದ ಹಾಗೂ ಭಯ ಹುಟ್ಟಿಸಲು ಈ ಕೃತ್ಯ ಎಸಗಿರುವುದಾಗಿ ದೂರಲಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು
Mangaluru: ಕಿರಿದಾಗುತ್ತಿದೆ ಪಣಂಬೂರು ಬೀಚ್! ಇನ್ನೂ ಖಚಿತವಾಗದ ಕಾರಣ
Biological Park: ಪಿಲಿಕುಳಕ್ಕೆ ಪೆಂಗ್ವಿನ್, ಅನಕೊಂಡ ತರಿಸುವ ಮಹತ್ವದ ನಿರ್ಧಾರ
Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್ಮೇಕರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.