ಸಚಿವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಕಾಂಗ್ರೆಸ್ ಮುಖಂಡರ ಆಗ್ರಹ.!
Team Udayavani, Feb 22, 2022, 12:44 PM IST
ಕುರುಗೋಡು : ಸಚಿವ ಕೆಎಸ್ ಈಶ್ವರಪ್ಪ ಕೆಂಪು ಕೋಟೆಯ ಮೇಲೆ ಭಗವಾದ್ವಜಾ ಹಾರಲಿದೆ ಎಂದು ಹೇಳುವ ಮೂಲಕ ರಾಷ್ಟ್ರದ ಧ್ವಜಕ್ಕೆ ಅವಮಾನ ಮಾಡಿದ್ದಾರೆ, ಈ ಕಾರಣಕ್ಕಾಗಿ ಈಶ್ವರಪ್ಪರನ್ನು ಸಚಿವ ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಕುರುಗೋಡು ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ರಾಘವೇಂದ್ರ ರಾವ್ ಅವರಿಗೆ ಮನವಿ ಸಲ್ಲಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಗಿ ಮಲ್ಲಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾ ಅಧ್ಯಕ್ಷ ಗಾದಿಲಿಂಗಪ್ಪ ಈಶ್ವರಪ್ಪ ಸಂವಿದಾನ ವಿರೋಧಿಯಾಗಿ ನಡೆದುಕೊಂಡಿದ್ದಾರೆ. ನಾವೆಲ್ಲ ರಾಷ್ಟ್ರ ಧ್ವಜಕ್ಕೆ ಸೆಲ್ಯೂಟ್ ಹೊಡೆದು ಗೌರವಿಸುತ್ತೇವೆ. ಇಂಥದರಲ್ಲಿ ಈಶ್ವರಪ್ಪ ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದರು.
ಬಿಜೆಪಿ ಬ್ರಿಟಿಷರ ಚೇಲಾ ಆಗಿದ್ದರು. ಅವರು ಸ್ವತಂತ್ರ್ಯ ಹೋರಾಟ ಮಾಡಿಯೇ ಇಲ್ಲ. ಅವರು ರಾಷ್ಟ್ರ ದ್ರೋಹಿಗಳು, ಕಳ್ಳರು, ಸುಳ್ಳರು ಎಂದು ಬಿಜೆಪಿಯನ್ನು ಟೀಕಿಸಿದರು.
ಈಶ್ವರಪ್ಪ ಜಾತಿ ವಿಷ ಬೀಜ ಬಿತ್ತಿದ್ದಾರೆ, ರಾಷ್ಟ್ರ ಪ್ರೇಮ ಬಿಂಬಿಸುವ ನಾವೆಲ್ಲ ಗೌರವಿಸುವ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದರು. ಬಿಜೆಪಿಯವರು ರಾಷ್ಟ್ರ ಭಕ್ತರು ಎಂದು ಹೇಳುತ್ತಾರೆ, ಅವರಿಗೆ ರಾಷ್ಟ್ರ ಭಕ್ತಿಯ ಮಾತನಾಡಲು ನಾಚಿಕೆಯಾಗಬೇಕೆಂದು ಟೀಕಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು, ಪುರಸಭೆ ಸದಸ್ಯರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಹರ್ಷ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಸೈದಾಪುರ ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sanskrit ಅಭ್ಯಾಸಕ್ಕೆ ಕಾಫಿನಾಡಿಗೆ ಆಗಮಿಸಿರುವ ಇಸ್ರೇಲ್ ವಿದ್ಯಾರ್ಥಿಗಳು
Bangaluru: ಜಿಗಣಿಯಲ್ಲಿ ನೆಲೆಸಿದ್ದ ಪಾಕ್ ಕುಟುಂಬ ಸದಸ್ಯರ ಬಂಧನ, ಮಕ್ಕಳೊಂದಿಗೆ ವಾಸ!
Dandeli : ಸರಣಿ ಕಳ್ಳತನ ಪ್ರಕರಣ… ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ
Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್ ಮಾತು
Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.