ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ: ಆ ನಾಲ್ಕನೇ ವ್ಯಕ್ತಿ ಯಾರು?

ಪ್ರತ್ಯೇಕ ಕೊಠಡಿ ಪಡೆದು ಇನ್ನೊಬ್ಬ ಸ್ನೇಹಿತ ಬರುತ್ತಾನೆಂದಿದ್ದ ಸಂತೋಷ್‌

Team Udayavani, Apr 16, 2022, 9:35 AM IST

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ: ನಾಲ್ಕನೇ ವ್ಯಕ್ತಿ?

ಉಡುಪಿ: ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದ್ದು, ಪ್ರಕರಣದಲ್ಲಿ 4ನೇ ವ್ಯಕ್ತಿಯ ಹೆಸರೊಂದು ಪ್ರಸ್ತಾವಗೊಂಡಿದೆ. ಈ ಬಗ್ಗೆ ಪೊಲೀಸ್‌ ತನಿಖೆ ಮುಂದುವರಿದಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಈಗಾಗಲೆ ತನಿಖೆಗಾಗಿ ಎರಡು ವಿಶೇಷ ತಂಡಗಳನ್ನು ಜಿಲ್ಲಾ ಪೊಲೀಸ್‌ ಇಲಾಖೆ ರಚಿಸಿದ್ದು, ಫೋನ್‌ ಕರೆಗಳು, ಸಿಸಿಟಿವಿ ಪರಿಶೀಲನೆ ಸಹಿತ ತಾಂತ್ರಿಕ ಆಯಾಮದಲ್ಲಿ ತನಿಖೆ ನಡೆಯುತ್ತಿದೆ. ಸಂತೋಷ್‌ ಪಾಟೀಲ್‌ ಮತ್ತು ಇಬ್ಬರು ಸ್ನೇಹಿತರು ಸೇರಿ ಮೂವರು ಉಡುಪಿಗೆ ಬಂದು ಲಾಡ್ಜ್ ಪಡೆದಿದ್ದು, ಎರಡು ರೂಂ ಪಡೆದುಕೊಂಡಿದ್ದರು. ಸ್ನೇಹಿತರು ಪ್ರತ್ಯೇಕ ಕೋಣೆ ಯಾಕೆ ಎಂದು ಕೇಳಿದ್ದಕ್ಕೆ, ಸ್ನೇಹಿತರೊಬ್ಬರು ಬರುತ್ತಾನೆಂದು ಸಂತೋಷ್‌ ತಿಳಿಸಿದ್ದ ಎಂಬ ಮಾಹಿತಿಯನ್ನು ಅವರ ಗೆಳೆಯರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ನಿಟ್ಟಿನಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ ಪೊಲೀಸ್‌ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ.

ಲಾಡ್ಜ್ ಮ್ಯಾನೇಜರ್‌ ಏನಂದರು?
ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ರೂಂ ಪಡೆದಿರುವುದು ಮತ್ತು ಇತರ ಚಲನವಲನಗಳ ಬಗ್ಗೆ ಅವರು ತಂಗಿದ್ದ ಲಾಡ್ಜ್ ಮ್ಯಾನೇಜರ್‌ ದಿನೇಶ್‌ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಂತೋಷ್‌ ಪಾಟೀಲ್‌ ಸ್ನೇಹಿತರಾದ ಸಂತೋಷ್‌ ಮತ್ತು ಪ್ರಶಾಂತ್‌ ಶೆಟ್ಟಿ ಅವರೊಂದಿಗೆ ಎ. 11ರ ಸಂಜೆ 5ಕ್ಕೆ ಸಂತೋಷ್‌ ಪಾಟೀಲ್‌ ಹೆಸರಲ್ಲಿ ರೂಂ ಕಾಯ್ದಿರಿಸಿದ್ದರು. ಹಿಂಡಲಗಾ ವಿಳಾಸ ಕೊಟ್ಟಿದ್ದರು.

ಅದರಂತೆ ರೂಂ ನಂ. 207ರಲ್ಲಿ ಸಂತೋಷ್‌ ಹಾಗೂ ರೂಂ ನಂ. 209ರಲ್ಲಿ ಸ್ನೇಹಿತರು ತಂಗಿದ್ದರು. ರೂಂ ಚೆಕ್‌ ಇನ್‌ ಆದ ಬಳಿಕ ಎಲ್ಲರೂ ಅಂದು ಸಂಜೆ ಊಟಕ್ಕೆ ಹೊರಗೆ ಹೋಗಿ ರಾತ್ರಿ 8.59ಕ್ಕೆ ರೂಂಗೆ ವಾಪಸ್‌ ಬಂದಿದ್ದರು. ಬರುವಾಗ ಸಂತೋಷ್‌ ಪಾಟೀಲ್‌ ಜ್ಯೂಸ್‌ ಪಾರ್ಸೆಲ್‌ ತಂದಿದ್ದರು. ಮರುದಿನ ಬೆಳಗ್ಗೆ 10.50ಕ್ಕೆ ಅವರ ಸ್ನೇಹಿತರು ಸಂತೋಷ್‌ ಬಗ್ಗೆ ನಮ್ಮಲ್ಲಿ ಕೇಳಿದರು. ಅವರು ರೂಂ ಬಾಗಿಲು ತೆಗೆಯುತ್ತಿಲ್ಲ. ಎಷ್ಟು ಮೊಬೈಲ್‌ ಕರೆ ಮಾಡಿದರೂ ತೆಗೆಯುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದರು.

ಕೂಡಲೇ ರೂಂ ಬಾಯ್‌ ಮೂಲಕ ನಕಲಿ ಬೀಗದಲ್ಲಿ ಬಾಗಿಲು ತೆಗೆದಾಗ ಸಂತೋಷ್‌ ಪಾಟೀಲ್‌ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬಂದಿತ್ತು. ತತ್‌ಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದೆವು. ಮೃತಪಟ್ಟಿದ್ದ ಆ ದಿನ ಬೆಳಗ್ಗೆ ಪೊಲೀಸರು ಸಂತೋಷ್‌ ಪಾಟೀಲ್‌ ಅವರನ್ನು ಕೇಳಿಕೊಂಡು ಲಾಡ್ಜ್ ಗೆ ಬಂದಿದ್ದರು. ಬೆಳಗಾವಿ ವಿಳಾಸದೊಂದಿಗೆ ಫೋಟೋ ತೋರಿಸಿ ಈ ವ್ಯಕ್ತಿ ತಂಗಿದ್ದಾರಾ ಎಂದು ಪ್ರಶ್ನಿಸಿದ್ದರು. ಫೋಟೋ ನೋಡಿ ಪರಿಚಯ ಆಗಿರಲಿಲ್ಲ. ಸಂತೋಷ್‌ ಅವರು ಹಿಂಡಲಗಾ ವಿಳಾಸ ಕೊಟ್ಟಿದ್ದರಿಂದ ಪೊಲೀಸರು ಬೆಳಗಾವಿ ಅಂದಾಗ ನಮಗೆ ತಿಳಿಯಲಿಲ್ಲ. ನಮ್ಮಲ್ಲಿದ್ದ ಎಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ. ಒಂದು ವಾರದ ವರೆಗೂ 207, 209 ಕೊಠಡಿಗಳನ್ನು ಯಾರಿಗೂ ಕೊಡಬೇಡಿ ಎಂದಿದ್ದಾರೆ ಎಂದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

5

Kaup: ಶಿಲಾಮಯ ಗುಡಿಯ ಮೆರುಗು ಹೆಚ್ಚಿಸಿದ ಕಾರ್ಕಳ, ಸಿರಾದ ಕಲ್ಲು

4(1

Manipal: ನಮ್ಮ ಸಂತೆಯಲ್ಲಿ ಜನ ಸಾಗರ

Namma-SANTHE-1

Manipal: ನಮ್ಮ ಸಂತೆಗೆ ಎರಡನೇ ದಿನವೂ ಅಭೂತಪೂರ್ವ ಸ್ಪಂದನೆ: ಇಂದೇ ಕೊನೆಯ ದಿನ

8

Karkala: ಚಾರ್ಚ್‌ಗಿಟ್ಟ ಮೊಬೈಲ್‌ ಸ್ಫೋ*ಟ; ಮನೆಗೆ ಬೆಂಕಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.