ಜಿಲ್ಲಾಡಳಿತದೊಂದಿಗೆ ಸಹಕರಿಸಿ, ಕೋವಿಡ್ ನಿಯಂತ್ರಿಸಿ

ಉಭಯ ಜಿಲ್ಲಾಧಿಕಾರಿಗಳಾದ ಡಾ| ರಾಜೇಂದ್ರ ಕೆ.ವಿ. ಹಾಗೂ ಕೂರ್ಮಾರಾವ್‌ ಎಂ. ಮನವಿ

Team Udayavani, Jan 6, 2022, 5:40 AM IST

ಜಿಲ್ಲಾಡಳಿತದೊಂದಿಗೆ ಸಹಕರಿಸಿ, ಕೋವಿಡ್ ನಿಯಂತ್ರಿಸಿ

ಮಂಗಳೂರು: ಕೋವಿಡ್‌ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಜಿಲ್ಲೆಯ ಜನರ ಸಹಕಾರ ಅತಿ ಅಗತ್ಯ, ಈ ದಿಸೆಯಲ್ಲಿ ನಾಗರಿಕರು, ವಿವಿಧ ಸಂಘ ಸಂಸ್ಥೆಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಕೋರಿದ್ದಾರೆ.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣ ದಲ್ಲಿ ಬುಧವಾರ ಕೋವಿಡ್‌ ನಿಯಂತ್ರಣ ಸಂಬಂಧ ವಿವಿಧ ಸಂಘಸಂಸ್ಥೆಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ಚಾಲಕರು ಹಾಗೂ ನಿರ್ವಾಹಕರು ಎರಡು ಡೋಸ್‌ ಲಸಿಕೆ ಪಡೆದಿರಬೇಕು ಮತ್ತು ಕರ್ತವ್ಯ ನಿರ್ವಹಣೆ ವೇಳೆ ಮಾಸ್ಕ್ ಧರಿಸಬೇಕು, ಪ್ರಯಾಣಿಕರು ಬಸ್‌ ಹತ್ತುವ ವೇಳೆ ಕೋವಿಡ್‌ ಲಸಿಕೆ ಪಡೆದಿರುವ ಬಗ್ಗೆ ತಿಳಿಯಬೇಕು, ಪಡೆಯದ ಪ್ರಯಾಣಿಕರಿಗೆ ಅದರ ಬಗ್ಗೆ ಜಾಗೃತಿ ಮೂಡಿಸಬೇಕು, ಪ್ರಯಾಣಿಕರು ಮಾಸ್ಕ್ ಧರಿಸಿಯೇ ಬಸ್‌ನೊಳಗೆ ತೆರಳುವಂತೆ ತಿಳಿಸಿಕೊಡಬೇಕು ಎಂದು ಸೂಚಿಸಿದರು.

ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸುವ ಬಗ್ಗೆ ಜಾಗೃತಿ ವಹಿಸಬೇಕು, ಇದಕ್ಕೆ ಸಂಬಂಧಿಸಿ ಸಂಘದ ಮುಖಂ ಡರು, ಪದಾಧಿಕಾರಿಗಳು ಸಭೆ ನಡೆಸಿ, ಚಾಲಕರು ಹಾಗೂ ನಿರ್ವಾಹಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಅವರು ತಿಳಿಸಿದರು.

ಕ್ಯಾಟರಿಂಗ್‌ ಮಾಡುವವರು ಸಹ ವಿವಿಧ ಸಮಾರಂಭಗಳಲ್ಲಿ ಊಟ, ಉಪಹಾರ ನೀಡುವ ಸಂದರ್ಭ ಕೋವಿಡ್‌ ನಿಯಮಾವಳಿಗಳ ಪಾಲನೆ ಕುರಿತು ತಿಳಿದುಕೊಳ್ಳಬೇಕು ಎಂದರು.

ನಗರದಲ್ಲಿರುವ ಎಲ್ಲ ಮಾಲ್‌ಗ‌ಳಲ್ಲಿಯೂ ಕಡ್ಡಾಯವಾಗಿ ಕೋವಿಡ್‌ ಮಾರ್ಗ ಸೂಚಿಗಳನ್ನು ಪಾಲಿಸಬೇಕು, ಹೋಟೆಲ್‌ಗ‌ಳಲ್ಲಿ ಶೇ.50 ಅನುಪಾತದಲ್ಲಿ ಗ್ರಾಹಕರಿಗೆ ಸೇವೆ ನೀಡುವುದು ಸೇರಿದಂತೆ ಬರುವ ಗ್ರಾಹಕರು ಲಸಿಕೆ ಪಡೆದ ಬಗ್ಗೆ ಖಚಿತ ಪಡಿಸಿಕೊಳ್ಳುವಂತಹ ಪ್ರಕ್ರಿಯೆ ಗಳನ್ನು ಅನುಸರಿಸಬೇಕು ಎಂದರು.

ಕೆಲಸಗಾರರಲ್ಲಿ ಯಾವುದಾದರೂ ರೋಗ ಲಕ್ಷಣಗಳು ಗೋಚರವಾದರೆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಬೇಕು, ವಾಣಿಜ್ಯ ಮಳಿಗೆಗಳು ಹಾಗೂ ಇತರ ಕಡೆ ಆರೋಗ್ಯ ಇಲಾಖೆಯವರು ಗಂಟಲ ದ್ರವ ಸಂಗ್ರಹಕ್ಕೆ ಬಂದ ಸಂದರ್ಭ ಅವರಿಗೆ ಸಹಕರಿಸಬೇಕು, ಇಲ್ಲದಿದ್ದರೆ ಅಂತಹವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಅವರ ಮಳಿಗೆಗಳ ಪರವಾನಿಗೆಯನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದರು.

ಜಿ.ಪಂ. ಸಿಇಒ ಡಾ| ಕುಮಾರ್‌, ಮನಪಾ ಆಯುಕ್ತ ಅಕ್ಷಯ್‌ ಶ್ರೀಧರ್‌, ಖಾಸಗಿ ಬಸ್‌, ಹೊಟೇಲ್‌, ಚಲನಚಿತ್ರ, ಮಾಲ್‌, ಕ್ಯಾಟರಿಂಗ್‌ ಸೇರಿದಂತೆ ವಿವಿಧ ಸಂಘಗಳ ಮುಖಂಡರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿ: ಕೋವಿಡ್‌ ಮಾರ್ಗಸೂಚಿಗಳನ್ನು ಗ್ರಾಹಕರು ಪಾಲಿಸುವಂತೆ ಅಂಗಡಿ ಮುಂಗಟ್ಟುಗಳ ಮುಖ್ಯಸ್ಥರು ಎಚ್ಚರಿಸುವುದರೊಂದಿಗೆ ವ್ಯವ ಹರಿಸಬೇಕು ತಪ್ಪಿದಲ್ಲಿ ಅಂಗಡಿ ಮಾಲಕರಿಗೆ ದಂಡ ವಿಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಎಚ್ಚರಿಕೆ ನೀಡಿದ್ದಾರೆ.

ಮಣಿಪಾಲದ ಟೈಗರ್‌ ಸರ್ಕಲ್‌, ಬಸ್‌ ನಿಲ್ದಾಣ, ರಸ್ತೆ ಬದಿಯ ಅಂಗಡಿ ಮುಂಗಟ್ಟು ಸೇರಿದಂತೆ ಮಾಲ್‌ಗ‌ಳಿಗೆ ಭೇಟಿ ನೀಡಿ, ಅಲ್ಲಿನ ವ್ಯಾಪಾರಿಗಳಿಗೆ ಕೋವಿಡ್‌ ಮಾರ್ಗಸೂಚಿ ಪಾಲಿ ಸಲು ನಿರ್ದೇಶಿಸಿ, ಮಾಸ್ಕ್ ಧರಿಸದೆ
ವ್ಯಾಪಾರ ವಹಿವಾಟು ಮಾಡುವವ ರಿಗೆ ದಂಡ ವಿಧಿಸಲು ನಗರಸಭಾ ಸಿಬಂದಿಗೆ ಸೂಚಿಸಿದರು.

ಅಂಗಡಿ ಮಾಲಕರು ತಮ್ಮ ಅಂಗಡಿ ಮುಂಭಾಗ ಗ್ರಾಹಕರು ಸಾಮಾಜಿಕ ಅಂತರ ಕಾಯ್ದಕೊಳ್ಳುವಂತೆ ಸೂಕ್ತ ಮಾರ್ಕಿಂಗ್‌ ಮಾಡಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂಬ ನಾಮಫ‌ಲಕ ಅಳವಡಿಸಬೇಕು ಎಂದರು.

ಮಾಲ್‌ಗ‌ಳ ಪ್ರವೇಶ ದ್ವಾರದ ಬಳಿ ಥರ್ಮಲ್‌ ಸ್ಕ್ರೀನಿಂಗ್‌ ಮಾಡುವುದರ ಜತೆಗೆ ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರವೇಶ ನೀಡಬೇಕು. ಮಾಲ್‌ ಒಳಗೆ ಜನದಟ್ಟಣೆಯಗದಂತೆ ಎಚ್ಚರವಹಿಸಿ ಶೇ.50 ಕ್ಕಿಂತ ಕಡಿಮೆ ಜನ ಸಾಂದ್ರತೆ ಇರುವಂತೆ ನೋಡಿ ಕೊಳ್ಳಬೇಕು. ಒಂದೊಮ್ಮೆ ನಿಯಮ ಉಲ್ಲಂ ಸಿದಲ್ಲಿ ಮಾಲ್‌ಗ‌ಳನ್ನು ಮುಚ್ಚಲು ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದು ಹೇಳಿದರು.

ಮಾಸ್ಕ್ ಧರಿಸದವರಿಂದ ದಂಡ ವಸೂಲಿ ಮಾಡಲಾಗುವುದು. ಔಷಧ ವ್ಯಾಪಾರ ಮಳಿಗೆಯಲ್ಲಿ ಕೆಮ್ಮು, ಶೀತ ಜ್ವರದ ಔಷಧಗಳನ್ನು ವಿತರಿಸುವ ಮಾಹಿತಿ ಪಡೆದರು. ಅನಂತರ ಖರೀದಿಸಿದವರ ಮಾಹಿತಿಯ ಪ್ರತೀ ದಿನದ ವರದಿಗಳನ್ನು ಸೂಕ್ತ ಪ್ರಾಧಿಕಾರಕ್ಕೆ, ಹಿಂದಿನಂತೆ ಕಡ್ಡಾಯ ವಾಗಿ ನೀಡಬೇಕು ಎಂದು ಸೂಚನೆ ನೀಡಿದರು.
ಸ್ಥಳೀಯ ಸಂಸ್ಥೆಗಳ ಆಯುಕ್ತರು, ಮುಖ್ಯಾಧಿಕಾರಿಗಳು ನಿತ್ಯ ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್‌ ಮಾರ್ಗ
ಸೂಚಿಗಳು ಪಾಲನೆಯಾಗುತ್ತಿ ದೆಯೇ ಎಂಬ ಬಗ್ಗೆ ನಿಗಾ ವಹಿಸ ಬೇಕು ಎಂದು ನಿರ್ದೇಶನ ನೀಡಿ ದರು. ನಗರಸಭೆ ಆಯುಕ್ತ ಉದಯ ಶೆಟ್ಟಿ , ಸಿಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

1-eewe

Guruvayur Shri Krishna Temple; ಇನ್ನು ಕೃಷ್ಣನಿಗೆ ತುಳಸಿ ನಿಷೇಧ

1-shah

Amit Shah; ರವೀಂದ್ರರ ಸಂಗೀತ ಕೇಳಬೇಕಿದ್ದ ಬಂಗಾಲದಲ್ಲಿ ಬಾಂಬ್‌ ಸದ್ದು

1-tggg

CJI; ಸರಕಾರದ ಮುಖ್ಯಸ್ಥರ ಭೇಟಿಯಾದರೆ ಡೀಲಾಯಿತು ಎಂದರ್ಥವಲ್ಲ

Jaishankar

Ladakh border; ಶೀಘ್ರವೇ ಭಾರತ, ಚೀನ ಗಸ್ತು: ಸಚಿವ ಜೈಶಂಕರ್‌

dattatreya-Hosabale

RSS ನಲ್ಲಿ ರಾಜಕೀಯ ಅಸ್ಪೃಶ್ಯತೆಯೂ ಇಲ್ಲ: ದತ್ತಾತ್ರೇಯ ಹೊಸಬಾಳೆ

Mann Ki Baat: ಡಿಜಿಟಲ್‌ ಅರೆಸ್ಟ್‌ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ ಕಹಳೆ!

Mann Ki Baat: ಡಿಜಿಟಲ್‌ ಅರೆಸ್ಟ್‌ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ ಕಹಳೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

ganja

Udupi: ಗಾಂಜಾ ಮಾರಾಟಕ್ಕೆ ಯತ್ನ: ಓರ್ವ ಬಂಧನ

1

Kelarkalabettu: ವ್ಯಕ್ತಿ ನಾಪತ್ತೆಯಾಗಿ 22 ವರ್ಷದ ಬಳಿಕ ದೂರು ದಾಖಲು

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

puttige-4

Udupi; ಗೀತಾರ್ಥ ಚಿಂತನೆ-76: ಕುಲಕ್ಷಯ=ಕುಲಸಂಸ್ಕೃತಿಯ ಕ್ಷಯ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Udupi: ಗೀತಾರ್ಥ ಚಿಂತನೆ-77: ಕೃತಕ ಟ್ರೆಂಡ್‌ ಸೆಟ್ಟಿಂಗ್‌ನಿಂದ ಅಸಮತೋಲನ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

1-eewe

Guruvayur Shri Krishna Temple; ಇನ್ನು ಕೃಷ್ಣನಿಗೆ ತುಳಸಿ ನಿಷೇಧ

Accident-logo

Kundapura: ಕಾರು ಢಿಕ್ಕಿಯಾಗಿ ಕೆರ್ಗಾಲು ಗ್ರಾಮದ ಪಾದಚಾರಿ ಸಾವು

1-shah

Amit Shah; ರವೀಂದ್ರರ ಸಂಗೀತ ಕೇಳಬೇಕಿದ್ದ ಬಂಗಾಲದಲ್ಲಿ ಬಾಂಬ್‌ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.