Moodabidri ಅಭಯಚಂದ್ರರಿಗೆ “ಸಹಕಾರ ಕಲ್ಪವೃಕ್ಷ ಪ್ರಶಸ್ತಿ’


Team Udayavani, Nov 20, 2023, 12:16 AM IST

Moodabidri ಅಭಯಚಂದ್ರರಿಗೆ “ಸಹಕಾರ ಕಲ್ಪವೃಕ್ಷ ಪ್ರಶಸ್ತಿ’

ಮೂಡುಬಿದಿರೆ: ನೂರ ಏಳನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಮೂಡುಬಿದಿರೆ ಸರ್ವಿಸ್‌ ಕೋ-ಆಪರೇಟಿವ್‌ ಸೊಸೈಟಿ ಯಲ್ಲಿ 70ನೇ ಅ.ಭಾ. ಸಹಕಾರ ಸಪ್ತಾಹದ ಅಂಗವಾಗಿ ನಡೆಯುತ್ತಿರುವ “ಸಪ್ತ ಸಂಧ್ಯಾ- ಸಹಕಾರಿ ಚಿಂತನ ಸರಣಿ-ಸಾಂಸ್ಕೃತಿಕ ವೈಭವ’ ಕಾರ್ಯ ಕ್ರಮದಲ್ಲಿ ಶನಿವಾರ ಮಾಜಿ ಸಚಿವ ಕೆ. ಅಭಯಚಂದ್ರ ಅವರನ್ನು ಪತ್ನಿ ಮಂಜುಳಾ ಸಹಿತ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರು ಸೊಸೈಟಿಯ “ಸಹಕಾರ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನಗೈದು ಸಮ್ಮಾನಿಸಿದರು.

ಪ್ರಶಸ್ತಿಯು 10 ಗ್ರಾಂ ಚಿನ್ನ, 25,000 ರೂ. ನಗದು, ಬೆಳ್ಳಿಯ ತಟ್ಟೆ, ಪ್ರಶಸ್ತಿ ಫಲಕ ಒಳಗೊಂಡಿದೆ. ಸೊಸೈಟಿ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪಲಿಮಾರು ಮಠಾ ಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಆಶೀರ್ವಚನವಿತ್ತರು. ದೇಗುಲ, ಶಾಲೆ, ಆಸ್ಪತ್ರೆ ಜತೆಗೊಂದು ಸಹಕಾರಿ ಸಂಘ ಇರುವ ಊರು ಉದ್ಧಾರವಾಗಲು ಸಾಧ್ಯ. ಎಂಸಿಎಸ್‌ ಸೊಸೈಟಿ ಜನಮನದಲ್ಲಿ ಸದಾ ಬೆಳಗುವ ದೀಪವಾಗಿರುವುಕ್ಕೆ ಅದರ ಜನಪರ ಕಾಳಜಿಯ ಕಾರ್ಯಕ್ರಮ, ಆಡಳಿತವೇ ಸಾಕ್ಷಿ ಎಂದರು.

“ಸೊಸೈಟಿ’ಯ ಬಗ್ಗೆ ಸದಾನಂದ ನಾರಾವಿ ಬರೆದ ಪುಸ್ತಕವನ್ನು ಸ್ವಾಮೀಜಿ ಯವರು ಬಿಡುಗಡೆಗೊಳಿಸಿ ಕೃತಿಕಾರ ರನ್ನು ಪುರಸ್ಕರಿಸಿದರು.

ವಿವಿಧ ಯೋಜನೆಗಳಿಗೆ ಚಾಲನೆ
ಸಚಿವ ಕೆ.ಎನ್‌.ರಾಜಣ್ಣ ಅವರು ಸೊಸೈಟಿಯ ವಿವಿಧ ಯೋಜನೆಗಳನ್ನು ಉದ್ಘಾಟಿಸಿದರು. ಎಂಸಿಎಸ್‌ ಸೊಸೈಟಿ ಯನ್ನು ರಾಜಕೀಯದ ಲೇಪವಿಲ್ಲದೆ ಮುನ್ನಡೆಸಿದ್ದವರು ದಿ| ಅಮರನಾಥ ಶೆಟ್ಟಿ ಅವರು ಮುನ್ನಡೆಸಿದ್ದರು. ಅವರ ಆದರ್ಶಗಳ ಬೆಳಕಿನಲ್ಲಿ ಶಾಸಕ, ಮಂತ್ರಿಯಾಗಿ ಜನಪ್ರೀತಿಯೊಂದಿಗೆ ಎಲ್ಲರ ಒಲುಮೆ ಗಳಿಸಿದ ಮಾಜಿ ಸಚಿವ ಅಭಯಚಂದ್ರರಿಗೆ ಪ್ರಶಸ್ತಿ ನೀಡುವ ಮೂಲಕ ಈ ಸೊಸೈಟಿ ಎಲ್ಲ ಸಹಕಾರಿಗಳಿಗೆ ಮಾದರಿಯಾಗಿದೆ ಎಂದವರು ಹೇಳಿದರು.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಶಾಸಕ ಉಮಾನಾಥ ಕೋಟ್ಯಾನ್‌ ಅವರು ಅಭಯಚಂದ್ರ ಅವರನ್ನು ಅಭಿನಂದಿಸಿ ಮಾತನಾಡಿದರು. ಪ್ರಶಸ್ತಿ ಪುರಸ್ಕೃತ ಅಭಯಚಂದ್ರ ಅವರು ಮಾತನಾಡಿ, ತನಗಿತ್ತ ಚಿನ್ನದ ಪದಕದ ಮೌಲ್ಯವನ್ನು ಬಾಬುರಾಜೇಂದ್ರ ಪ್ರಸಾದ್‌ ಪ್ರೌಢ ಶಾಲೆಗೆ, ನಗದು ಮೊತ್ತವನ್ನು ಎಜಿ ಸೋನ್ಸ್‌ ಐಟಿಐಗೆ ಸಲ್ಲಿಸುವುದಾಗಿ ಪ್ರಕಟಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಡಾ| ಎಚ್‌. ಎನ್‌. ರಮೇಶ್‌, ಜಯಶ್ರೀ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು.ವಿಶೇಷ ಕಾರ್ಯನಿರ್ವಹಣಾ ಧಿಕಾರಿ ಚಂದ್ರಶೇಖರ ಎಂ. ಸ್ವಾಗತಿಸಿ, ಕೆ. ಧರಣೇಂದ್ರ ಜೈನ್‌ ವಂದಿಸಿದರು. ವೇಣುಗೋಪಾಲ ಶೆಟ್ಟಿ ನಿರೂಪಿ ಸಿದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.