ರೋಗಲಕ್ಷಣ ಹೊಂದಿರುವವರಲ್ಲಿ ಕೋವಿಡ್ ಸೋಂಕಿನ ಅಪಾಯ ಹೆಚ್ಚು


Team Udayavani, Jun 11, 2020, 7:15 PM IST

ರೋಗಲಕ್ಷಣ ಹೊಂದಿರುವವರಲ್ಲಿ ಕೋವಿಡ್ ಸೋಂಕಿನ ಅಪಾಯ ಹೆಚ್ಚು

ಜಿನೇವಾ: ಕೋವಿಡ್ ವೈರಸ್‌ ಸೋಂಕಿಗೆ ಒಳಗಾದ ವ್ಯಕ್ತಿಯು ಅನಾರೋಗ್ಯಕ್ಕೆ ಒಳಗಾದಾಗ ಹೆಚ್ಚು ವೇಗವಾಗಿ ಇನ್ನೊಬ್ಬರಿಗೆ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಜ್ಞರು ಹೇಳಿದ್ದಾರೆ.

ಈ ಗುಣದಿಂದಾಗಿ ವೈರಸ್‌ನ ಹರಡುವಿಕೆಯನ್ನು ನಿಯಂತ್ರಿಸಲು ತುಂಬಾ ಕಷ್ಟಕರವಾಗಿದೆ. ಆದರೆ ಕಠಿನ ಪರೀಕ್ಷೆ ಮತ್ತು ಸಾಮಾಜಿಕ ಅಂತರದಿಂದ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಬಹುದು ಎಂದು ಅವರು ಹೇಳಿದರು.

ವ್ಯಕ್ತಿಯು ರೋಗಲಕ್ಷಣಗಳನ್ನು ಹೊಂದಿರುವ ಸಂದರ್ಭದಲ್ಲಿ ಆತನ ದೇಹದಲ್ಲಿ ಹೆಚ್ಚು ವೈರಸ್‌ಗಳಿರುತ್ತವೆ ಎಂದು ತಮಗೆ ಸಿಕ್ಕಿರುವ ಸೀಮಿತ ಮಾಹಿತಿಯಿಂದ ಸ್ಪಷ್ಟವಾಗಿದೆ ಎಂದು ಡಬ್ಲ್ಯುಎಚ್‌ಒ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಮತ್ತು ಸಾಂಕ್ರಾಮಿಕ ರೋಗದ ತಾಂತ್ರಿಕ ಪ್ರಮುಖರಾದ ಮಾರಿಯಾ ವಾನ್‌ ಕೆರ್ಖೋವ್‌ ಅವರು ಸಾಮಾಜಿಕ ಮಾಧ್ಯಮದಲ್ಲಿ ನಡೆದ ಲೈವ್‌ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಸಾಮಾನ್ಯ ರೋಗಲಕ್ಷಣವನ್ನು ಹೊಂದಿರುವವರಲ್ಲಿ ಸೋಂಕಿನ ಅವಧಿಯು 8-9 ದಿನಗಳವರೆಗೆ ಇರಬಹುದು ಹಾಗೂ ಗಂಭೀರ ಸಮಸ್ಯೆಯಿಂದ ಬಳಲುತ್ತಿರುವವರಲ್ಲಿ ಇದು ತುಂಬಾ ದೀರ್ಘ‌ಕಾಲವಾಗಿರಬಹುದು ಎಂದು ಜರ್ಮನಿ ಮತ್ತು ಯುನೈಟೆಡ್‌ ಸ್ಟೇಟ್ಸ್‌ ನಡೆಸಿದ ಪ್ರಾಥಮಿಕ ಅಧ್ಯಯನವೊಂದರಲ್ಲಿ ತಿಳಿದುಬಂದಿದೆ.

ಇದಕ್ಕೂ ಮೊದಲು ಕೆಲವು ರೋಗಶಾಸ್ತ್ರ ತಜ್ಞರು ಇವರ ಹೇಳಿಕೆ ಯನ್ನು ಪ್ರಶ್ನಿಸಿದ್ದರಲ್ಲದೆ, ರೋಗ ಲಕ್ಷಣವನ್ನು ಹೊಂದಿಲ್ಲದವರಿಂದ ಇನ್ನೊಬ್ಬರಿಗೆ ಸೋಂಕು ಹರಡುವ ಸಾಧ್ಯತೆ ತೀರಾ ವಿರಳ ಎಂದಿದ್ದರು.

ಕೆಲವು ರೋಗ ಮಾದರಿ ಅಧ್ಯಯನಗಳನ್ನು ಉಲ್ಲೇಖೀಸಿ ವಾನ್‌ ಕೆರ್ಖೋವ್‌ ಅವರು ಮಂಗಳವಾರ ಹೇಳಿಕೆ ಯೊಂದನ್ನು ನೀಡಿದ್ದು, ಯಾವುದೇ ರೋಗ ಲಕ್ಷಣಗಳನ್ನು ಹೊಂದಿಲ್ಲದವರೂ ಇತರರಿಗೆ ಸೋಂಕು ಹರಡುತ್ತಾರೆ ಎಂದು ಹೇಳಿದ್ದಾರೆ.

“ಸುಮಾರು ಶೇ. 40ರಷ್ಟು ಸೋಂಕು ಯಾವುದೇ ರೋಗ ಲಕ್ಷಣಗಳಿಲ್ಲ ದವರಿಂದ ಹರಡಿದ್ದಾಗಿದೆ ಎಂದು ಕೆಲವರು ಅಂದಾಜಿಸಿದ್ದಾರೆ. ಆದ್ದರಿಂದ ಅದನ್ನು ತಾನು ಸೋಮವಾರದ ಉತ್ತರದಲ್ಲಿ ತಿಳಿಸಿರಲಿಲ್ಲ. ಈಗ ಅದನ್ನು ಸ್ಪಷ್ಟಪಡಿಸುತ್ತಿದ್ದೇನೆ’ ಎಂದು ಹೇಳಿದ್ದಾರೆ.

ಕೋವಿಡ್ ವೈರಸ್‌ ಶ್ವಾಸಕೋಶದ ಮೇಲ್ಭಾಗದಲ್ಲಿರುತ್ತದೆ ಮತ್ತು ಅದು ಕೆಳಭಾಗದಲ್ಲಿರುವಂತಹ ಇದೇ ರೀತಿಯ ವೈರಸ್‌ಗಳಾದ ಸಾರ್ಸ್‌ ಮತ್ತು ಮೆರ್ಸ್‌ಗಿಂತ ಸುಲಭವಾಗಿ ಹನಿಗಳ ರೂಪದಲ್ಲಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಆರೋಗ್ಯ ಪರಿಸ್ಥಿತಿ ತಜ್ಞರಾದ ಡಾ| ಮೈಕ್‌ ರ‌್ಯಾನ್‌ ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.