ಸಿಂಗಾಪುರ ಆಹಾರೋದ್ಯಮಕ್ಕೂ ಹೊಡೆತ


Team Udayavani, May 6, 2020, 11:36 AM IST

ಸಿಂಗಾಪುರ ಆಹಾರೋದ್ಯಮಕ್ಕೂ ಹೊಡೆತ

ಸಿಂಗಾಪುರ: ವಿಶ್ವದಲ್ಲೇ ವಾಣಿಜ್ಯ ಮತ್ತು ಉದ್ಯಮ ಕ್ಷೇತ್ರಗಳಲ್ಲಿಗೆ ಹೆಸರುವಾಸಿಯಾದ ದೇಶಗಳ ಪೈಕಿ ಸಿಂಗಾಪುರ ಗುರುತಿಸಿಕೊಂಡಿದೆ. ಇದೊಂದು ಅಂತಾರಾಷ್ಟ್ರೀಯ ಪ್ರವಾಸ ಕೇಂದ್ರವೂ ಹೌದು. ಹಾಗಾಗಿ ಇಲ್ಲಿ ಆಹಾರ ಮತ್ತು ಅತಿಥ್ಯ ಕ್ಷೇತ್ರಗಳು ಮುಂಚೂಣಿಯಲ್ಲಿವೆ.

ಆದರೆ ಕೋವಿಡ್‌-19 ಬಿಕ್ಕಟ್ಟಿನಿಂದಾಗಿ ಈ ವಾಣಿಜ್ಯ ನಗರಿ ನಲುಗುತ್ತಿದ್ದು, ಮುಖ್ಯವಾಗಿ ಪ್ರವಾಸಿಗರನ್ನೇ ನೆಚ್ಚಿ ಕೊಂಡಿದ್ದ ಹೊಟೇಲ್‌ ಉದ್ಯಮಿಗಳು ಮತ್ತು ಬೀದಿ ಬದಿ ಕ್ಯಾಂಟೀನ್‌ಗಳನ್ನು ನಡೆಸಿ ಜೀವನ ಮಾಡುತ್ತಿದ್ದವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮತ್ತಷ್ಟು ಹದಗೆಡಿಸಿತು
ಸಿಂಗಾಪುರದಲ್ಲಿ ಕೆಲ ಹೆಸರಾಂತ ಫುಡ್‌ ಸ್ಟ್ರೀಟ್ ಗಳಿದ್ದು, ಉತ್ತಮ ರುಚಿಯೊಂದಿಗೆ ಅಗ್ಗದ ಬೆಲೆಯಲ್ಲಿ ಆಹಾರ ಸಿಗುತ್ತದೆ. ಇದು ಪ್ರವಾಸಿಗರ ಆಕರ್ಷಣೀಯ ಸ್ಥಳಗಳೂ ಹೌದು. ಆದರೆ ಕೋವಿಡ್‌-19 ಆರ್ಭಟ ಪ್ರಾರಂಭವಾಗುವ ಮುನ್ನವೇ ಆರ್ಥಿಕ ಸಂಕಷ್ಟಕ್ಕೆ ಈ ಉದ್ಯಮಗಳು ಸಿಲುಕಿದ್ದು, ಈಗ ಮತ್ತಷ್ಟು ಹದಗೆಟ್ಟಿವೆ ಎಂದು ಅಲ್‌ ಜಜೀರಾ ವರದಿ ಮಾಡಿದೆ.

ದೇಶದಲ್ಲಿ ಏಪ್ರಿಲ್‌ 7 ರಿಂದ ಲಾಕ್‌ಡೌನ್‌ ಜಾರಿಯಲ್ಲಿದೆ. ಪರಿಣಾಮ ನಗರದ ಪ್ರತಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಕನಿಷ್ಠ ಜೂನ್‌ 1 ರವರೆಗೆ ಕಡೆ ಇದೇ ಸ್ಥಿತಿ ಇರ ಬಹುದು ಎನ್ನಲಾಗುತ್ತಿದೆ. ಈಗಾಗಲೇ ವ್ಯಾಪಾರ ಪ್ರಮಾ ಣದಲ್ಲಿ ಮೂರನೇ ಎರಡು ಭಾಗದಷ್ಟು ಕುಸಿತವಾಗಿದೆ. ಆದ ಕಾರಣ ಇದೇ ವೃತ್ತಿಯನ್ನು ನಂಬಿಕೊಂಡವರೆಲ್ಲಾ ಅತಂತ್ರರಾಗಿದ್ದಾರೆ. ಇದರ ಮಧ್ಯೆ ಜೀವನ ಶೈಲಿ ಹಾಗೂ ಮತ್ತಿತರ ಕಾರಣಗಳಿಂದ ಜನರೂ ಸಣ್ಣ ಪುಟ್ಟ ಹೋಟೆಲ್‌-ಕ್ಯಾಂಟೀನ್‌ಗಳಲ್ಲಿನ ಆಹಾರ ಸೇವನೆಯಿಂದ ದೂರ ಉಳಿಯುತ್ತಿದ್ದಾರೆ. ಸರಕಾರವು ಸದ್ಯಕ್ಕೆ ಅಗತ್ಯ ವಸ್ತುಗಳ ಖರೀದಿಸುವಿಕೆಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ. ಆದರೆ ನಮ್ಮನ್ನು ಮರೆತೇ ಬಿಟ್ಟಿದೆ ಎಂದು ಮಾಧ್ಯಮ ಗಳಿಗೆ ವ್ಯಾಪಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ ಜಾರಿಯಾದಾಗಿನಿಂದ ಆಹಾರ ಪದಾರ್ಥಗಳ ಬೆಲೆಯೂ ಹೆಚ್ಚಾಗಿದ್ದು, ಶೇ.20 ರಿಂದ ಶೇ.30 ರಷ್ಟು ದರ ಏರಿಕೆಯಾಗಿದೆ. ಇದೂ ಸಹ ಉದ್ಯಮವನ್ನು ನಷ್ಟದತ್ತ ದೂಡುತ್ತಿದೆ.

ಹೋಮ್‌ ಡೆಲಿವರಿ ಉಪಾಯ
ಉದ್ಯಮವನ್ನು ಹೇಗಾದರೂ ಉಳಿಸಿಕೊಳ್ಳಬೇಕೆಂದು ಕೆಲವು ಉದ್ಯಮಿಗಳು ಹಾಗೂ ಕಂಪೆನಿಗಳು ಹೋಮ್‌ ಡೆಲಿವರಿಗೆ ಮುಂದಾಗಿವೆ. ವ್ಯಾಪಾರಿಗಳು ಮತ್ತು ಗ್ರಾಹಕರ ನಡುವೆ ಸಂಪರ್ಕ ಕಲ್ಪಿಸಲು ಫೇಸ್‌ಬುಕ್‌ ಮೊರೆಹೋಗಿದ್ದಾರೆ. ಯುನೈಟೆಡ್‌ -ಡಬಾವೊ 2020 ( ಹೋಮ್‌ ಡೆಲೆವರಿ ಎಂಬ ಅರ್ಥವನ್ನು ನೀಡಲಿದ್ದು ಅಲ್ಲಿನ ಆಡು ಭಾಷೆ ಇದಾಗಿದೆ ) ಎಂಬ ಖಾತೆ ತೆರೆದಿದ್ದು, ಸ್ಥಗಿತಗೊಂಡಿದ್ದ ವ್ಯಾಪಾರ ಚಟುವಟಿಕೆಗಳಿಗೆ ಪುನರಾರಂಭಿಸುವ ಪ್ರಯತ್ನ ನಡೆದಿದೆ. ಎಪ್ರಿಲ್‌ ಮೊದಲ ವಾರದಲ್ಲಿ ಈ ಖಾತೆ ರಚನೆಯಾಗಿದ್ದು, ಆರಂಭದ ದಿನಗಳಲ್ಲಿ ಕೇವಲ ಬೆರಳೆಣಿಕೆ ಯಷ್ಟು ಜನರಿ ದ್ದರು. ಆದರೆ ಪ್ರಸ್ತುತ ಸುಮಾರು 2.5 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿದೆ. ಅಂಗಡಿಗಳಲ್ಲಿ ನಡೆಯುತ್ತಿದ್ದ ನಿಗದಿತ ವ್ಯಾಪಾರ ಪ್ರಮಾಣದಲ್ಲಿ ಶೇ.20ರಷ್ಟು ಕಡಿಮೆಯಾದರೂ, ಸಾಮಾಜಿಕ ಜಾಲತಾಣ ಮೂಲಕ ಗ್ರಾಹಕರು ಆರ್ಡರ್‌ಗಳನ್ನು ನೀಡುತ್ತಿದ್ದು, ಒಟ್ಟಾರೆ ವ್ಯವಹಾರದಲ್ಲಿ ಶೇ.50ರಷ್ಟು ಹೆಚ್ಚಾಗಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.