Covid: ಮೂರು ರಾಜ್ಯಗಳಲ್ಲಿ ಈಗ ಕೋವಿಡ್‌ ಹೊಸ ತಳಿ ಪತ್ತೆ- ಜೆಎನ್‌.1ರ 21 ಕೇಸುಗಳು ದೃಢ

ದೇಶದಲ್ಲಿ 7 ತಿಂಗಳಲ್ಲೇ ಅಧಿಕ ಪ್ರಕರಣ- ಹೊಸ ತಳಿ ಆತಂಕಕಾರಿ ಅಲ್ಲ, ಆದರೆ ಎಚ್ಚರ ಅಗತ್ಯ: ವಿಶ್ವ ಆರೋಗ್ಯ ಸಂಸ್ಥೆ

Team Udayavani, Dec 21, 2023, 12:06 AM IST

covid 1

ಹೊಸದಿಲ್ಲಿ: ಕೋವಿಡ್‌ ಸೋಂಕಿನ ಉಪ ರೂಪಾಂತರಿ ಜೆಎನ್‌.1 ಭೀತಿ ದಿನೇದಿನ ಹೆಚ್ಚಳವಾಗುತ್ತಿದ್ದು, ದೇಶದ ಮೂರು ರಾಜ್ಯಗಳಲ್ಲಿ ಈ ಸೋಂಕು ಪತ್ತೆಯಾಗಿದೆ. ಈವರೆಗೆ ಒಟ್ಟಾರೆ 21 ಪ್ರಕರಣಗಳು ದೃಢಪಟ್ಟಿವೆ ಎಂದು ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ವಿ.ಕೆ. ಪೌಲ್‌ ಹೇಳಿದ್ದಾರೆ.

ಗೋವಾ, ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಜೆಎನ್‌.1 ಪ್ರಕರಣಗಳಿದ್ದು, ಈ ಪೈಕಿ ಗೋವಾದಲ್ಲಿ 19, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ತಲಾ 1 ಕೇಸು ದೃಢಪಟ್ಟಿವೆ ಎಂದೂ ಅವರು ತಿಳಿಸಿದ್ದಾರೆ. ಆದರೆ ಯಾರೂ ಕೂಡ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ತತ್‌ಕ್ಷಣಕ್ಕೆ ಈ ಹೊಸ ತಳಿ ಕಳವಳಕಾರಿಯೇನೂ ಅಲ್ಲ. ಸದ್ಯ ದೃಢಪಟ್ಟಿರುವ ಶೇ.91ರಿಂದ ಶೇ.92 ಪ್ರಕರಣಗಳಲ್ಲಿ ಸೋಂಕಿತರು  ಮನೆಯಲ್ಲಿಯೇ ಇದ್ದು ಆರೈಕೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ರಾಜ್ಯಗಳಲ್ಲಿ ಕೊರೊನಾ ಪತ್ತೆ ಪರೀಕ್ಷೆ ಮತ್ತು ನಿಗಾ ವ್ಯವಸ್ಥೆ ಮತ್ತಷ್ಟು ಬಲಪಡಿಸಲು ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಪೌಲ್‌ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ, ಕೇರಳ, ಮಹಾರಾಷ್ಟ್ರ, ಝಾರ್ಖಂಡ್‌ಗಳಲ್ಲಿ ದೈನಂದಿನ ಪಾಸಿಟಿವಿಟಿ ಪ್ರಮಾಣದಲ್ಲಿ ಏರಿಕೆಯೂ ಆಗುತ್ತಿದೆ ಎಂದು ಕೇಂದ್ರ ಸರಕಾರ ಅಭಿಪ್ರಾಯಪಟ್ಟಿದೆ.  ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಹೊಸ ರೂಪಾಂತರಿ “ಗಮನಿಸಬೇಕಾದ ರೂಪಾಂತರಿಯೇ ಹೊರತು ಕಳವಳಕ್ಕೆ ಕಾರಣವಾಗುವಂಥದ್ದಲ್ಲ’ ಎಂದು ಈಗಾಗಲೇ ಹೇಳಿದೆ.

24 ಗಂಟೆಗಳಲ್ಲಿ 614 ಹೊಸ ಕೇಸು: ಮಂಗಳವಾರದಿಂದ ಬುಧವಾರದ ಅವಧಿಯಲ್ಲಿ ದೇಶದಲ್ಲಿ ಹೊಸತಾಗಿ 614 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಮೇ 21ರ ಬಳಿಕ ಅಂದರೆ ಕಳೆದ 7 ತಿಂಗಳಲ್ಲೇ ಇದು ಗರಿಷ್ಠ ಪ್ರಕರಣ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 2,311ಕ್ಕೆ ಏರಿಕೆಯಾಗಿದೆ.

ಕೇರಳದಲ್ಲೇ ಅಧಿಕ: ಒಟ್ಟು 614ರ ಪೈಕಿ ಕೇರಳವೊಂದರಲ್ಲೇ 292 ಕೊರೊನಾ ಕೇಸುಗಳು ದೃಢಪಟ್ಟಿದ್ದು, ಮೂವರು ಅಸುನೀಗಿದ್ದಾರೆ. ಸಕ್ರಿಯ ಪ್ರಕರಣಗಳ ಪೈಕಿ ಕೇರಳದಲ್ಲಿಯೇ 2,041 ಕೇಸುಗಳು ಇವೆ.

ಎಚ್ಚರದಿಂದ ಇರೋಣ; ಆರೋಗ್ಯ ವಿಚಾರದಲ್ಲಿ ರಾಜಕೀಯ ಬೇಡ: ಸಚಿವ ಮಾಂಡವಿಯಾ

“ಕೊರೊನಾ ಮತ್ತೆ ಹೆಚ್ಚಾಗುತ್ತಿರುವ ವಿಚಾರದಲ್ಲಿ ರಾಜಕೀಯ ಬೇಡ. ಎಲ್ಲರೂ ಎಚ್ಚರಿಕೆಯಿಂದ ಇರೋಣ. ಆತಂಕಪಡುವ ಅಗತ್ಯ ಇಲ್ಲ” ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್‌ಸುಖ್‌ಮಾಂಡವಿಯಾ ಹೇಳಿದ್ದಾರೆ. ರಾಜ್ಯಗಳ ಆರೋಗ್ಯ ಸಚಿವರ ಜತೆಗೆ ಬುಧವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಪರಿಶೀಲನ ಸಭೆ ನಡೆಸಿದ ಸಂದರ್ಭದಲ್ಲಿ ಅವರು ಈ ಸಲಹೆ ನೀಡಿದ್ದಾರೆ. ಕೊರೊನಾ ಸಮಸ್ಯೆ ಪೂರ್ತಿಯಾಗಿ ನಿವಾರಣೆ ಆಗಿಲ್ಲ. ರಾಜ್ಯಗಳು ಹೆಚ್ಚಿನ ನಿಗಾ ಇರಿಸಬೇಕು. ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಂದೇ ತಂಡದ ರೀತಿಯಲ್ಲಿ ಕೆಲಸ ಮಾಡಬೇಕು. ಆಸ್ಪತ್ರೆಗಳು ಸನ್ನದ್ಧ ಸ್ಥಿತಿಯಲ್ಲಿ ಇರುವ ಬಗ್ಗೆ ಪ್ರಾಯೋಗಿಕ ಪ್ರಯೋಗವೂ ನಡೆಯಬೇಕಾಗಿದೆ” ಎಂದು ಮಾಂಡವೀಯಾ ಹೇಳಿದ್ದಾರೆ. ಕೇಂದ್ರದಿಂದ ರಾಜ್ಯ ಸರಕಾರಗಳಿಗೆ ಎಲ್ಲ ರೀತಿಯ ನೆರವನ್ನೂ ನೀಡಲಾಗುತ್ತದೆ ಎಂದೂ ಸಚಿವರು ಹೇಳಿದ್ದಾರೆ.

ಆರೋಗ್ಯ ಸಚಿವರ ಸಲಹೆಗಳೇನು?

-ನಾವೆಲ್ಲರೂ ಅಲರ್ಟ್‌ ಆಗಿರಬೇಕು, ಹಾಗಂತ ಆತಂಕದ ಅಗತ್ಯವಿಲ್ಲ

-ಎಲ್ಲ ರಾಜ್ಯಗಳು ಕೊರೊನಾ ಸೋಂಕಿನ ಕುರಿತ ಹೆಚ್ಚಿನ ನಿಗಾ ವಹಿಸಬೇಕು

-ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಿ

-ಪಾಸಿಟಿವ್‌ ಸ್ಯಾಂಪಲ್‌ಗ‌ಳನ್ನು ಜಿನೋಮ್‌ ಸೀಕ್ವೆನ್ಸಿಂಗ್‌ ಲ್ಯಾಬ್‌ಗ ಕಳುಹಿಸಿಕೊಡಿ

-ಔಷಧ, ಆಮ್ಲಜನಕ ಸಿಲಿಂಡರ್‌ಗಳು, ವೆಂಟಿಲೇಟರ್‌ಗಳು, ಲಸಿಕೆಗಳು ಸಾಕಷ್ಟು ಲಭ್ಯವಿರುವಂತೆ ನೋಡಿಕೊಳ್ಳಿ

-ಪ್ರತೀ ಮೂರು ತಿಂಗಳಿಗೊಮ್ಮೆ ಎಲ್ಲ ಆಸ್ಪತ್ರೆಗಳಲ್ಲಿ ಮಾಕ್‌ ಡ್ರಿಲ್‌ ನಡೆಸಿ

-ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ನಾಗರಿಕರ‌ಲ್ಲಿ ಜಾಗೃತಿ ಮೂಡಿಸಿ

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.