ಚಾಮರಾಜನಗರದಲ್ಲಿ ಕೋವಿಡ್ ಪ್ರಕರಣಗಳ ಸ್ಫೋಟ : 752 ಪ್ರಕರಣ ದೃಢ, ಓರ್ವ ಸೋಂಕಿತ ಸಾವು


Team Udayavani, Jan 23, 2022, 8:50 PM IST

ಚಾಮರಾಜನಗರದಲ್ಲಿ ಕೋವಿಡ್ ಪ್ರಕರಣಗಳ ಸ್ಫೋಟ : 752 ಪ್ರಕರಣ ದೃಢ

ಚಾಮರಾಜನಗರ : ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನ 752 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 254 ಮಂದಿ ಮಕ್ಕಳಿಗೆ ಕೋವಿಡ್ ಸೋಂಕು ತಗುಲಿದೆ. ಇದು ಜಿಲ್ಲೆಯಲ್ಲಿ ಒಂದೇ ದಿನ ದೃಢಪಟ್ಟ ಎರಡನೇ ಅತಿ ಹೆಚ್ಚು ಪ್ರಕರಣಗಳಾಗಿವೆ. ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಗುಂಡ್ಲುಪೇಟೆ ತಾಲೂಕು ವಡ್ಡಗೆರೆ ಗ್ರಾಮದ 46 ವರ್ಷದ ವ್ಯಕ್ತಿ ಮೃತಪಟ್ಟವರು. ಇವರು ಜ. 18ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮೃತಪಟ್ಟಿದ್ದಾರೆ.

ಒಟ್ಟು 3095 ಮಾದರಿಗಳನ್ನು ಪರೀಕ್ಷಿಸಲಾಗಿತ್ತು. ಇದರಲ್ಲಿ 2328 ಆರ್‌ಟಿಪಿಸಿಆರ್ ಹಾಗೂ 767 ರ್ಯಾಪಿಡ್ ಆಂಟಿಜೆನ್ ಟೆಸ್‌ಟ್ಗಳಾಗಿವೆ. ಒಟ್ಟು ಪ್ರಕರಣಗಳಲ್ಲಿ ಚಾಮರಾಜನಗರ ತಾಲೂಕಿನಲ್ಲೇ ಹೆಚ್ಚು ಅಂದರೆ 358 ಜನರಿಗೆ ಸೋಂಕು ತಗುಲಿದೆ. ಗುಂಡ್ಲುಪೇಟೆ ತಾಲೂಕಿನ 121 ಜನರಿಗೆ, ಕೊಳ್ಳೇಗಾಲ ತಾಲೂಕಿನ 141 ಜನರಿಗೆ, ಹನೂರು ತಾಲೂಕಿನ 54 ಮಂದಿಗೆ ಹಾಗೂ ಯಳಂದೂರು ತಾಲೂಕಿನ 78 ಮಂದಿಗೆ ಸೋಂಕು ತಗುಲಿದೆ. ಗ್ರಾಮೀಣ ಪ್ರದೇಶಕ್ಕಿಂತ ಪಟ್ಟಣ ಪ್ರದೇಶದ ಜನರಲ್ಲಿ ಹೆಚ್ಚು ಸೋಂಕು ತಗುಲಿದೆ. ಪಟ್ಟಣ ಪ್ರದೇಶಗಳಲ್ಲಿ ಒಟ್ಟು 520 ಜನರು, ಗ್ರಾಮೀಣ ಪ್ರದೇಶದಲ್ಲಿ 232 ಜನರು ಪಾಸಿಟಿವ್ ಆಗಿದ್ದಾರೆ.

2021ರ ಮೇ 9ರಂದು ಅತಿ ಹೆಚ್ಚು ಎಂದರೆ 910 ಪ್ರಕರಣಗಳು ದೃಢಪಟ್ಟಿದ್ದವು. ಅದಾದ ಬಳಿಕ ಭಾನುವಾರ ದೃಢಪಟ್ಟಿರುವ 752 ಪ್ರಕರಣಗಳು ಒಂದೇ ದಿನದ ಅತಿ ಹೆಚ್ಚು ಪ್ರಕರಣಗಳಾಗಿವೆ. ಸೋಂಕು ಹರಡುತ್ತಿರುವ ವೇಗ ನೋಡಿದರೆ ಇನ್ನೊಂದು ವಾರದೊಳಗೆ ದೈನಿಕ ಸೋಂಕಿನ ಪ್ರಮಾಣ ಒಂದು ಸಾವಿರ ದಾಟುವ ನಿರೀಕ್ಷೆ ಇದೆ. ಭಾನುವಾರ 83 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2579ಕ್ಕೇರಿದೆ. ಒಟ್ಟು 524 ಮಂದಿ ಮೃತಪಟ್ಟಿದ್ದಾರೆ. 36,062 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಇವರಲ್ಲಿ 32,939 ಮಂದಿ ಗುಣಮುಖರಾಗಿದ್ದಾರೆ.

ಚಾಮರಾಜನಗರ ಜಿಲ್ಲೆ ಕೋವಿಡ್ ಅಂಕಿ ಅಂಶ
ಇಂದಿನ ಪ್ರಕರಣ : 752
ಇಂದು ಗುಣಮುಖ : 83
ಒಟ್ಟು ಗುಣಮುಖ : 32,939
ಇಂದಿನ ಸಾವು : 01
ಒಟ್ಟು ಸಾವು : 524
ಸಕ್ರಿಯ ಪ್ರಕರಣಗಳು : 2579
ಒಟ್ಟು ಪ್ರಕರಣಗಳು : 36,062

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.