Deepfakesಗೆ ಕಡಿವಾಣ ಹಾಕಿ: ಸಾಮಾಜಿಕ ಜಾಲತಾಣಗಳಿಗೆ ಅಪ್ಪಣೆ


Team Udayavani, Dec 27, 2023, 12:34 AM IST

DEEP FAKE

ಹೊಸದಿಲ್ಲಿ: ನಟಿ ರಶ್ಮಿಕಾ ಮಂದಣ್ಣ ಸೇರಿದಂತೆ ಹಲವರ ಫೋಟೋ ಡೀಪ್‌ಫೇಕ್‌ ಆದ ಬಳಿಕ ದೇಶದಲ್ಲಿ ಈ ಎಐ ಆಧಾರಿತ ತಂತ್ರಜ್ಞಾನದ ಬಗ್ಗೆ ಕಾಳಜಿ ಹೆಚ್ಚಿದ್ದು, ಡೀಪ್‌ಫೇಕ್‌ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲ ಸಾಮಾಜಿಕ ಜಾಲತಾಣ ವೇದಿಕೆಗಳಿಗೆ ಕೇಂದ್ರ ಸರಕಾರ ಮಂಗಳವಾರ ಹೊಸ ಮಾರ್ಗಸೂಚಿ ಬಿಡುಗಡೆ ಗೊಳಿಸಿದೆ. ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಹೊರಡಿಸಿರುವ ಮಾರ್ಗ ಸೂಚಿಯಲ್ಲಿ ಎಲ್ಲ ಜಾಲತಾಣ ವೇದಿಕೆಗಳೂ ದೇಶದ ಐಟಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಜಾಲತಾಣ ಬಳಕೆದಾರರಿಗೆ ಐಟಿ ನಿಯಮಗಳ ಅನ್ವಯ ನಿಷೇಧಿಸಿರುವ ಕಂಟೆಂಟ್‌ಗಳನ್ನು ಜಾಲತಾಣದಲ್ಲಿ ಹಬ್ಬಿಸದಂತೆ ವಿಶೇಷವಾಗಿ 3(1)(ಬಿ) ಅನ್ವಯ ವಿಧಿಸಿರುವ ಕ್ರಮಗಳನ್ನು ಮೀರ ದಂತೆ ನಿಖರವಾಗಿ ತಿಳಿಸಬೇಕು ಎಂದು ಸೂಚಿಸಿದೆ. ಬಳಕೆದಾರರು ಎಸಗುವ ತಪ್ಪುಗಳಿಗೆ ಐಟಿ ಕಾಯ್ದೆ 2000 ಹಾಗೂ ಐಪಿಸಿ ಸೆಕ್ಷನ್‌ಗಳ ಅನ್ವಯ ವಿಧಿಸಬಹು ದಾದ ಶಿಕ್ಷೆಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಇತ್ತೀಚೆಗಷ್ಟೇ ಡೀಪ್‌ಫೇಕ್‌ ತಂತ್ರಜ್ಞಾನದ ಬಗ್ಗೆ ಆತಂಕ ವ್ಯಕ್ತ ಪಡಿಸಿ ಜನರಿಗೆ ಈ ಬಗ್ಗೆ ತಿಳಿವಳಿಕೆ ನೀಡುವಂತೆ ಮಾಧ್ಯಮಗಳನ್ನು ಕೋರಿದ್ದರು.

ಡೀಪ್‌ಫೇಕ್‌ ವೀಡಿಯೋಗಳಲ್ಲಿ ಜಾಲತಾಣಗಳಲ್ಲಿ ವೈರಲ್‌ ಆಗಿ ಈ ಸಂಬಂಧಿಸಿದಂತೆ ಹಲವು ಪ್ರಕರಣಗಳು ದಾಖಲಾದ ಬಳಿಕ ಮೆಟಾ, ಸ್ನ್ಯಾಪ್‌ಚಾಟ್‌, ಶೇರ್‌ಚಾಟ್‌, ಟೆಲಿಗ್ರಾಮ್‌, ಕೂ ಸೇರಿದಂತೆ ಹಲವು ಜಾಲತಾಣ ವೇದಿಕೆಗಳ ಅಧಿಕಾರಿಗಳು ಕೇಂದ್ರ ಐಟಿ ಖಾತೆ ರಾಜ್ಯ ಸಚಿವ ರಾಜೀವ್‌ ಚಂದ್ರಶೇಖರ್‌ ಅವರನ್ನು ಭೇಟಿಯಾಗಿದ್ದರು. ಅದಾದ ಒಂದು ತಿಂಗಳ ಬಳಿಕ ಈ ಮಾರ್ಗಸೂಚಿ ಬಂದಿದೆ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.