Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Mar 12, 2024, 12:47 AM IST

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಕಳವು ಪ್ರಕರಣ: ಆರೋಪಿಯ ಬಂಧನ
ಕಾಸರಗೋಡು: ಕಳವು ಪ್ರಕರಣಕ್ಕೆ ಸಂಬಂಧಿಸಿ ಚೀಮೇನಿಯ ವಾರಂಟ್‌ ಆರೋಪಿ ಅಖೀಲ್‌ (28) ಎಂಬಾತನನ್ನು ಚೀಮೇನಿ ಪೊಲೀಸರು ಬಂಧಿಸಿದ್ದಾರೆ.

ಯುವಕನ ಕೊಲೆ: ಇಬ್ಬರು ಕೊಲ್ಲಿಗೆ ಪರಾರಿ
ಮುಳ್ಳೇರಿಯಾ: ಮೀಯಪದವು ಮದಕ್ಕಳ ನಿವಾಸಿ ದಿ|ಅಬ್ದುಲ್ಲ ಅವರ ಪುತ್ರ ಮೊದೀನ್‌ ಆರಿಫ್‌ (22) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲು ಬಾಕಿಯಿರುವ ಆರು ಮಂದಿಯ ಪೈಕಿ ಇಬ್ಬರು ಆರೋಪಿಗಳು ಗಲ್ಫ್ ದೇಶಕ್ಕೆ ಪರಾರಿಯಾಗಿದ್ದಾರೆ. ಇತರ ನಾಲ್ವರು ಗೋವಾ ಹಾಗೂ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತನಿಖೆ ನಡೆಸುತ್ತಿರುವ ಮಂಜೇಶ್ವರ ಪೊಲೀಸರು ಶಂಕಿಸಿದ್ದಾರೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಮಾ. 4ರಂದು ಕೊಲೆ ಪ್ರಕರಣ ನಡೆದಿತ್ತು.

ಕಳವಿಗೆ ಯತ್ನ: ಬಂಧನ
ಕಾಸರಗೋಡು: ನಗರದ ಐ.ಸಿ.ಭಂಡಾರಿ ರಸ್ತೆಯಲ್ಲಿನ ರಾಜ್ಯ ಬಿವರೇಜ್‌ ಕಾರ್ಪೊರೇಶನ್‌ನ ಮದ್ಯದಂಗಡಿಯಿಂದ ಕಳವಿಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ತಳಂಗರೆ ನಿವಾಸಿ ಉಮೈರ್‌(21)ನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಮಾ.6 ರಂದು ರಾತ್ರಿ ಮದ್ಯದಂಗಡಿಯಿಂದ ಕಳವು ಯತ್ನ ನಡೆದಿತ್ತು.

ಆಡು ಕಳವು: ಬಂಧನ
ಕುಂಬಳೆ: ಇಲ್ಲಿನ ಪಿಎಚ್‌ಸಿ ರಸ್ತೆಯ ಅಬ್ಟಾಸ್‌ ಅವರ ಮನೆಯ ಆಡುಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಶಕ್ಕಲ್ಲ ಖಾನ್‌(23)ನನ್ನು ಕರ್ನಾಟಕದ ಬ್ರಹ್ಮಪುರದಿಂದ ಕರ್ನಾಟಕ ಪೊಲೀಸರ ನೆರವಿನೊಂದಿಗೆ ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾ ಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ತಿಂಗಳ ಹಿಂದೆ ನಾಲ್ಕು ಆಡುಗಳನ್ನು ಕಳವು ಮಾಡಲಾಗಿತ್ತು.

ಹಲ್ಲೆ ಪ್ರಕರಣ : ಕೇಸು ದಾಖಲು
ಮುಳಿಯಾರು: ಇಲ್ಲಿಗೆ ಸಮೀಪದ ಇರಿಯಣ್ಣಿಯ ಎನ್‌.ಎಚ್‌. ರಸ್ತೆಯಲ್ಲಿ ಮಾ.8ರಂದು ಕುತ್ತಿಕೋಲ್‌ ಬೇತೂರುಪಾರ ಕಾವಿಂಡಡಿ ಹೌಸ್‌ನ ಜಿತೇಶ್‌ ಕೆ.ಎಚ್‌. (22) ಅವರಿಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮುಳಿಯಾರು ನಿವಾಸಿಗಳಾದ ರಾಜೇಶ್‌, ಸನಲ್‌, ಗೋಪು ಕುಟ್ಟನ್‌ ವಿರುದ್ಧ ಆದೂರು ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಸಾರಾಯಿ ಸಹಿತ ಬಂಧನ
ಬದಿಯಡ್ಕ: ಅಡೂರು ಗ್ರಾಮದ ಪಯರಡ್ಕ- ತಿಮ್ಮಯ್ಯದಿಂದ ಬದಿಯಡ್ಕ ಅಬಕಾರಿ ದಳ ಐದು ಲೀಟರ್‌ ಮದ್ಯ ವಶಪಡಿಸಿಕೊಂಡಿದ್ದು, ಈ ಸಂಬಂಧ ತಿಮ್ಮಯ್ಯಮೂಲೆಯ ಚಂದ್ರನ್‌ ಟಿ. (41)ನನ್ನು ಬಂಧಿಸಿದೆ.

ಭಜನ ಮಂದಿರದಿಂದ ಕಳವು: ಬಂಧನ
ಅಡೂರು: ಪಾಂಡಿಯ ಭಜನ ಮಂದಿರದಿಂದ ಕಾಣಿಕೆ ಹುಂಡಿ ಕಳವುಗೈದಿದ್ದು, ಸ್ಥಳೀಯರು ಓರ್ವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಇನ್ನೋರ್ವ ಪರಾರಿಯಾಗಿದ್ದಾನೆ. ಮಾ.10ರಂದು ರಾತ್ರಿ 9.30ಕ್ಕೆ ಹುಂಡಿ ಕಳವು ಮಾಡಿದ್ದು ಹುಂಡಿಯಲ್ಲಿ ಸುಮಾರು ನಾಲ್ಕು ಸಾವಿರ ರೂ. ಇತ್ತೆನ್ನಲಾಗಿದೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Arrested: ಪತ್ನಿಯ ಕೊ*ಲೆಗೆ ಯತ್ನ; ಪತಿಯ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Kasargod: ಕೊ*ಲೆ ಯತ್ನ: ನಾಲ್ವರ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Arrested: ಹಲವು ಪ್ರಕರಣಗಳ ಆರೋಪಿ ಬಂಧನ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

Kasargod: ವಿದ್ಯಾರ್ಥಿಗೆ ಹಲ್ಲೆ: ಇಬ್ಬರಿಗೆ ಸಜೆ, ದಂಡ

ಕಾಸರಗೋಡು ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

Kasaragod ರೈಲು ನಿಲ್ದಾಣದ ಕನ್ನಡ ನಾಮಫಲಕ ಮತ್ತೆ ಅಳವಡಿಕೆಗೆ ಆಗ್ರಹ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.