ಆಸ್ತಿ ತಕರಾರು : ಪೆರಾಜೆಯಲ್ಲಿ ಯುವಕನ ಕೊಲೆ

ಪಾನಮತ್ತನಾಗಿ ಮನೆಗೆ ಹೊಕ್ಕ ಮೈದುನನಿಗೆ ಕಡಿದ ಅತ್ತಿಗೆ

Team Udayavani, May 9, 2020, 12:31 PM IST

ಆಸ್ತಿ ತಕರಾರು : ಪೆರಾಜೆಯಲ್ಲಿ ಯುವಕನ ಕೊಲೆ

ಸುಳ್ಯ : ಆಸ್ತಿ ತಕರಾರಿನ ಹಿನ್ನಲೆಯಲ್ಲಿ ತನ್ನ ಮನೆಗೆ ಪಾನಮತ್ತನಾಗಿ ಹೊಕ್ಕ ಮೈದುನನ್ನು ಅತ್ತಿಗೆ ಹಾಗೂ ಆಕೆಯ ಮಗ ಸೇರಿ ಕತ್ತಿಯಿಂದ ಕಡಿದ ಪರಿಣಾಮ ಮೈದುನ ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ಪೆರಾಜೆಯಲ್ಲಿ ನಡೆದಿದೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಕತ್ತಿಯಿಂದ ಕಡಿದ ಅತ್ತಿಗೆ ಮತ್ತು ಆಕೆಯ ಪುತ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೆರಾಜೆ ಗ್ರಾಮದ ಪೀಚೆ ಎಂಬಲ್ಲಿ  ಶುಕ್ರವಾರ ಮಧ್ಯರಾತ್ರಿ ಈ ಘಟನೆ ಸಂಭವಿಸಿದೆ. ಪೀಚೆ ಮನೆಯ ಶ್ರೀಮತಿ ತಾರಿಣಿ ಹಾಗೂ ಉತ್ತರಕುಮಾರ ಎಂಬವರ ಜಾಗ ಅಕ್ಕಪಕ್ಕದಲ್ಲಿದ್ದು, ಸಂಬಂಧದಲ್ಲಿ ಇವರು ಅತ್ತಿಗೆ ಮತ್ತು ಮೈದುನ. ಇವರೊಳಗೆ ಆಸ್ತಿ ತಕರಾರು ಇತ್ತು. ನಿನ್ನೆ ಮಧ್ಯರಾತ್ರಿ ಉತ್ತರಕುಮಾರ ಪಾನಮತ್ತನಾಗಿ ತಾರಿಣಿಯವರ ಮನೆಯಂಗಳಕ್ಕೆ ಬಂದು ಬೈಯ್ಯತೊಡಗಿದರೆನ್ನಲಾಗಿದೆ ನಂತರ ಅವರ ಮನೆ ಹೊಕ್ಕಲು ಪ್ರಯತ್ನ ಪಟ್ಟಾಗ ತಾರಿಣಿ ಮತ್ತು ಆಕೆಯ ಪುತ್ರ ಧರಣೀಧರ ಕತ್ತಿಯಿದ ಕಡಿದಿದ್ದಾರೆ ಗಂಭೀರ ಗಾಯಗೊಂಡು ಕುಸಿದು ಬಿದ್ದ ಉತ್ತರಕುಮಾರ ಸ್ಥಳದಲ್ಲಿಯೇ ಸಾವನ್ನಪ್ಪಿದರೆನ್ನಲಾಗಿದೆ.

ಇಂದು ಬೆಳಿಗ್ಗೆ ಮಡಿಕೇರಿಯಿಂದ ಪೊಲೀಸ್ ಅಧಿಕಾರಿಗಳು ಆಗಮಿಸಿ ತನಿಖೆ ಆರಂಭಿಸಿದ್ದಾರೆ. ತಾರಿಣಿ ಮತ್ತು ಧರಣೀಧರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಆಸ್ತಿ ವೈಷಮ್ಯ

ಪೀಚೆ ಮನೆಯ ದಿ.ಸಣ್ಣಯ್ಯ ಮತ್ತು ದಿ.ಮುದ್ದಯ್ಯ ಸಹೋದರರು. ಸಣ್ಣಯ್ಯ ಗೌಡರ ಪುತ್ರ ದಿ.ಕೇಶವ, ಇವರ ಪತ್ನಿ ತಾರಿಣಿ. ಮುದ್ದಯ್ಯರವರ ಪುತ್ರ ಉತ್ತರಕುಮಾರ. ಆಸ್ತಿ ವಿಂಗಡಣೆಗೆ ಸಂಬಂಧಿಸಿ ತಾರಿಣಿ ಹಾಗೂ ಉತ್ತರಕುಮಾರರ ಮಧ್ಯೆ ವಿವಾದವಿತ್ತು. ಅವರ ಮಧ್ಯೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಕೆಲವು ತಿಂಗಳ ಹಿಂದೆ ತಾರಿಣಿಯವರ ಮನೆಗೆ ಸಂಬಂಧಿಕರೊಬ್ಬರು ಬಂದಿದ್ದಾಗ ಇವರು ಮಾಡಿಕೊಟ್ಟ ಚಹಾದಲ್ಲಿ ವಿಷ ಬೆರೆಸಿದ ಆರೋಪವನ್ನು ಉತ್ತರ ಮತ್ತು ಭವಾನಿಶಂಕರರ ಮೇಲೆ ತಾರಿಣಿಯವರು ಹೊರಿಸಿದ್ದರು. ಈ ಬಗ್ಗೆ ತಾರಿಣಿಯವರು ಪೊಲೀಸರಿಗೆ ದೂರನ್ನು ಕೂಡಾ ನೀಡಿದ್ದರು. ಆದರೆ ಅದು ತನಿಖೆಯಾಗಿಲ್ಲವೆನ್ನಲಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.