ಸ್ಮಾರ್ಟ್‌ ಸಿಟಿಯಲ್ಲಿ ಇನ್ನು ಸೈಕಲ್‌ ಸವಾರಿ : ಪ್ರಾಯೋಗಿಕವಾಗಿ 8 ನಿಲ್ದಾಣಗಳು ಸಜ್ಜು


Team Udayavani, Jan 18, 2022, 4:05 PM IST

ಸ್ಮಾರ್ಟ್‌ ಸಿಟಿಯಲ್ಲಿ ಇನ್ನು ಸೈಕಲ್‌ ಸವಾರಿ : ಪ್ರಾಯೋಗಿಕವಾಗಿ 8 ನಿಲ್ದಾಣಗಳು ಸಜ್ಜು

ಹುಬ್ಬಳ್ಳಿ: ಅವಳಿನಗರದಲ್ಲಿ ಸೈಕಲ್‌ ಬಳಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ, 34 ಕಡೆ ಸಾರ್ವಜನಿಕ ಸೈಕಲ್‌ ನಿಲ್ದಾಣಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು,
ಈಗಾಗಲೇ ಪ್ರಾಯೋಗಿಕವಾಗಿ 8 ಕಡೆ ನಿಲ್ದಾಣ ನಿರ್ಮಿಸಲಾಗಿದೆ.

ಅಂದಾಜು 8.5 ಕೋಟಿ ರೂ.ಗಳ ವೆಚ್ಚದಲ್ಲಿ ಬೈಸಿಕಲ್‌ ಯೋಜನೆ ರೂಪಿಸಲಾಗಿದ್ದು, ಇದರಿಂದ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯೋಜನೆ ಜಾರಿಗೆ ತರಲು ಸ್ಮಾಟ್‌ಸಿಟಿ ಕಂಪನಿ ಮುಂದಾಗಿದೆ.

ನಿಲ್ದಾಣಗಳು ಎಲ್ಲೆಲ್ಲಿ: ಸಾರ್ವಜನಿಕ ಅನುಕೂಲಕ್ಕಾಗಿ ನಿರ್ಮಿಸಿರುವ ಬೈಸಿಕಲ್‌ ನಿಲ್ದಾಣಗಳು ಇಲ್ಲಿನ ವಿದ್ಯಾನಗರ ಶಿರೂರ ಪಾರ್ಕ್‌ನ ಚೇತನ ಕಾಲೇಜು ಎದುರು, ಶ್ರೇಯಾ ಪಾರ್ಕ್‌ ತೋಳನಕೆರೆ ಬಳಿ, ಗೋಕುಲ ರಸ್ತೆ ಕೆಇಸಿ ಬಳಿ, ರಾಮಲಿಂಗೇಶ್ವರ ನಗರ ವೃತ್ತ, ಕೈಗಾರಿಕಾ ವಸಾಹತು ಪ್ರದೇಶ ಗೇಟ್‌ ನಂ.1, ತತ್ವದರ್ಶ ಆಸ್ಪತ್ರೆ ಎದುರು, ಉಣಕಲ್ಲ ಕೆರೆ ಆವರಣ, ಗೋಕುಲ ರಸ್ತೆ ರೇಣುಕಾ ನಗರ ಕ್ರಾಸ್‌, ಬಸವೇಶ್ವರ ನಗರ ಕ್ರಾಸ್‌, ಅಕ್ಷಯ ಪಾರ್ಕ್‌, ಹೊಸ ಕೋರ್ಟ್‌ ಸಂಕೀರ್ಣ, ಕಿಮ್ಸ್‌ ಮುಖ್ಯದ್ವಾರ, ಕಾಡಸಿದ್ದೇಶ್ವರ ಕಾಲೇಜು, ಖೋಡೆ ಹಾಸ್ಟೆಲ್‌, ಬಿವಿವಿ ಕಾಲೇಜು ನಿಲ್ದಾಣ, ಬಿವಿಬಿ ಲೇಡೀಸ್‌ ಹಾಸ್ಟೆಲ್‌, ಹೊಸೂರ ವೃತ್ತ, ಐಟಿ ಪಾರ್ಕ್‌, ಇಂದಿರಾ ಗಾಜಿನ ಮನೆ, ಹಳೆ ಕೋರ್ಟ್‌ ವೃತ್ತ, ಹಳೆಯ ಬಸ್‌ ನಿಲ್ದಾಣ, ಮೂರುಸಾವಿರಮಠ, ದುರ್ಗದ ಬಯಲು, ಸಿಬಿಟಿ, ಚಿಟಗುಪ್ಪಿ ವೃತ್ತ, ರೈಲ್ವೆ ನಿಲ್ದಾಣ, ಕೇಶ್ವಾಪುರ ವೃತ್ತ, ರಮೇಶ ಭವನ, ಸಿದ್ಧಾರೂಢಮಠ, ಇಂಡಿ ಪಂಪ್‌, ಹಳೇಹುಬ್ಬಳ್ಳಿ ಅಹಿಂಸಾ ವೃತ್ತ, ನ್ಯೂ ಇಂಗ್ಲಿಷ್‌ ಸ್ಕೂಲ್‌ ಸೇರಿ ಒಟ್ಟು 34 ಕಡೆಗಳಲ್ಲಿ ಹಂತ ಹಂತವಾಗಿ ನಿಲ್ದಾಣಗಳನ್ನು ಸ್ಥಾಪಿಸಲಾಗುತ್ತದೆ.

ಪ್ರಾಯೋಗಿಕವಾಗಿ ವಿದ್ಯಾನಗರ ಶಿರೂರ ಪಾರ್ಕ್‌ನ ಚೇತನ ಸ್ಕೂಲ್‌ ಬಳಿ, ಶ್ರೇಯಾ ಪಾರ್ಕ್‌ ತೋಳನಕೆರೆ ಬಳಿ, ಗೋಕುಲ ರಸ್ತೆ ಕೆಇಸಿ ಬಳಿ, ರಾಮಲಿಂಗೇಶ್ವರ ನಗರ ವೃತ್ತ, ಕೈಗಾರಿಕಾ ವಸಾಹತು ಪ್ರದೇಶ ಗೇಟ್‌ ನಂ.1, ತತ್ವದರ್ಶ ಆಸ್ಪತ್ರೆ ಎದುರು, ಉಣಕಲ್ಲ ಕೆರೆ ಆವರಣದಲ್ಲಿ ಬೈಸಿಕಲ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ.

ಪ್ರತಿ ನಿಲ್ದಾಣದಲ್ಲಿ ಕನಿಷ್ಟ 7-8 ಸೈಕಲ್‌ ಗಳು ಇರಲಿವೆ. ಜತೆಗೆ ಆಯಾ ಭಾಗದಲ್ಲಿನ ಸ್ಥಳಾವಕಾಶ ಮೇಲೆ ಹೆಚ್ಚಿನ ಸೈಕಲ್‌ ನಿಲ್ದಾಣಗಳನ್ನು ಪ್ರಾಯೋಗಿಕವಾಗಿ ನಿರ್ಮಿಸಲಾಗುತ್ತಿದ್ದು, ಇನ್ನುಳಿದ ನಿಲ್ದಾಣಗಳನ್ನು ಹಂತ ಹಂತವಾಗಿ 2-3 ವರ್ಷಗಳಲ್ಲಿ ನಿರ್ಮಿಸಲಾಗುತ್ತದೆ. ಬೈಸಿ ಕಲ್‌ ಸಂಚಾರಕ್ಕೆ ಜನರ ಸ್ಪಂದನೆ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.

ಟ್ರಿನಿಟಿ ಸಂಸ್ಥೆಗೆ ಗುತ್ತಿಗೆ: ನಗರದ ಟ್ರಿನಿಟಿ ಟೆಕ್ನಾಲಜಿಯವರು ಬೈಸಿಕಲ್‌ ನಿಲ್ದಾಣಗಳ ನಿರ್ಮಾಣ ಮತ್ತು ಐದು ವರ್ಷಗಳ ನಿರ್ವಹಣೆಯ ಗುತ್ತಿಗೆ ಪಡೆದಿದ್ದು, ಐದು ವರ್ಷಗಳ ಕಾಲ ಬೈಸಿಕಲ್‌ ನಿಲ್ದಾಣದ ಉಸ್ತುವಾರಿ ಹಾಗೂ ನಿರ್ವಹಣೆ ಮಾಡಲಿದ್ದಾರೆ.

ಜಿಪಿಎಸ್‌ ಅಳವಡಿಕೆ-ಸಿಬ್ಬಂದಿ ನೇಮಕ: ಬೈಸಿಕಲ್‌ ನಿಲ್ದಾಣಗಳಲ್ಲಿ ಆರಂಭಿಕವಾಗಿ ಓರ್ವ ಕಿಯೋಕ್ಸ್‌ ಸಿಬ್ಬಂದಿ ನೇಮಕ ಮಾಡಲಾಗುತ್ತದೆ. ಈ ಸಿಬ್ಬಂದಿ ನೂತನವಾಗಿ ಬರುವ ಜನರಿಗೆ ನೋಂದಣಿ ಸೇರಿದಂತೆ ಸೈಕಲ್‌ಗ‌ಳ ಮಾಹಿತಿ ಹೇಳಿಕೊಡಲಿದ್ದಾರೆ. ನೋಂದಣಿದಾರರಿಗೆ ನೋಂದಣಿ ನಂತರ ಸ್ಮಾರ್ಟ್‌ ಕಾರ್ಡ್‌ ನೀಡಲಾಗುತ್ತದೆ. ಸ್ಮಾರ್ಟ್‌ಕಾರ್ಡ್‌ಗೆ ಆಧಾರ್‌ ಹಾಗೂ ಮೊಬೈಲ್‌ ನಂಬರ್‌ ಲಿಂಕ್‌ ಮಾಡಲಾಗಿರುತ್ತದೆ. ಈ ಸೈಕಲ್‌ಗ‌ಳು ಜಿಪಿಎಸ್‌ ಲಿಂಕ್‌ ಹೊಂದಿದ್ದು, ಟ್ರ್ಯಾಕಿಂಗ್ ಸಿಸ್ಟಮ್‌ ಹೊಂದಿರಲಿದೆ. ಬೈಸಿಕಲ್‌ ಸವಾರರು, ಒಂದು ನಿಲ್ದಾಣದಿಂದ
ಮತ್ತೂಂದು ನಿಲ್ದಾಣದಲ್ಲಿ ಸೈಕಲ್‌ ಬಿಡುವವರೆಗೂ ಬೈಸಿಕಲ್‌ ಟ್ರ್ಯಾಕ್‌ ಸಿಸ್ಟಮ್‌ ಚಾಲ್ತಿಯಲ್ಲಿರುತ್ತದೆ.

ಎರಡು ಬಗೆಯ ಬೈಸಿಕಲ್‌ಗ‌ಳು: ಸ್ಮಾರ್ಟ್‌ಸಿಟಿ ಯೋಜನೆಯಡಿ ಆರಂಭಿಸಲಾಗುತ್ತಿರುವ ಬೈಸಿಕಲ್‌ ಗಳು ಎರಡು ಬಗೆಯದ್ದಾಗಿದ್ದು, ಅದರಲ್ಲಿ ವಿದ್ಯುತ್‌ ಚಾಲಿತ ಹಾಗೂ ವಿದ್ಯುತ್‌ ಚಾಲಿತವಲ್ಲದ ಬೈಸಿಕಲ್‌ ಗಳನ್ನು ಇರಿಸಲಾಗುತ್ತದೆ. ಇದರಲ್ಲಿ 34 ಬೈಸಿಕಲ್‌ಗ‌ಳು ವಿದ್ಯುತ್‌ ಚಾಲಿತ ಇದ್ದು, ಇನ್ನುಳಿದ 306 ಬೈಸಿಕಲ್‌ ಗಳು ವಿದ್ಯುತ್‌ ಚಾಲಿತವಲ್ಲದ ಬೈಸಿಕಲ್‌ಗ‌ಳಾಗಿವೆ.

– ಬಸವರಾಜ ಹೂಗಾರ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.