ರಾಯಚೂರು ಕೃಷಿ ವಿವಿ ಕ್ಯಾಂಪಸ್‌ನಲ್ಲಿ ಸೈಕಲ್‌ ಸವಾರಿ


Team Udayavani, Nov 9, 2019, 3:08 AM IST

rayachuru

ರಾಯಚೂರು: ರೈತ ಸ್ನೇಹಿಯಾಗಿ ಕೆಲಸ ಮಾಡುತ್ತಿ ರುವ ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಈಗ ಪರಿಸರ ಮಾಲಿನ್ಯ ನಿಯಂತ್ರಣಕ್ಕೂ ಆದ್ಯತೆ ನೀಡುತ್ತಿದೆ. ಕ್ಯಾಂಪಸ್‌ ಒಳಗೆ ವಾಹನಗಳ ಓಡಾಟಕ್ಕೆ ಬ್ರೇಕ್‌ ಹಾಕಿ ಸೈಕಲ್‌ ಬಳಸಲು ಸಜ್ಜಾಗಿದೆ.  ಕೆಲ ದಿನಗಳ ಹಿಂದೆ ಹಸಿರು ಪದವೀಧಾರಣೆ ಕಾರ್ಯಕ್ರಮ ಜಾರಿಗೊಳಿಸಿ ಪ್ರತಿ ವಿದ್ಯಾರ್ಥಿಗೆ ಒಂದು ಗಿಡ ಬೆಳೆಸುವ ಹೊಣೆ ನೀಡಲಾಗಿತ್ತು.

ಈಗ ಕ್ಯಾಂಪಸ್‌ ಒಳಗೆ ಪರಿಸರ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಕುಲಪತಿ ಡಾ| ಕೆ.ಎನ್‌.ಕಟ್ಟಿಮನಿ ಸೈಕಲ್‌ಗ‌ಳ ವ್ಯವಸ್ಥೆ ಮಾಡಲು ಮುಂದಾಗಿದ್ದಾರೆ. ವಿವಿ ಸಿಬ್ಬಂದಿ, ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿ ತೋರಿಸಿ ಸೈಕಲ್‌ ಪಡೆಯ ಬಹುದು. ಇದರಿಂದ ಆಡಳಿತ ಭವನ, ಕಾಲೇಜ್‌, ಬ್ಯಾಂಕ್‌, ಪ್ರಯೋಗಾಲಯ, ದೂರದಲ್ಲಿರುವ ವಿವಿಯ ಹೊಲಗಳಿಗೆ ಭೇಟಿಗೆ ತೆರಳಬಹುದು. ಇದ ರಿಂದ ಮಾಲಿನ್ಯ ನಿಯಂತ್ರಣದ ಜತೆಗೆ ಆರೋಗ್ಯಕ್ಕೂ ಒಳ್ಳೆಯದು ಎನ್ನುವುದು ಸಿಬ್ಬಂದಿ ವಿವರಣೆ. ಆರಂಭದಲ್ಲಿ ಪ್ರಯೋಗಾತ್ಮಕವಾಗಿ 10 ಸೈಕಲ್‌ ಖರೀದಿಸಲಾಗಿದೆ.

ಇದಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಬೆಳಗ್ಗೆಯಿಂದ ಸಂಜೆವರೆಗೂ ಸೈಕಲ್‌ಗ‌ಳು ಬ್ಯುಸಿಯಾಗುತ್ತಿವೆ. ಅಲ್ಲದೇ, ಒಬ್ಬರಾಗುತ್ತಿದ್ದಂತೆ ಒಬ್ಬರು ಸೈಕಲ್‌ ತೆಗೆದುಕೊಂಡು ಹೋಗಲು ಕಾಯುತ್ತಿದ್ದಾರೆ. ಇದರಿಂದ ಶೀಘ್ರವೇ 30 ಸೈಕಲ್‌ ಖರೀದಿಗೆ ಚಿಂತನೆ ನಡೆಸಲಾಗಿದೆ. ಎಲ್ಲ ವಿಭಾಗಗಳು, ವಿದ್ಯಾರ್ಥಿ, ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಪ್ರತ್ಯೇಕ ಸೈಕಲ್‌ ನೀಡುವ ಉದ್ದೇಶ ಇದೆ ಎನ್ನುತ್ತಾರೆ ಕುಲಪತಿ ಡಾ|ಕಟ್ಟಿಮನಿ. ಅಲ್ಲದೇ ನಿತ್ಯ ಬೆಳಗ್ಗೆ ಹಾಗೂ ಸಂಜೆ ವಿವಿ ವಾಯು ವಿಹಾರಕ್ಕೆ ಬರುವ ನೂರಾರು ಜನ ಬೈಕ್‌ಗಳನ್ನು ತರುತ್ತಿದ್ದು, ಅವರಿಗೂ ಈ ಯೋಜನೆ ಪ್ರೇರಣೆಯಾಗುತ್ತಿದೆ.

ದೊಡ್ಡ ಮೈದಾನ: ಸುಮಾರು 700 ಎಕರೆ ಪ್ರದೇಶದಲ್ಲಿ ರಾಯಚೂರು ಕೃಷಿ ವಿವಿ ಸ್ಥಾಪನೆಗೊಂಡಿದೆ. ಒಂದು ತುದಿಯಿಂದ ಮತ್ತೂಂದು ತುದಿಗೆ ತೆರಳಬೇಕಾದರೆ ವಾಹನಗಳನ್ನೇ ಬಳಸಲಾಗುತ್ತಿದೆ. ಆಡಳಿತಾತ್ಮಕ ಪ್ರದೇ ಶವೇ ಏನಿಲ್ಲವೆಂದರೂ 250-300 ಎಕರೆ ಪ್ರದೇಶವಿದೆ. ಇನ್ನು ಉಳಿದೆಲ್ಲ ಪ್ರದೇಶಗಳಲ್ಲಿ ವಿವಿಯಿಂದ ಸಂಶೋಧನಾ ತಳಿಗಳನ್ನು ಬೆಳೆಯಲಾಗುತ್ತಿದೆ. ಹೀಗೆ ನಾನಾ ಕೆಲಸಗಳಿಗೆ ನಿತ್ಯ ಒಂದೆರಡು ಬಾರಿ ಓಡಾಟ ಇದ್ದೇ ಇರುತ್ತದೆ. ಇದನ್ನು ಮನಗಂಡ ಆಡಳಿತ ಮಂಡಳಿ ಇಂಥ ಪ್ರಯೋಗಕ್ಕೆ ಮುಂದಾಗಿದೆ. ಕೃಷಿ ವಿವಿ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಶೀಘ್ರವೇ ಎಲೆಕ್ಟ್ರಿಕಲ್‌ ವಾಹನ: ಇಷ್ಟು ಮಾತ್ರವಲ್ಲದೇ ಅಧಿ ಕಾರಿಗಳು ಕೂಡ ಪರಿಸರ ಸ್ನೇಹಿ ವಾಹನ ಬಳಸು ವಂತಾಗಬೇಕು ಎಂಬ ಕಾರಣಕ್ಕೆ ಎಲೆಕ್ಟ್ರಿಕಲ್‌ ವಾಹನ ಖರೀದಿಗೆ ಆಡಳಿತ ಮಂಡಳಿ ಮುಂದಾಗಿದೆ. ಸುಮಾರು 7-8 ಜನ ಏಕಕಾಲಕ್ಕೆ ಓಡಾಡಬಹು ದಾದ ಎಲೆಕ್ಟ್ರಿಕಲ್‌ ವಾಹನವನ್ನು ಮುಂದಿನ ತಿಂಗಳು ನಡೆಯಲಿರುವ ಕೃಷಿ ಮೇಳದ ವೇಳೆ ತರುವ ಚಿಂತನೆ ಮಾಡಲಾಗಿದೆ. ವಿವಿಗೆ ಒಂದಲ್ಲ ಒಂದು ನಿಯೋಗ, ಉನ್ನತ ಮಟ್ಟದ ಅಧಿ ಕಾರಿಗಳ ತಂಡ ವೀಕ್ಷಣೆಗೆ ಬರುತ್ತಲೇ ಇರುತ್ತದೆ. ಆಗೆಲ್ಲ ಅವರನ್ನು ಕಾರುಗಳಲ್ಲೇ ಓಡಾಡಿಸಲಾಗುತ್ತಿದೆ. ಅದಕ್ಕಿಂತ ಎಲೆಕ್ಟ್ರಿಕಲ್‌ ವಾಹನ ಬಳಸಿದರೆ ಉತ್ತಮ ಎಂಬ ಚಿಂತನೆ ಮಾಡಲಾಗಿದೆ.

ಕೃಷಿ ವಿವಿ ಕ್ಯಾಂಪಸ್‌ ಮಾಲಿನ್ಯ ಮುಕ್ತವಾಗಬೇಕು ಎಂಬುದೇ ನಮ್ಮ ಧ್ಯೇಯ. ಆ ನಿಟ್ಟಿನಲ್ಲಿ ಗಿಡ-ಮರ ಗಳನ್ನು ಹೆಚ್ಚಾಗಿ ಬೆಳೆಸುವ ಯೋಜನೆ ಈಗಾಗಲೇ ಶುರುವಾಗಿದೆ. ಅದರ ಜತೆಗೆ ಕ್ಯಾಂಪಸ್‌ ಒಳಗೆ ಓಡಾಡಲು ಸೈಕಲ್‌ಗ‌ಳನ್ನು ನೀಡಲಾಗಿದೆ. ಸೈಕಲ್‌ಗ‌ಳ ಬೇಡಿಕೆ ಹೆಚ್ಚಾಗಿದೆ. ಶೀಘ್ರ 30 ಸೈಕಲ್‌ ಖರೀದಿಸುವ ಚಿಂತನೆ ಇದೆ.
-ಡಾ| ಕೆ.ಎನ್‌.ಕಟ್ಟಿಮನಿ, ಕೃಷಿ ವಿವಿ ಕುಲಪತಿ

* ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

BY-Election: ನಿಖಿಲ್‌ ಕುಮಾರಸ್ವಾಮಿಗೆ ಟಿಕೆಟ್‌ ಕೊಡಿಸಲು ಚದುರಂಗದಾಟ: ಡಿ.ಕೆ. ಸುರೇಶ್‌

Exam

PDA; ನಾಳೆ ಮುಖ್ಯ ಪರೀಕ್ಷೆ

ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ: ರೇವಣ್ಣ

H.D. Revanna: ನಾನು ಹುಷಾರಾದರೆ ನಿಖಿಲ್‌ ಪರ ಪ್ರಚಾರಕ್ಕೆ ಹೋಗುವೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

H. D. Kumaraswamy: ಇದು ಕಾರ್ಯಕರ್ತರ ಚುನಾವಣೆ, ನಿಖಿಲ್‌ ಗೆಲ್ಲುತ್ತಾರೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

JDS: ಶಾಸಕ ರೇವಣ್ಣ ವಿರುದ್ಧದ ಚುನಾವಣ ಅಕ್ರಮ ವಿಚಾರಣೆ ಮುಂದಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.