Dakshina Kannada District : ಧಾರಾಕಾರ ಮಳೆ; ಕೆಲವೆಡೆ ಹಾನಿ
Team Udayavani, Jul 17, 2024, 12:32 AM IST
ಮಂಗಳೂರು: ದಕ್ಷಿನ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಮಂಗಳವಾರ ಜಿಲ್ಲೆಯಾದ್ಯಂತ ದಿನವಿಡೀ ಗಾಳಿ-ಮಳೆಯಾಗಿದ್ದು, ಕೆಲವು ಕಡೆ ಹಾನಿ ಸಂಭವಿಸಿದೆ.
ನಿರಂತರ ಮಳೆಯಿಂದಾಗಿ ಸಂಪಾಜೆಬಳಿ ಮನೆ ಸಮೀಪ ಬೃಹತ್ ಹೊಂಡ ನಿರ್ಮಾಣವಾಗಿತ್ತು. ಬಳಿಕ ಪಂಚಾಯ ತ್ನಿಂದ ಮುಚ್ಚಲಾಗಿದೆ. ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ ಸ್ಥಿತಿಯಲ್ಲೇ ಇದ್ದು, ನೀರಿನ ಪ್ರಮಾಣ ಸ್ವಲ್ಪ ಇಳಿಕೆಯಾಗಿತ್ತು.
ಬಂಟ್ವಾಳದಲ್ಲಿ ನೇತ್ರಾವತಿ ನೀರಿನ ಮಟ್ಟ ಬೆಳಗ್ಗೆ 6.6 ಮೀ.ಗೆ ಏರಿಕೆಯಾಗಿದ್ದು, ಸಂಜೆಯ ವೇಳೆಗೆ
ಅದು 6.4 ಮೀ.ಗೆ ಇಳಿಕೆ ಕಂಡಿದೆ. ಸುರತ್ಕಲ್ನಲ್ಲಿ ಬಟ್ಟಪ್ಪಾಡಿ ಬಳಿ ಕಡಲ್ಕೊರೆತ ಉಂಟಾಗಿದ್ದು, ಕಡಲು ಪ್ರಕ್ಷುಬ್ಧ ಗೊಂಡಿದೆ. ಮಂಗಳೂರಿನಲ್ಲಿ ದಿನವಿಡೀ ಮಳೆಯಾಗಿದ್ದು, ಕೆಲವು ಕಡೆ ಕಾವೂರು, ಮರೋಳಿ, ಅಳಪೆಯಲ್ಲಿ ಮನೆಗಳ ಮೇಲೆ ಮರ ಬಿದ್ದು ಹಾನಿ ಸಂಭವಿದೆ.
ಇಂದು ರೆಡ್ ಅಲರ್ಟ್
ಹವಾಮಾನ ಇಲಾಖೆ ಬುಧವಾರವೂ ಕರಾವಳಿಗೆ ರೆಡ್ಅಲರ್ಟ್ ಘೋಷಣೆ ಮಾಡಿದೆ. ಅಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ. ಗುರುವಾರದಿಂದ ಮೂರು ದಿನ ಆರೆಂಜ್ ಆಲರ್ಟ್ ಇದೆ. 30-40 ಕಿ.ಮೀ ವೇಗದಲ್ಲಿ ನಿರಂತರವಾಗಿ ಗಾಳಿ ಬೀಸುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸುಬ್ರಹ್ಮಣ್ಯ: ಮುಳುಗಡೆ ಸ್ಥಿತಿಯಲ್ಲಿ ಸ್ನಾನಘಟ್ಟ
ಸುಬ್ರಹ್ಮಣ್ಯ: ನಿರಂತರ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು, ಮಂಗಳವಾರ ನೀರಿನ ಮಟ್ಟ ಅಲ್ಪ ಇಳಿಕೆಯಾಗಿದೆ.
ಸೋಮವಾರ ರಾತ್ರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ಸ್ನಾನಘಟ್ಟದ ಶೌಚಾಲಯ, ಲಗೇಜ್ ಕೊಠಡಿ ಭಾಗಶಃ ಮುಳುಗಡೆಯಾಗಿ, ಹೆದ್ದಾರಿಗೆ ನೀರು ನುಗ್ಗಿತ್ತು. ಆದರೆ ಮಂಗಳವಾರ ಬೆಳಗ್ಗೆ ನೀರಿನ ಮಟ್ಟ ಇಳಿಕೆಯಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಮತ್ತೆ ಆರಂಭಗೊಂಡಿತ್ತು. ಸಂಜೆ ವೇಳೆ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಇಳಿಕೆಯಾಗಿದೆ. ಆದರೂ ಸ್ನಾನಘಟ್ಟ ಮುಳುಗಡೆ ಸ್ಥಿತಿಯಲ್ಲೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.