Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ನೂತನ ಸಂಸದರ ವಿಜಯೋತ್ಸವ, ಕಾರ್ಯಕರ್ತರಿಗೆ ಅಭಿನಂದನೆ

Team Udayavani, Jun 30, 2024, 1:08 AM IST

Captain Brijesh Chowta ಹಿಂದುತ್ವದ ಆಧಾರದಲ್ಲಿ ವಿಕಸಿತ ದಕ್ಷಿಣ ಕನ್ನಡ

ಮಂಗಳೂರು: ಹಿಂದುತ್ವದ ನೆಲೆಯಲ್ಲಿ ತುಳುನಾಡಿನ ದೈವದೇವರ ಆಶೀರ್ವಾದ ಹಾಗೂ ಜನರ ಅಭಿಮಾನ, ಸಹಕಾರಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದ ಬೆಂಬಲದಲ್ಲಿ “ವಿಕಸಿತ ದಕ್ಷಿಣ ಕನ್ನಡ’ ಮಾಡಿ ತೋರಿಸುತ್ತೇನೆ ಎಂದು ಎಂದು ನೂತನ ಲೋಕಸಭಾ ಸದಸ್ಯ ಕ್ಯಾ| ಬ್ರಿಜೇಶ್‌ ಚೌಟ ಹೇಳಿದ್ದಾರೆ.

ನಗರದ ಟಿಎಂಎ ಪೈ ಸಭಾಂಗಣದಲ್ಲಿ ಶನಿವಾರ ಸಂಜೆ ಜರಗಿದ “ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರ ಅಭಿನಂದನಾ ಸಮಾರಂಭ’ದಲ್ಲಿ ಅವರು ಮಾತನಾಡಿದರು.

ಜಾತಿ ರಾಜಕಾರಣಕ್ಕೆ ಸೋಲು
ಜಿಲ್ಲೆಯಲ್ಲಿ ಜಾತಿ ರಾಜಕಾರಣವನ್ನು ಮುಂದಿರಿಸಿ ಚುನಾವಣೆ ಎದುರಿಸಲು ಹೋದರು, ಆದರೆ ನಮ್ಮ ನೆಲದಲ್ಲಿ ಧರ್ಮಕ್ಕೆ ಸದಾ ಗೆಲುವು ಎನ್ನುವುದನ್ನು ಕಾರ್ಯಕರ್ತರು ತೋರಿಸಿಕೊಟ್ಟಿದಿದೀರಿ. ಇದು ಹಿಂದುತ್ವದ ಅಸ್ಮಿತೆ ಇರುವ ನೆಲ. ಇದು ತುಳುನಾಡಿನ ನೆಲ, ಸತ್ಯಧರ್ಮ ನೆಲ. ಇಲ್ಲಿ ಹಿಂದುತ್ವಕ್ಕೆ ಗೆಲುವು ಎನ್ನುವುದನ್ನು ಎಲ್ಲರೂ ಒಂದಾಗಿ ತೋರಿಸಿಕೊಟ್ಟಿದ್ದೀರಿ. ಇದು ಯುವನಾಯಕತ್ವಕ್ಕೆ ಸಂದಿರುವ, ರಾಷ್ಟ್ರೀಯತೆಗೆ ಒಲಿದಿರುವ ಗೆಲುವು ಎಂದು ಕ್ಯಾ| ಚೌಟ ಬಣ್ಣಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಭಾಗೀರಥಿ ಮುರುಳ್ಯ, ಉಮಾನಾಥ ಕೋಟ್ಯಾನ್‌, ಹರೀಶ್‌ ಪೂಂಜ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್‌ ಮಾಜಿ ಸದಸ್ಯ ಪ್ರತಾಪಸಿಂಹ ನಾಯಕ್‌, ನಿತಿನ್‌ ಕುಮಾರ್‌, ಯುವ ಜೆಡಿಎಸ್‌ ಜಿಲ್ಲಾಧ್ಯಕ್ಷ ಅಕ್ಷಿತ್‌ ಸುವರ್ಣ, ಕಿಶೋರ್‌ ಬೊಟ್ಯಾಡಿ ಹಾಜರಿದ್ದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿದರು. ರಾಕೇಶ್‌ ರೈ ನಿರೂಪಿಸಿದರು. ಯತೀಶ್‌ ಅರ್ವಾರ್‌ ವಂದಿಸಿದರು.

ಮಾಜಿ ತಂಡ, ಹೊಸ ತಂಡದ ಶ್ರಮ: ಕುಂಪಲ
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಹೊಸ ಪದಾಧಿಕಾರಿಗಳ ತಂಡವಿತ್ತು, ಹೊಸಬರ ಮುಂದೆ ಸವಾಲಿತ್ತು. ಆದರೆ ಮಾಜಿ ಸಂಸದ ನಳಿನ್‌ ಕುಮಾರ್‌, ಮಾಜಿ ಜಿಲ್ಲಾಧ್ಯಕ್ಷ ಸುದರ್ಶನ ಅವರ ಸಹಕಾರದೊಂದಿಗೆ ಎಲ್ಲ ಪದಾಧಿಕಾರಿಗಳು, ಶಾಸಕರು ಹಾಗೂ ಕಾರ್ಯಕರ್ತರ ಶಕ್ತಿಯಿಂದ ಒಗ್ಗಟ್ಟಾಗಿ ಕ್ಯಾ| ಬ್ರಿಜೇಶ್‌ ಚೌಟ ಅವರಿಗೆ ಗೆಲುವು ಪ್ರಾಪ್ತವಾಗಿದೆ ಎಂದರು.

ಜಿಲ್ಲಾ ಲೋಕಸಭಾ ಚುನಾವಣ ಪ್ರಭಾರಿ ಕ್ಯಾ| ಗಣೇಶ್‌ ಕಾರ್ಣಿಕ್‌ ಮಾತನಾಡಿ, ಮುಂದಿನ ಐದು ವರ್ಷಗಳ ಕಾಲ ದೇಶದ ಮುಂದೆ ದೊಡ್ಡ ಸವಾಲಿದೆ. ಆದರೆ ನಮ್ಮ ಕಾರ್ಯಕರ್ತರ ತಂಡದ ಉತ್ಸಾಹ ಹಾಗೂ ಶಕ್ತಿಯನ್ನು ಶಬ್ದಗಳಲ್ಲಿ ವರ್ಣಿಸಲಾಗದು. ಮುಂದೆಯೂ ಅದೇ ಶಕ್ತಿ ಹಾಗೂ ಬದ್ಧತೆಯೊಂದಿಗೆ ಕೆಲಸ ಮಾಡುವ ಮೂಲಕ ದೇಶ ವಿಭಜಿಸುವ, ರಾಷ್ಟ್ರದ ಪ್ರಗತಿಗೆ ಅಡ್ಡಿಯಾಗುವ ಶಕ್ತಿಗಳನ್ನು ಸೋಲಿಸುವ ಕೆಲಸ ಮಾಡಬೇಕು ಎಂದರು.

ವಿಜಯೋತ್ಸವ-ಬೃಹತ್‌ ವಾಹನ ಜಾಥಾ
ನೂತನ ಸಂಸದರಾಗಿ ಆಯ್ಕೆಯಾಗಿ, ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಕ್ಯಾ| ಬ್ರಿಜೇಶ್‌ ಚೌಟ ಅವರನ್ನು ಕಾರ್ಯಕರ್ತರ ಬೃಹತ್‌ ಪಡೆಯೇ ಮಂಗಳೂರು ವಿಮಾನ ನಿಲ್ದಾಣದಿಂದ ಟಿಎಂಎ ಪೈ ಸಭಾಂಗಣದ ವರೆಗೂ ಸ್ವಾಗತಿಸಿತು. ದಾರಿಯುದ್ದಕ್ಕೂ ವಾಹನ ಜಾಥಾ ನಡೆದಿದ್ದು, ಕಾವೂರು, ಕೆಪಿಟಿ, ಯೆಯ್ನಾಡಿ, ಪದವಿನಂಗಡಿ, ಬಿಜೈ ಮುಂತಾದೆಡೆಗಳಲ್ಲಿ ಸ್ವಾಗತ ಕಾರ್ಯಕ್ರಮ ನಡೆಯಿತು. ಪಟಾಕಿ ಸಿಡಿಸಿ ಕಾರ್ಯಕರ್ತರು ಸಂಭ್ರಮಿಸಿದರು.

ಶ್ರದ್ಧಾಂಜಲಿ
ತಮ್ಮ ಮಾತು ಆರಂಭಿಸು ವುದಕ್ಕೂ ಮೊದಲು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಪ್ರಾಕೃತಿಕ ವಿಕೋಪದಿಂದ ಕೆಲವು ದಿನಗಳಲ್ಲಿ ಜೀವ ಕಳೆದುಕೊಂಡವರಿಗೆ ತಮ್ಮ ಶ್ರದ್ಧಾಂಜಲಿ ಸಲ್ಲಿಸಿದರು.

 

ಟಾಪ್ ನ್ಯೂಸ್

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

1-amr

Army; ಎಲ್ಲ ಸವಾಲುಗಳಿಗೂ ಸೇನೆ ಸನ್ನದ್ಧ: ಜನರಲ್‌ ದ್ವಿವೇದಿ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

crime (2)

West Bengal; ಮತ್ತೊಂದು ಗುಂಪು ಹತ್ಯೆ: ವಾರದಲ್ಲಿ ಇದು 4ನೇ ಕೇಸ್‌

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್‌ ಅಳವಡಿಕೆಗೆ ನಿರ್ಧಾರ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ

Sullia 2 ವರ್ಷಗಳ ಹಿಂದೆ ನಡೆದಿದ್ದ ಕಳವು ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Mangaluru ಜೆಪ್ಪು ಸೆಮಿನರಿ: ಮನೆಯಿಂದ ಕಳವು

Mangaluru ಜೆಪ್ಪು ಸೆಮಿನರಿ: ಮನೆಯಿಂದ ಕಳವು

police crime

Mangalore ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

1-wewqewq

Abdul Hamid ಕೃತಿ ಬಿಡುಗಡೆ; ವಿಭಿನ್ನತೆಯ ನಡುವೆಯೂ ದೇಶ ಒಗ್ಗಟ್ಟು: ಭಾಗವತ್‌

arrested

POK ರಾವಲ್‌ಕೋಟ್‌ ಜೈಲಿಂದ 18 ಕೈದಿಗಳು ಪರಾರಿ!

court

Defamation:50 ಲಕ್ಷ ನೀಡಲು ಟಿಎಂಸಿ ಸಂಸದ ಗೋಖಲೆ ಗೆ ಆದೇಶ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

GAS (2)

Commercial ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 30 ರೂ. ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.