Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


Team Udayavani, Apr 28, 2024, 1:15 AM IST

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರಕ್ಕೆ ಶುಕ್ರವಾರ ನಡೆದ ಮತದಾನದ ಅಂತಿಮ ವಿವರಗಳು ಲಭ್ಯವಾಗಿದ್ದು ಶೇ.77.56 ಮತದಾನವಾಗಿದೆ.

ಈ ಮೂಲಕ 2019ರ ಚುನಾವಣೆ ಹೋಲಿಸಿದರೆ ಶೇ 0.34ರಷ್ಟು ಪ್ರಮಾಣದಲ್ಲಿ ಮತದಾನದಲ್ಲಿ ಇಳಿಕೆಯಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಶೇ.77.90 ಮತದಾನ ನಡೆದಿತ್ತು. ಈ ಸಲ ದ.ಕ. ಜಿಲ್ಲೆಯ ಒಟ್ಟು 18,17,603 ಮತದಾರರಲ್ಲಿ 14,09,653 ಮಂದಿ ಮತಗಟ್ಟೆಗಳಿಗೆ ತೆರಳಿ ಮತ ಮಾಡಿದ್ದಾರೆ.

ನಗರದ ಮತದಾರರೇ ಅಧಿಕ ಇರುವ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಮತಪ್ರಮಾಣ ಶೇ. 67.17ಕ್ಕೆ ಕುಸಿದಿದೆ.

ಮಂಗಳೂರು ನಗರ ಉತ್ತರದಲ್ಲಿ ಶೇ. 73.78 ಮತದಾನವಾಗಿದ್ದು, ಮೂಡುಬಿದಿರೆಯಲ್ಲಿ ಶೇ. 76.51 ಮತದಾನ ದಾಖಲಾಗಿದೆ. ಸುಳ್ಯದಲ್ಲಿ ಶೇ. 83.01ರ ಮೂಲಕ ದ.ಕ. ಜಿಲ್ಲೆಯ ಇತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ ಅತ್ಯಧಿಕ ಮತ ಚಲಾವಣೆಯಾಗಿದೆ. ಅನಂತರ ಬೆಳ್ತಂಗಡಿಯಲ್ಲಿ ಶೇ. 81.30 ಮತದಾನವಾಗಿದೆ.

ಕೆಲವೊಂದು ಮತಗಟ್ಟೆಗಳಲ್ಲಿ ಮತದಾರರ ಹೆಸರು ಇನ್ನೂ ಪಟ್ಟಿಯಲ್ಲಿರುವುದು ಶುಕ್ರವಾರದ ಮತದಾನದ ವೇಳೆ ಗೋಚರಿಸಿದೆ. ಚುನಾವಣೆ ಘೋಷಣೆಯಾದ ಬಳಿಕ ಬಿಎಲ್‌ಒಗಳನ್ನು ಮನೆ ಭೇಟಿಗೆ ಕಳುಹಿಸಲಾಗುತ್ತದೆ. ಮತದಾರರ ಮಾಹಿತಿ ಕಲೆ ಹಾಕಲಾಗುತ್ತದೆ. 18 ವರ್ಷ ಮೇಲ್ಪಟ್ಟವರನ್ನು ಮತದಾರರ ಪಟ್ಟಿಗೆ ಸೇರಿಸುವ ಹಾಗೂ ಮೃತರನ್ನು ಪಟ್ಟಿಯಿಂದ ಕೈಬಿಡುವ ನಿಟ್ಟಿನಲ್ಲಿ ಮಾಹಿತಿ ಕಲೆ ಹಾಕಿಸಲಾಗುತ್ತದೆ. ಮನೆಯಿಂದಲೇ ಮತ ಶೇ 97.11
85 ಮೇಲ್ಪಟ್ಟ ಹಿರಿಯ ನಾಗರಿಕರಲ್ಲಿ 6053 ಮಂದಿ ಮನೆಯಲ್ಲೇ ಮತದಾನಕ್ಕೆ ಆಸಕ್ತಿ ತೋರಿದ್ದು, ಅದರಲ್ಲಿ 5,878 ಮಂದಿ ಮತಹಾಕುವ ಮೂಲಕ ಶೇ 97.11 ಮತದಾನವಾಗಿದೆ.

ಉಡುಪಿ-ಚಿಕ್ಕಮಗಳೂರು: ಶೇ. 77.15
ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಎಲ್ಲ ಮತಗಟ್ಟೆಗಳ ಮತಯಂತ್ರಗಳು ಉಡುಪಿಯ ಡಿಮಸ್ಟರಿಂಗ್‌ ಕೇಂದ್ರಕ್ಕೆ ತಲುಪಿದ್ದು, ಮತದಾನದ ಅಂತಿಮ ಅಂಕಿ ಅಂಶವನ್ನು ಜಿಲ್ಲಾ ಚುನಾವಣಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಶೇ.77.15ರಷ್ಟು ದಾಖಲೆಯ ಮತದಾನ ಈ ಬಾರಿ ಕ್ಷೇತ್ರದಲ್ಲಿ ಆಗಿದೆ.

ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಉಡುಪಿ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರದಲ್ಲೂ ಮತದಾನ ಪ್ರಮಾಣ ಏರಿಕೆಯಾಗಿದೆ. ಒಟ್ಟಾರೆಯಾಗಿ ಕ್ಷೇತ್ರದ ಮತದಾನ ಪ್ರಮಾಣದಲ್ಲಿ ಶೇ.1.08ರಷ್ಟು ಏರಿಕೆಯಾಗಿದೆ. ಕಳೆದ ಬಾರಿ ಶೇ.76.07ರಷ್ಟು ಮತದಾನವಾಗಿತ್ತು.

ಶೃಂಗೇರಿಯಲ್ಲಿ ಶೇ.80.31 ಗರಿಷ್ಠ ಹಾಗೂ ಚಿಕ್ಕಮಗಳೂರಿನಲ್ಲಿ ಶೇ.70.73 ಕನಿಷ್ಠ ಮತದಾನ ದಾಖಲಾಗಿದೆ. ಶೇ, 79ಕ್ಕಿಂತ ಹೆಚ್ಚಿನ ಮತದಾನವು ಕುಂದಾಪುರ, ಕಾಪು ಮತ್ತು ಕಾರ್ಕಳದಲ್ಲಿ ದಾಖಲಾಗಿದೆ. ತರಿಕೆರೆಯಲ್ಲಿ ಮಾತ್ರ ಪುರುಷ ಮತದಾರರು ಹೆಚ್ಚು ಮತದಾನ ಮಾಡಿದ್ದಾರೆ.

ಉಳಿದಂತೆ ಎಲ್ಲ ಕ್ಷೇತ್ರದಲ್ಲೂ ಮಹಿಳೆಯರಿಂದಲೇ ಹೆಚ್ಚು ಮತದಾನವಾಗಿದೆ. ಕ್ಷೇತ್ರದ 8 ವಿಧಾನಸಭಾ ವ್ಯಾಪ್ತಿಯಲ್ಲಿ 7,68,215 ಪುರುಷ ಮತದಾರರಿದ್ದು ಅವರಲ್ಲಿ 5,94,565 ಮಂದಿ ಮತದಾನ ಮಾಡಿದ್ದಾರೆ. 8,16,910 ಮಹಿಳಾ ಮತದಾರರಲ್ಲಿ 6,28,316 ಮಹಿಳೆಯರು ಮತದಾನ ಮಾಡಿದ್ದಾರೆ. ಒಟ್ಟಾರೆ ಮತದಾನದಲ್ಲೂ ಮಹಿಳೆಯೇ ಮುಂದಿದ್ದಾರೆ. 7 ಮಂದಿ ಲಿಂಗತ್ವ ಅಲ್ಪಸಂಖ್ಯಾಕರು ಮತದಾನ ಮಾಡಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.