Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


Team Udayavani, Apr 28, 2024, 1:15 AM IST

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರಕ್ಕೆ ಶುಕ್ರವಾರ ನಡೆದ ಮತದಾನದ ಅಂತಿಮ ವಿವರಗಳು ಲಭ್ಯವಾಗಿದ್ದು ಶೇ.77.56 ಮತದಾನವಾಗಿದೆ.

ಈ ಮೂಲಕ 2019ರ ಚುನಾವಣೆ ಹೋಲಿಸಿದರೆ ಶೇ 0.34ರಷ್ಟು ಪ್ರಮಾಣದಲ್ಲಿ ಮತದಾನದಲ್ಲಿ ಇಳಿಕೆಯಾಗಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಶೇ.77.90 ಮತದಾನ ನಡೆದಿತ್ತು. ಈ ಸಲ ದ.ಕ. ಜಿಲ್ಲೆಯ ಒಟ್ಟು 18,17,603 ಮತದಾರರಲ್ಲಿ 14,09,653 ಮಂದಿ ಮತಗಟ್ಟೆಗಳಿಗೆ ತೆರಳಿ ಮತ ಮಾಡಿದ್ದಾರೆ.

ನಗರದ ಮತದಾರರೇ ಅಧಿಕ ಇರುವ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಮತಪ್ರಮಾಣ ಶೇ. 67.17ಕ್ಕೆ ಕುಸಿದಿದೆ.

ಮಂಗಳೂರು ನಗರ ಉತ್ತರದಲ್ಲಿ ಶೇ. 73.78 ಮತದಾನವಾಗಿದ್ದು, ಮೂಡುಬಿದಿರೆಯಲ್ಲಿ ಶೇ. 76.51 ಮತದಾನ ದಾಖಲಾಗಿದೆ. ಸುಳ್ಯದಲ್ಲಿ ಶೇ. 83.01ರ ಮೂಲಕ ದ.ಕ. ಜಿಲ್ಲೆಯ ಇತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ ಅತ್ಯಧಿಕ ಮತ ಚಲಾವಣೆಯಾಗಿದೆ. ಅನಂತರ ಬೆಳ್ತಂಗಡಿಯಲ್ಲಿ ಶೇ. 81.30 ಮತದಾನವಾಗಿದೆ.

ಕೆಲವೊಂದು ಮತಗಟ್ಟೆಗಳಲ್ಲಿ ಮತದಾರರ ಹೆಸರು ಇನ್ನೂ ಪಟ್ಟಿಯಲ್ಲಿರುವುದು ಶುಕ್ರವಾರದ ಮತದಾನದ ವೇಳೆ ಗೋಚರಿಸಿದೆ. ಚುನಾವಣೆ ಘೋಷಣೆಯಾದ ಬಳಿಕ ಬಿಎಲ್‌ಒಗಳನ್ನು ಮನೆ ಭೇಟಿಗೆ ಕಳುಹಿಸಲಾಗುತ್ತದೆ. ಮತದಾರರ ಮಾಹಿತಿ ಕಲೆ ಹಾಕಲಾಗುತ್ತದೆ. 18 ವರ್ಷ ಮೇಲ್ಪಟ್ಟವರನ್ನು ಮತದಾರರ ಪಟ್ಟಿಗೆ ಸೇರಿಸುವ ಹಾಗೂ ಮೃತರನ್ನು ಪಟ್ಟಿಯಿಂದ ಕೈಬಿಡುವ ನಿಟ್ಟಿನಲ್ಲಿ ಮಾಹಿತಿ ಕಲೆ ಹಾಕಿಸಲಾಗುತ್ತದೆ. ಮನೆಯಿಂದಲೇ ಮತ ಶೇ 97.11
85 ಮೇಲ್ಪಟ್ಟ ಹಿರಿಯ ನಾಗರಿಕರಲ್ಲಿ 6053 ಮಂದಿ ಮನೆಯಲ್ಲೇ ಮತದಾನಕ್ಕೆ ಆಸಕ್ತಿ ತೋರಿದ್ದು, ಅದರಲ್ಲಿ 5,878 ಮಂದಿ ಮತಹಾಕುವ ಮೂಲಕ ಶೇ 97.11 ಮತದಾನವಾಗಿದೆ.

ಉಡುಪಿ-ಚಿಕ್ಕಮಗಳೂರು: ಶೇ. 77.15
ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಎಲ್ಲ ಮತಗಟ್ಟೆಗಳ ಮತಯಂತ್ರಗಳು ಉಡುಪಿಯ ಡಿಮಸ್ಟರಿಂಗ್‌ ಕೇಂದ್ರಕ್ಕೆ ತಲುಪಿದ್ದು, ಮತದಾನದ ಅಂತಿಮ ಅಂಕಿ ಅಂಶವನ್ನು ಜಿಲ್ಲಾ ಚುನಾವಣಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಶೇ.77.15ರಷ್ಟು ದಾಖಲೆಯ ಮತದಾನ ಈ ಬಾರಿ ಕ್ಷೇತ್ರದಲ್ಲಿ ಆಗಿದೆ.

ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಉಡುಪಿ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರದಲ್ಲೂ ಮತದಾನ ಪ್ರಮಾಣ ಏರಿಕೆಯಾಗಿದೆ. ಒಟ್ಟಾರೆಯಾಗಿ ಕ್ಷೇತ್ರದ ಮತದಾನ ಪ್ರಮಾಣದಲ್ಲಿ ಶೇ.1.08ರಷ್ಟು ಏರಿಕೆಯಾಗಿದೆ. ಕಳೆದ ಬಾರಿ ಶೇ.76.07ರಷ್ಟು ಮತದಾನವಾಗಿತ್ತು.

ಶೃಂಗೇರಿಯಲ್ಲಿ ಶೇ.80.31 ಗರಿಷ್ಠ ಹಾಗೂ ಚಿಕ್ಕಮಗಳೂರಿನಲ್ಲಿ ಶೇ.70.73 ಕನಿಷ್ಠ ಮತದಾನ ದಾಖಲಾಗಿದೆ. ಶೇ, 79ಕ್ಕಿಂತ ಹೆಚ್ಚಿನ ಮತದಾನವು ಕುಂದಾಪುರ, ಕಾಪು ಮತ್ತು ಕಾರ್ಕಳದಲ್ಲಿ ದಾಖಲಾಗಿದೆ. ತರಿಕೆರೆಯಲ್ಲಿ ಮಾತ್ರ ಪುರುಷ ಮತದಾರರು ಹೆಚ್ಚು ಮತದಾನ ಮಾಡಿದ್ದಾರೆ.

ಉಳಿದಂತೆ ಎಲ್ಲ ಕ್ಷೇತ್ರದಲ್ಲೂ ಮಹಿಳೆಯರಿಂದಲೇ ಹೆಚ್ಚು ಮತದಾನವಾಗಿದೆ. ಕ್ಷೇತ್ರದ 8 ವಿಧಾನಸಭಾ ವ್ಯಾಪ್ತಿಯಲ್ಲಿ 7,68,215 ಪುರುಷ ಮತದಾರರಿದ್ದು ಅವರಲ್ಲಿ 5,94,565 ಮಂದಿ ಮತದಾನ ಮಾಡಿದ್ದಾರೆ. 8,16,910 ಮಹಿಳಾ ಮತದಾರರಲ್ಲಿ 6,28,316 ಮಹಿಳೆಯರು ಮತದಾನ ಮಾಡಿದ್ದಾರೆ. ಒಟ್ಟಾರೆ ಮತದಾನದಲ್ಲೂ ಮಹಿಳೆಯೇ ಮುಂದಿದ್ದಾರೆ. 7 ಮಂದಿ ಲಿಂಗತ್ವ ಅಲ್ಪಸಂಖ್ಯಾಕರು ಮತದಾನ ಮಾಡಿದ್ದಾರೆ.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.