Dakshina Kannada, ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ

ಶಿಕ್ಷಕರ ಮಧ್ಯೆ ಸೌಹಾರ್ದ ಇರಲಿ: ಜಯಪ್ರಕಾಶ್‌ ಹೆಗ್ಡೆ

Team Udayavani, Sep 6, 2023, 12:35 AM IST

Dakshina Kannada, ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಪ್ರಶಸ್ತಿ ಪ್ರದಾನ

ಬ್ರಹ್ಮಾವರ: ಅಭಿವೃದ್ಧಿಗೆ ಆರೋಗ್ಯ ಮತ್ತು ಶಿಕ್ಷಣವೇ ಮೂಲ. ಶಾಲೆಗಳಲ್ಲಿ ಶಿಕ್ಷಕರ ನಡುವೆ ಸೌಹಾರ್ದ ವಾತಾವರಣ ನಿರ್ಮಾಣವಾದಾಗ ಮಾತ್ರ ವಿದ್ಯಾರ್ಥಿಗಳು ಮತ್ತು ಭವಿಷ್ಯದ ಸಮಾಜ ಉತ್ತಮ ಫ‌ಲಿತಾಂಶ ಕಂಡುಕೊಳ್ಳಬಹುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ಶಿಕ್ಷಣ ಇಲಾಖೆ, ಡಾ| ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಸಹಯೋಗದಲ್ಲಿ ಮಂಗಳವಾರ ಬ್ರಹ್ಮಾವರ ಶ್ಯಾಮಿಲಿ ಶನಾಯ ಸಭಾಂ ಗಣದಲ್ಲಿ ಜರಗಿದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಲಿಕೆ ನಿರಂತರ ಪ್ರಕ್ರಿಯೆಯಾಗಿದ್ದು, ಅಂತ್ಯ ಹಾಗೂ ವಯಸ್ಸಿನ ಮಿತಿ ಇಲ್ಲ. ಸಮಾಜದಲ್ಲಿ ಬದಲಾವಣೆ ತರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಕರ ನಡುವೆ ಸೌಹಾರ್ದ ಇರದಿದ್ದರೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಭಾವನೆ ಮೂಡಿಸಲು ಶಿಕ್ಷಕರು ಮುಂದಾಗ ಬೇಕು. ವಿದ್ಯಾರ್ಥಿಗಳು ದೈಹಿಕ ಹಾಗೂ ಮಾನಸಿಕವಾಗಿ ಶಕ್ತರಾದಾಗ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಶಿಕ್ಷಣದ ಗುಣಮಟ್ಟ ಉಳಿಸಿಕೊ ಳ್ಳುವುದರ ಜತೆಗೆ ಶಿಕ್ಷಣದಲ್ಲಿ ಮುಂದೆ ಬರುವಂತೆ ಪೋತ್ಸಾಹ ನೀಡಬೇಕು. ವಿದ್ಯಾರ್ಥಿಗಳಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆ ಶಿಕ್ಷಕರು ಮೂಡಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿ ಮಾತನಾಡಿ, ಎಸೆಸೆಲ್ಸಿ ಫ‌ಲಿತಾಂಶದಲ್ಲಿ ಜಿಲ್ಲೆ ಮತ್ತೆ ಮೊದಲ ಸ್ಥಾನಕ್ಕೇರಲು ಎಲ್ಲ ಶಿಕ್ಷಕರು ತಂಡವಾಗಿ ಕಾರ್ಯನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕ ವರ್ಗಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ. ಶೇ. 5ರಷ್ಟು ಶಿಕ್ಷಕರು ಜವಾಬ್ದಾರಿ ನಿರ್ವಹಿಸಲು ವಿಫ‌ಲರಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಹೆತ್ತವರ ಮಾತನ್ನು ಮಕ್ಕಳು ಕೇಳುತ್ತಿಲ್ಲ. ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರದ್ದಾಗಿದೆ ಎಂದರು.

ಎಸೆಸೆಲ್ಸಿ, ಪಿಯುಸಿ ಫ‌ಲಿತಾಂಶದಲ್ಲಿ ಶಿಕ್ಷಕರ ಪ್ರಯತ್ನದಿಂದ ಮತ್ತೊಮ್ಮೆ ಅಗ್ರಸ್ಥಾನಿಯಾಗಲಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್‌ ಸುವರ್ಣ ಆಶಯ ವ್ಯಕ್ತಪಡಿಸಿದರು.

ಮಾಹೆ ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಉಪನ್ಯಾಸ ನೀಡಿದರು. 15 ಮಂದಿ ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನಿಸಲಾ ಯಿತು. ಶಿಕ್ಷಕರ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ ನಡೆಯಿತು.

ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ| ಜಿ. ಶಂಕರ್‌, ಜಿ.ಪಂ. ಸಿಇಒ ಪ್ರಸನ್ನ ಎಚ್‌. ಚಾಂತಾರು ಗ್ರಾ.ಪಂ. ಅಧ್ಯಕ್ಷೆ ಪ್ರೇಮಾ ಶೆಟ್ಟಿ, ಡಯಟ್‌ ಪ್ರಾಂಶುಪಾಲ ಗೋವಿಂದ ಮಡಿವಾಳ, ಬ್ರಹ್ಮಾವರ ಬಿಇಒ ರಂಗನಾಥ್‌, ಉಡುಪಿ ಬಿಇಒ ಡಾ| ಅಶೋಕ್‌ ಕಾಮತ್‌ ಉಪಸ್ಥಿತರಿದ್ದರು. ಡಿಡಿಪಿಐ ಗಣಪತಿ ಕೆ. ಸ್ವಾಗತಿಸಿ, ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ, ಸುಭೀಕ್ಷಾ ಶೆಟ್ಟಿ ನಿರ್ವಹಿಸಿ, ಬ್ರಹ್ಮಾವರ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಶಾಂತ್‌ ಶೆಟ್ಟಿ ವಂದಿಸಿದರು.

ಸಾಧಕನ ಹಿಂದೆ ಶಿಕ್ಷಕನ ಶ್ರಮ: ಭಾಗೀರಥಿ
ಸುಳ್ಯ: ಭಾರತ ಇಂದು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡುತ್ತಿದೆ. ಯಾವುದೇ ಸಾಧಕನ ಹಿಂದೆ ಒಬ್ಬ ಶಿಕ್ಷಕನ ಮಾರ್ಗದರ್ಶನ, ಶ್ರಮ ಇರುತ್ತದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ದ.ಕ. ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆಯ ಸಮಿತಿ ಆಶ್ರಯದಲ್ಲಿ ಸುಳ್ಯದ ಪರಿವಾರಕಾನ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಕ್ಷಣ ನೀತಿಯಲ್ಲಿ ಬದಲಾವಣೆ ಆಗಬೇಕು ಎಂಬ ಚರ್ಚೆಗಳಾಗುತ್ತಿವೆ. ಅದನ್ನು ಮಾಡುವವರು ಯಾರು ಎಂಬುದಕ್ಕೆ ಪರಿಪೂರ್ಣ ಉತ್ತರ ಸಿಕ್ಕಿಲ್ಲ. ಸರಕಾರಿ ಶಾಲೆಯಲ್ಲಿ ಉತ್ತಮ ಸವಲತ್ತು ಇದ್ದರೂ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸರಕಾರಿ ಶಾಲೆಗಳ ಶಿಕ್ಷಕರ ಕೊರತೆ ನೀಗಿಸುವಂತೆ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಿದ್ದೇವೆ ಎಂದರು.

ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಶಿಕ್ಷಣ ನೀತಿಯ ಬಗ್ಗೆ ಸಾರ್ವತ್ರಿಕ ಚರ್ಚೆಗಳು ನಡೆಯಬೇಕಾಗಿತ್ತು, ಆದರೆ ಚರ್ಚೆಗಳು ಕಡಿಮೆಯಾಗಿವೆ. ಶಿಕ್ಷಣ ನೀತಿಯ ಬಗ್ಗೆ ಶಿಕ್ಷಕ ಮೌನ ಮುರಿಯಬೇಕು ಎಂದರು.

ಮಂಗಳೂರು ಸಂತ ಅಲೋಶಿಯಸ್‌ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ| ವಿಶ್ವನಾಥ ಬದಿಕಾನ ಪ್ರಧಾನ ಭಾಷಣ ಮಾಡಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ರಾಂ ಸುಳ್ಳಿ, ಮಂಗಳೂರು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಸಿಪ್ರಿಯನ್‌ ಮೊಂತೆರೋ, ಮಂಗಳೂರು ಡಯಟ್‌ ಪ್ರಾಂಶುಪಾಲೆ ರಾಜಲಕ್ಷ್ಮೀ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಭುವನೇಶ್‌, ಸುಳ್ಯ ತಹಶೀಲ್ದಾರ್‌ ಮಂಜುನಾಥ್‌, ಸುಳ್ಯ ತಾ.ಪಂ. ಇಒ ರಾಜಣ್ಣ ವೇದಿಕೆಯಲ್ಲಿದ್ದರು.

ದ.ಕ. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ ಸ್ವಾಗತಿಸಿ, ಬಿಇಒ ರಮೇಶ್‌ ಬಿ.ಈ. ವಂದಿಸಿದರು. ಶಿಕ್ಷಕರಾದ ಆಶಾ, ಮಮತಾ, ಅಚ್ಯುತ ಅಟೂÉರು ನಿರ್ವಹಿಸಿದರು.

ಗೌರವ
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ಸುಳ್ಯ ತಾಲೂಕಿನ ನಿವೃತ್ತ ಶಿಕ್ಷಕರು, ಸಿಬಂದಿಗೆ ಸಮ್ಮಾನ, ತಾಲೂಕಿನ ಸ್ಕೌಟ್‌/ಗೈಡ್ಸ್‌ ವಿಭಾಗದ ಉತ್ತಮ ಶಿಕ್ಷಕರಿಗೆ ಅಭಿನಂದನೆ, ಎಸೆಸೆಲ್ಸಿಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ, ಎಸೆಸೆಲ್ಸಿಯಲ್ಲಿ ಶೇ. 100 ಫ‌ಲಿತಾಂಶ ಪಡೆದ ಶಾಲೆಗಳ ಅಭಿನಂದನೆ ನಡೆಯಿತು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.