Rain: ದಕ್ಷಿಣ ಕನ್ನಡ, ಉಡುಪಿ: ಮಳೆ ಇಳಿಮುಖ
Team Udayavani, Sep 27, 2024, 10:49 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮಳೆಯ ಬಿರುಸು ಕಡಿಮೆಯಾಗಿದೆ. ಮಂಗಳೂರು ಸಹಿತ ಜಿಲ್ಲೆಯ ಕೆಲವೆಡೆ ತಡರಾತ್ರಿ ಸಾಧಾರಣ ಮಳೆಯಾಗಿದೆ.
ಮಂಗಳೂರಿನಲ್ಲಿ ದಿನವಿಡೀ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಮಂಗಳೂರಿನಲ್ಲಿ 29.6 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1 ಡಿ.ಸೆ. ಇಳಿಕೆ ಮತ್ತು 23.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.2 ಡಿ.ಸೆ. ಏರಿಕೆ ಕಂಡಿತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಮೋಡದಿಂದ ಕೂಡಿದ ವಾತಾವರಣ ಮತ್ತು ಕೆಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ.
ಉಡುಪಿಯಲ್ಲಿ: ಜಿಲ್ಲೆಯ ಹಲವೆಡೆ ಶುಕ್ರವಾರ ಬಿಸಿಲು ಮೋಡ ಕವಿದ ವಾತಾವರಣ ನಡುವೆ ಮಳೆಯಾಗಿದೆ. ಕುಂದಾಪುರ, ಬೈಂದೂರು, ಬ್ರಹ್ಮಾವರ, ಕಾರ್ಕಳ, ಕಾಪು, ಹೆಬ್ರಿ, ಉಡುಪಿ ಸುತ್ತಮುತ್ತಲಿನ ಕಡೆಗಳಲ್ಲಿ ಬಿಟ್ಟುಬಿಟ್ಟು ಸಣ್ಣದಾಗಿ ಮಳೆ ಸುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್
Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ
Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
MSP; ಕರ್ನಾಟಕದಲ್ಲಿ ಕಾಂಗ್ರೆಸ್ ಎಷ್ಟು ಬೆಳೆಗಳಿಗೆ ಕೊಟ್ಟಿದೆ?: ಅಮಿತ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.