ಮಳೆಯಿಂದ ಹಾನಿ, ಸಂಚಾರ ಕಷ್ಟಕರ


Team Udayavani, Jul 7, 2020, 5:24 AM IST

ಮಳೆಯಿಂದ ಹಾನಿ, ಸಂಚಾರ ಕಷ್ಟಕರ

ಸವಣೂರು: ಬೆಳಂದೂರು ಜಿ.ಪಂ. ಕ್ಷೇತ್ರ ವ್ಯಾಪ್ತಿಯ ಪಾಲ್ತಾಡು -ಚೆನ್ನಾವರ ರಸ್ತೆ ಹಾಗೂ ಬೆಳ್ಳಾರೆ ಜಿ.ಪಂ. ವ್ಯಾಪ್ತಿಯ ಚೆನ್ನಾವರ ಮಸೀದಿ ಬಳಿಯಿಂದ ಕುಂಡಡ್ಕ ವರೆಗಿನ ರಸ್ತೆ ಮಳೆಯಿಂದ ತೀರಾ ಹಾನಿಯಾಗಿದ್ದು, ಜನಸಂಚಾರಕ್ಕೆ ಸಮಸ್ಯೆಯಾಗುತ್ತಿದೆ.

ಈ ರಸ್ತೆಯು ಮಳೆಯಿಂದಾಗಿ ಡಾಮರು ಎದ್ದುಹೋಗಿದೆ. ಈ ರಸ್ತೆಯ ಮೂಲಕ ನಿತ್ಯ ಹಲವು ವಾಹನಗಳು ಸಂಚರಿಸುತ್ತಿದ್ದು, ರಸ್ತೆ ಹಾಳಾಗಿರುವುದ ರಿಂದ ಎಲ್ಲರಿಗೂ ಸಂಕಷ್ಟ ಎದುರಾಗಿದೆ. ದ್ವಿಚಕ್ರ ವಾಹನ ಸವಾರರಂತೂ ಎದ್ದು ಬಿದ್ದು ಹೋಗಬೇಕಾದ ಪರಿಸ್ಥಿತಿ. ಪಾಲ್ತಾಡಿ ಭಾಗದ ಜನರಿಗೆ ಕಡಬ ಸಂಪರ್ಕಿಸ‌ಲು ಈ ರಸ್ತೆಯ ಮೂಲಕ ಸಾಗಿ ಸವಣೂರು ಮೂಲಕ ಹೋಗಬೇಕಿದೆ. ಅಲ್ಲದೆ ಪ್ರಮುಖ ಪೇಟೆಯಾಗಿರುವ ಸವಣೂರು, ಬೆಳ್ಳಾರೆ, ಪುತ್ತೂರಿಗೆ ಹೋಗಲು ಇದೇ ರಸ್ತೆಯ ಮೂಲಕವೇ ಹೋಗಬೇಕಿದೆ.

ರಸ್ತೆಯ ಅವ್ಯವಸ್ಥೆಯಿಂದ ಪಾದಚಾರಿ ಗಳಂತೂ ಇಲ್ಲಿ ಜಾರಿ ಬೀಳುವುದು ಸಾಮಾನ್ಯವಾಗಿದೆ. ಸಂಬಂಧ ಪಟ್ಟವರು ಕೂಡಲೇ ಸ್ಪಂದಿಸಬೇಕೆಂದು ಚೆನ್ನಾವರ ಅಭ್ಯುದಯ ಯುವಕ ಮಂಡಲ ಜನಪ್ರತಿ ನಿಧಿಗಳಿಗೆ ಮನವಿ ಮಾಡಿದೆ.

ಪೊದೆ ತೆರವು, ಚರಂಡಿ ನಿರ್ಮಾಣ
ಈ ರಸ್ತೆಯ ಎರಡೂ ಬದಿಗಳಲ್ಲಿಯೂ ಆವರಿಸಿದ್ದ ಪೊದೆಗಳನ್ನು ಚೆನ್ನಾವರದ ಎಸ್ಸೆಸ್ಸೆಫ್‌ ಸಂಘಟನೆಯ ಸದಸ್ಯರು 3 ದಿನ ಗಳ ಕಾಲ ಶ್ರಮದಾನದ ನಡೆಸಿ ತೆರವು ಮಾಡಿದ್ದಾರೆ. ಚರಂಡಿ ದುರಸ್ತಿಯನ್ನು ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ. ಅವರ ನೇತೃತ್ವದಲ್ಲಿ ಗ್ರಾ.ಪಂ. ವತಿ ಯಿಂದ ಮಾಡಲಾಗಿದೆ. ಆದರೆ ಇನ್ನೂ ರಸ್ತೆ ದುರಸ್ತಿ ನಡೆಸಿಲ್ಲ.

ಹೆಚ್ಚಿನ ಅನುದಾನಕ್ಕೆ ಮನವಿ
ತಾರಿಪಡ್ಪು-ಚೆನ್ನಾವರ ರಸ್ತೆ ಅವ್ಯವಸ್ಥೆಯ ಕುರಿತು ಸ್ಥಳೀಯ ಸಂಘ-ಸಂಸ್ಥೆಗಳಿಂದ ಮನವಿ ಬಂದಿದ್ದು, ದುರಸ್ತಿಗೆ ಹೆಚ್ಚಿನ ಅನುದಾನದ ಬೇಕಾಗಿರುವುದರಿಂದ ಮೇಲಧಿಕಾರಿ ಗಳಿಗೆ ಪತ್ರ ಬರೆಯಲಾಗಿದೆ. ಗ್ರಾಮ ಪಂಚಾಯತ್‌ವತಿಯಿಂದ ಚರಂಡಿ ದುರಸ್ತಿ ಮಾಡಲಾಗಿದೆ.
– ನಾರಾಯಣ ಬಿ.
ಪಿಡಿಒ, ಸವಣೂರು ಗ್ರಾ.ಪಂ.

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.