Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

ಕ್ಷೇತ್ರ ಉಳಿಸಿಕೊಳ್ಳುವ ಉಮೇದಿನಲ್ಲಿ ಬಿಜೆಪಿ

Team Udayavani, May 13, 2024, 6:03 PM IST

Davangere: ಪಕ್ಷ ಗಳ ಗೆಲುವಿನ ಮತ ಲೆಕ್ಕಾಚಾರ ಚುನಾವಣಾ ಫಲಿತಾಂಶದ ಕಾತರ

ಉದಯವಾಣಿ ಸಮಾಚಾರ
ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮುಗಿದ ನಂತರ ದಿನೇ ದಿನೇ ಫಲಿತಾಂಶದ ಕಾತುರ ಹೆಚ್ಚುತ್ತಿದೆ. ಮತದಾರರು ಹಾಗೂ ಪಕ್ಷಗಳಲ್ಲಿ ಗೆಲುವಿನ ಲೆಕ್ಕಾಚಾರ ಜೋರಾಗಿದ್ದು ಎಲ್ಲೆಡೆ ಇದೇ ಚರ್ಚೆ ನಡೆದಿದೆ. ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್‌ ಕಾಲು ಶತಮಾನಕ್ಕೂ ಹೆಚ್ಚು ಕಾಲದಿಂದ ಕಾಯುತ್ತಿದ್ದರೆ, ಬಿಜೆಪಿ ಗೆಲುವಿನ ನಾಗಾಲೋಟ ಮುಂದುವರಿಸುವ ಉಮೇದಿನಲ್ಲಿದೆ.

ಹೌದು ಹಿಂದೊಮ್ಮೆ ಕೈ ಭದ್ರಕೋಟೆಯೇ ಆಗಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿ ಕಾಲು ಶತಮಾನಕ್ಕಿಂತಲೂ ಹೆಚ್ಚು ವರ್ಷವಾಗಿವೆ. 1998 ರಲ್ಲಿ ಶಾಮನೂರು ಶಿವಶಂಕರಪ್ಪ ಗೆಲುವಿನ ನಂತರ ದಾವಣಗೆರೆ
ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ 26 ವರ್ಷಗಳಿಂದ ಗೆದ್ದೇ ಇಲ್ಲ.

1977 ರಲ್ಲಿ ಅವಿಭಜಿತ ಚಿತ್ರದುರ್ಗ ಜಿಲ್ಲೆಯಿಂದ ಪ್ರತ್ಯೇಕವಾದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನದ್ದೇ ಪಾರಮ್ಯ. 1977 ರಲ್ಲಿ ಕೊಂಡಜ್ಜಿ ಬಸಪ್ಪ, 1980 ರಲ್ಲಿ ಟಿ.ವಿ. ಚಂದ್ರಶೇಖರಪ್ಪ, 1984 ರಿಂದ 1991 ರ ವರೆಗೆ ಚನ್ನಯ್ಯ ಒಡೆಯರ್‌ ಗೆದ್ದ ಇತಿಹಾಸ ಇದೆ. 1991 ರಲ್ಲಿ ಬಿಜೆಪಿಯ ಎಸ್‌.ಎ. ರವೀಂದ್ರನಾಥ್‌ ಕಾಂಗ್ರೆಸ್‌ನ ಚನ್ನಯ್ಯ ಒಡೆಯರ್‌ ವಿರುದ್ಧ 455 ಅಲ್ಪಮತಗಳಲ್ಲಿ ಸೋತ ನಂತರ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಮಲದ ಕಮಾಲ್‌ ಗೆ ಮುನ್ನುಡಿ ಬರೆಯಲಾಯಿತು.

1996 ರಲ್ಲಿ ಭೀಮಸಮುದ್ರದ ಅಡಕೆ ವರ್ತಕ ಜಿ. ಮಲ್ಲಿಕಾರ್ಜುನಪ್ಪ  ಕಾಂಗ್ರೆಸ್‌ನ ಚನ್ನಯ್ಯ ಒಡೆಯರ್‌ ವಿರುದ್ಧ 97,087 ಮತಗಳ ಅಂತರದಲ್ಲಿ ಜಯಿಸುವ ಮೂಲಕ ಮೊಟ್ಟ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದರು. 1998 ರ ಚುನಾವಣೆಯಲ್ಲಿ
ಕಾಂಗ್ರೆಸ್‌ನ ಶಾಮನೂರು ಶಿವಶಂಕರಪ್ಪ ಬಿಜೆಪಿಯ ಜಿ. ಮಲ್ಲಿಕಾರ್ಜುನಪ್ಪ ವಿರುದ್ಧ 11,332 ಮತಗಳಲ್ಲಿ ಗೆಲ್ಲುವ ಮೂಲಕ ದಾವಣಗೆರೆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್‌ ತೆಕ್ಕೆಗೆ ತರುವಲ್ಲಿ ಯಶಸ್ವಿಯಾದರು. ಆದರೆ, ಹದಿಮೂರೇ ತಿಂಗಳಲ್ಲಿ ನಡೆದ 1999 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಜಿ. ಮಲ್ಲಿಕಾರ್ಜುನಪ್ಪ ವಿರುದ್ಧ 16,269 ಮತಗಳಲ್ಲಿ ಶಾಮನೂರು ಸೋಲು
ಕಂಡರು.

1999 ರ ಗೆಲುವಿನ ನಂತರ ಬಿಜೆಪಿ ಹಿಂತಿರುಗಿ ನೋಡುವ ಪ್ರಮೇಯವೇ ಬರಲಿಲ್ಲ. 2004, 2009, 2014, 2019 ರಲ್ಲಿ ಜಿ. ಮಲ್ಲಿಕಾರ್ಜುನಪ್ಪ ಅವರ ಪುತ್ರ ಡಾ|ಜಿ.ಎಂ. ಸಿದ್ದೇಶ್ವರ ಸತತವಾಗಿ ಗೆಲುವು ಸಾಧಿಸುವ ಮೂಲಕ ಅಕ್ಷರಶಃ ಬಿಜೆಪಿಯನ್ನು ಭದ್ರಕೋಟೆ ಯನ್ನಾಗಿಸಿದ್ದಾರೆ. ಸತತ ಮೂರು ಚುನಾವಣೆಯಲ್ಲಿ ಪ್ರಬಲ ಅಭ್ಯರ್ಥಿ ಎಸ್‌.ಎಸ್‌. ಮಲ್ಲಿಕಾರ್ಜುನ್‌
ವಿರುದ್ದವೇ ಗೆಲುವು ದಾಖಲಿಸಿರುವುದು ವಿಶೇಷ.

ಕಾತರದಲ್ಲಿ ಕಾಂಗ್ರೆಸ್‌: 1998 ರ ನಂತರ ಗೆಲುವನ್ನೇ ಕಾಣದ ಕಾಂಗ್ರೆಸ್‌ 2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದೇ ಗೆಲ್ಲುವಂತಹ ಭರಪೂರ ವಿಶ್ವಾಸದಲ್ಲಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿನ ಅಮೋಘ ಸಾಧನೆ. ಹರಿಹರ ಹೊರತು ಪಡಿಸಿ ಇನ್ನುಳಿದ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರು ಇರುವುದು. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಅಲೆಯಲ್ಲಿ ಕಾಲು
ಶತಮಾನದ ನಂತರ ಕ್ಷೇತ್ರ ಕೈ ವಶವಾಗಲಿದೆ ಎಂಬ ಲೆಕ್ಕಾಚಾರ ನಡೆದಿದೆ.

ಕಳೆದ ಹಲವಾರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಾಳೆಯದಲ್ಲಿ ಕಾಣದೇ ಹೋಗಿದ್ದಂತಹ ವಿಶ್ವಾಸ, ಒಗ್ಗಟ್ಟಿನ
ಹೋರಾಟ, ಗೆದ್ದೇ ಗೆಲ್ಲಬೇಕು ಎಂಬ ಕಾರ್ಯತಂತ್ರ, ಮತದಾರರ ಮನೆ, ಮನಗಳಿಗೆ ಮುಟ್ಟುವ ನಿಟ್ಟಿನಲ್ಲಿ ನಡೆಸಿದ ಅತ್ಯಂತ ವ್ಯವಸ್ಥಿತ ಪ್ರಚಾರ ಕಾರ್ಯ, ಹೊಸ, ವಿದ್ಯಾವಂತ ಅಭ್ಯರ್ಥಿ… ಈ ಎಲ್ಲವೂ ಕಾಂಗ್ರೆಸ್‌ನ ಗೆಲುವಿಗೆ ಸಹಕಾರಿ ಆಗಲಿವೆ ಎಂಬ ಭರ್ಜರಿ ವಿಶ್ವಾಸ ಕಾಂಗ್ರೆಸ್‌ನಲ್ಲಿ ಕಂಡು ಬರುತ್ತಿದೆ. ಇದೇ ಮೊದಲ ಬಾರಿಗೆ ಕಾಂಗ್ರೆಸ್‌ನಲ್ಲಿ ಇಂತಹ ಆತ್ಮವಿಶ್ವಾಸದ
ವಾತಾವರಣ ಮೂಡಿರುವುದು ವಿಶೇಷ.

ಬಲದ ವಿಶ್ವಾಸದಲ್ಲಿ ಬಿಜೆಪಿ: ಸತತ ನಾಲ್ಕು ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಸಹ ಐದನೇ ಬಾರಿಯೂ ಜಯ ಸಾಧಿಸುವ ಭಾರೀ ವಿಶ್ವಾಸದಲ್ಲೇ ಇದೆ. ಕೇಂದ್ರ ಸರ್ಕಾರದ ಸಾಧನೆ, ಸಿದ್ದೇಶ್ವರ ಅವರು ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ, ಹೊಸ ಅಭ್ಯರ್ಥಿ, ಪ್ರಮುಖವಾಗಿ ಮೋದಿ ಅಲೆ, ಜೆಡಿಎಸ್‌ನೊಂದಿಗೆ ಮೈತ್ರಿ, ಬೂತ್‌, ಶಕ್ತಿ ಕೇಂದ್ರ ಮಟ್ಟದಲ್ಲಿ ಮುಖಂಡರು, ಕಾರ್ಯಕರ್ತರ ಶ್ರಮ, ಯುವ ಮತದಾರ ಕೈ ಹಿಡಿಯುವ ವಿಶ್ವಾಸ ಹೀಗೆ ಎಲ್ಲವೂ ಗೆಲುವು ತಂದು ಕೊಟ್ಟೇ ಕೊಡುತ್ತವೆ ಎಂಬ ಆತ್ಮವಿಶ್ವಾಸ ಕಮಲ ಪಾಳಯದಲ್ಲಿ ಇದೆ. ಆದರೂ, ಪ್ರತಿ ಚುನಾವಣೆಯಲ್ಲಿನ ಬಿಜೆಪಿಯಲ್ಲಿನ ಸಂಘಟಿತ ಹೋರಾಟ ಈ ಬಾರಿ ಅಷ್ಟಾಗಿ ಕಂಡು ಬರಲಿಲ್ಲ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವುದೂ ಈ ಬಾರಿಯ ವಿಶೇಷ.

ಲೆಕ್ಕಾಚಾರಗಳು ಏನೇ ಇರಲಿ. ಈಗಾಗಲೇ ಮತದಾರರ ನಿರ್ಧಾರ ವಿದ್ಯುನ್ಮಾನ ಮತ ಯಂತ್ರಗಳಲ್ಲಿ ಭದ್ರವಾಗಿ ದಾಖಲಾಗಿದೆ. ಜೂ. 4 ರಂದು ಬಹಿರಂಗವಾಗಲಿದೆ. ಅಲ್ಲಿಯವರೆಗೂ ಸೋಲು-ಗೆಲುವಿನ ಲೆಕ್ಕಾಚಾರ ಇದ್ದೇ ಇರಲಿದೆ.

■ ರಾ. ರವಿಬಾಬು

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವa

Davanagere; ನನ್ನಅಳಿಯನನ್ನು ಬಿಟ್ಟು ಬಿಟ್ಟಿದ್ದರೆ ದರ್ಶನ್‌ ಗೆ….: ರೇಣುಕಾಸ್ವಾಮಿ ಮಾವ

6-

Nyamathi ಪಟ್ಟಣದ ಹಲವೆಡೆ ಸರಣಿ ಕಳ್ಳತನ; ನಾಲ್ವರಲ್ಲಿ ಇಬ್ಬರು ಆರೋಪಿಗಳ ಬಂಧನ, ಸ್ವತ್ತು ವಶ

BC-Patil

Congress ವಿಪಕ್ಷದಲ್ಲಿದ್ದಾಗ ಕೋವಿಡ್ ಹಗರಣ ಬಗ್ಗೆ ಸುಮ್ಮನಿದ್ದಿದ್ದೇಕೆ?: ಬಿ.ಸಿ.ಪಾಟೀಲ್‌

Protest against Aadhaar link to agricultural pump set: Kodihalli Chandrasekhar

ಕೃಷಿ ಪಂಪ್ ಸೆಟ್ ಗೆ ಆಧಾರ‌ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್‌

Davanagere; Governor’s post should be abolished: CPI

Davanagere; ರಾಜ್ಯಪಾಲ ಹುದ್ದೆಯನ್ನೇ ರದ್ದು ಮಾಡಬೇಕು: ಸಿಪಿಐ ಆಗ್ರಹ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.