MLA ಟಿಕೆಟ್‌ ಕೊಡಿಸುವುದಾಗಿ ವಂಚನೆ- ಚೈತ್ರಾ ಪ್ರಕರಣದಲ್ಲಿ ನಾಲ್ವರಿಗೆ ನೋಟಿಸ್‌


Team Udayavani, Sep 21, 2023, 11:43 PM IST

chaitra kundapur

ಬೆಂಗಳೂರು: ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ನಾಲ್ವರಿಗೆ ನೋಟಿಸ್‌ ನೀಡಿದೆ.

ಈ ಪೈಕಿ ಹಾಲಶ್ರೀ ಸ್ವಾಮೀಜಿಯ ಆಪ್ತ ಪ್ರಣವ್‌ ಪ್ರಸಾದ್‌ ಗುರುವಾರ ವಿಚಾರಣೆಗೆ ಹಾಜರಾಗಿದ್ದಾನೆ. ಮತ್ತೂಂದೆಡೆ ಸ್ವಾಮೀಜಿ ಆಪ್ತ ತಿಪ್ಪೇಸ್ವಾಮಿ, ದೂರುದಾರ ಗೋವಿಂದಬಾಬು ಪೂಜಾರಿಗೆ ಪ್ರಕರಣದಲ್ಲಿ ಸಹಾಯ ಮಾಡಿದ ಕಡೂರಿನ ತುಡುಕೂರು ಮಂಜು ಮತ್ತು ಕೆಪಿಸಿಸಿ ವಕ್ತಾರ ಮೈಸೂರಿನ ಲಕ್ಷ್ಮಣ್‌ ವಿಚಾರಣೆಗೆ ಗೈರಾಗಿದ್ದಾರೆ.
ಮೈಸೂರಿನ ಪ್ರಣವ್‌ ಪ್ರಸಾದ್‌ ಗುರುವಾರ ವಿಚಾರಣೆ ಹಾಜ ರಾಗಿದ್ದು, ಸ್ವಇಚ್ಛಾ ಹೇಳಿಕೆ ನೀಡಿ ದ್ದಾನೆ. ಈ ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ. ಸ್ವಾಮೀಜಿಯ ಕಾರು ಚಾಲಕ ರಾಜು ಎಂಬಾತ ಹಣ ತಂದು ತಮ್ಮ ಕಚೇರಿಯಲ್ಲಿ ಇಟ್ಟಿದ್ದ.

ಬಳಿಕ ಯಾವುದೋ ಬ್ಯಾಗ್‌ ಎಂದು ಸುಮ್ಮನಾದೆ, ಪ್ರಕರಣ ಮಾಧ್ಯಮ ಗಳಲ್ಲಿ ಬಂದ ಬಳಿಕ ಬ್ಯಾಗ್‌ ಪರಿಶೀಲಿಸಿದಾಗ ಹಣ ಇರುವುದು ಗೊತ್ತಾಗಿ, ಮಠಕ್ಕೆ ವಾಪಸ್‌ ಕೊಟ್ಟಿದ್ದೇನೆ. ಹಣದ ಮೂಲದ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೂರುದಾರ ಗೋವಿಂದಬಾಬು ಪೂಜಾರಿಗೆ ನೆರವಾದ ತುಡುಕೂರು ಮಂಜು ಮತ್ತು ಸುದ್ದಿಗೋಷ್ಠಿಯಲ್ಲಿ ಪ್ರಕರಣದಲ್ಲಿ ದೊಡ್ಡವರು ಭಾಗಿಯಾಗಿದ್ದಾರೆ ಎಂಬ ಹೇಳಿಕೆ ನೀಡಿದ್ದ ಕೆಪಿಸಿಸಿ ವಕ್ತಾರ ಲಕ್ಷ್ಮಣ್‌ಗೆ ಹೆಚ್ಚಿನ ಮಾಹಿತಿ ನೀಡುವಂತೆ ನೋಟಿಸ್‌ ಕೊಡಲಾಗಿತ್ತು. ಇನ್ನು ಸ್ವಾಮೀಜಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ತಿಪ್ಪೇಸ್ವಾಮಿ ಎಂಬವ ರಿಗೂ ನೋಟಿಸ್‌ ಕಳುಹಿಸಲಾಗಿತ್ತು.

2.76 ಕೋ. ರೂ. ಜಪ್ತಿ
ಸಿಸಿಬಿ ಪೊಲೀಸರು ಆರೋಪಿಗಳ ವಶದಲ್ಲಿದ್ದ ಹಣವನ್ನು ಜಪ್ತಿ ಮಾಡು ತ್ತಿದ್ದಾರೆ. ಹಾಲಶ್ರೀ ಮಠಕ್ಕೆ ಪ್ರಣವ್‌ ಪ್ರಸಾದ್‌ ತಲುಪಿಸಿದ್ದ 56 ಲಕ್ಷ ರೂ., ಚೈತ್ರಾಳಿಂದ ಚಿನ್ನಾಭರಣ, ನಗದು, ಕಾರು, ಎಫ್ಡಿ ಸೇರಿ 2 ಕೋ. ರೂ. ಜಪ್ತಿ ಮಾಡಲಾಗಿದೆ. ಸ್ವಾಮೀಜಿ ಪರಿಚಯಸ್ಥರಲ್ಲಿದ್ದ 20 ಲ.ರೂ. ಸಹಿತ ಒಟ್ಟು 2.76 ಕೋ. ರೂ. ಜಪ್ತಿ ಮಾಡಲಾಗಿದೆ.

ಯಾರ ಹೆಸರಿನಲ್ಲಿ ಕೆ.ಕೆ.ಗೆಸ್ಟ್‌ ಹೌಸ್‌ನಲ್ಲಿ ರೂಮ್‌?
ಸಾಮಾನ್ಯವಾಗಿ ಕುಮಾರ ಕೃಪಾ ಗೆಸ್ಟ್‌ ಹೌಸ್‌ನಲ್ಲಿ ರಾಜಕೀಯ ಹಿನ್ನೆಲೆ, ಸರಕಾರಿ ಅಧಿಕಾರಿಗಳು ಸಹಿತ ಆಯ್ದ ಕೆಲವು ವರ್ಗದ ವ್ಯಕ್ತಿಗಳಿಗಷ್ಟೇ ರೂಮ್‌ ಸಿಗುತ್ತದೆ. ಆದರೆ ಚೈತ್ರಾ ಯಾರ ಹೆಸರನ್ನು ಬಳಸಿಕೊಂಡು ಕೋಣೆ ಕಾದಿರಿಸಿಕೊಂಡಿದ್ದಳು ಎಂಬುದು ಗೊತ್ತಾಗಿಲ್ಲ. ಹೀಗಾಗಿ ಗೆಸ್ಟ್‌ಹೌಸ್‌ನಲ್ಲಿ ಅಂದಿನ ಸಿಸಿಕೆಮರಾ ದೃಶ್ಯಗಳು ಹಾಗೂ ಡೈರಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಮೌನಕ್ಕೆ ಜಾರಿದ ಚೈತ್ರಾ
ಕೆಲವು ದಿನಗಳ ಹಿಂದೆ ಮಾಧ್ಯಮಗಳ ಮುಂದೆ “ಸ್ವಾಮೀಜಿ ಸಿಗಲಿ ದೊಡ್ಡವರ ಹೆಸರೆಲ್ಲ ಹೊರಗೆ ಬರುತ್ತದೆ’ ಎಂದು ಹೇಳಿದ್ದ ಚೈತ್ರಾ ಕುಂದಾಪುರ ಸ್ವಾಮೀಜಿ ಬಂಧನದ ಬಳಿಕ ಮೌನಕ್ಕೆ ಶರಣಾಗಿದ್ದಾಳೆ. ಪೊಲೀಸ್‌ ವಶದಲ್ಲಿರುವ ಸ್ವಾಮೀಜಿ, ಚೈತ್ರಾ ಕುಂದಾಪುರ, ಗಗನ್‌ ಮತ್ತು ತಂಡ ಹೊರತುಪಡಿಸಿ ಬೇರೆ ಯಾರ ಬಗ್ಗೆಯೂ ತಿಳಿದಿಲ್ಲ ಎಂದು ಹೇಳಿದ್ದರು. ಸ್ವಾಮೀಜಿ ಮತ್ತು ಚೈತ್ರಾಳನ್ನು ಮುಖಾಮುಖೀ ವಿಚಾರಣೆಗೆ ನಡೆಸಿದಾಗ ಚೈತ್ರಾ ಮೌನಕ್ಕೆ ಶರಣಾಗಿದ್ದಾಳೆ. ದೊಡ್ಡವರ ಬಗ್ಗೆ ಮಾಹಿತಿ ಇಲ್ಲ. ಸ್ವಾಮೀಜಿ, ಗಗನ್‌ ಸೇರಿ ಒಂದೆರಡು ಮಂದಿ ಮಾತ್ರ ಇದ್ದೇವೆ. ಬೇರೆ ಯಾರ ಬಗ್ಗೆಯೂ ಗೊತ್ತಿಲ್ಲ ಎಂದು ಹೇಳಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಗೋವಿಂದಬಾಬು ಪೂಜಾರಿಗೆ ಸಂಕಷ್ಟ
ಪ್ರಕರಣದ ದೂರುದಾರ ಗೋವಿಂದಬಾಬು ಪೂಜಾರಿಗೆ ಮತ್ತೂಂದು ಸಂಕಷ್ಟ ಎದುರಾಗಿದೆ. 5 ಕೋಟಿ ರೂ. ಮೂಲದ ಬಗ್ಗೆ ತನಿಖೆ ನಡೆಸುವಂತೆ ವಕೀಲ ನಟರಾಜ್‌ ಶರ್ಮಾ ಎಂಬವರು ಜಾರಿ ನಿರ್ದೇಶನಾಲಯಕ್ಕೆ ಗೋವಿಂದಬಾಬು ಪೂಜಾರಿ ವಿರುದ್ಧ ದೂರು ನೀಡಿದ್ದಾರೆ. ಇಷ್ಟೊಂದು ದೊಡ್ಡ ಮೊತ್ತದ ಹಣ ಹವಾಲ ಮೂಲಕ ಬಂದಿರುವ ಅನುಮಾನವಿದೆ. ಹೀಗಾಗಿ ಈ ಪ್ರಕರಣವನ್ನು ಇ.ಡಿ. ತನಿಖೆ ಮಾಡಿ ಹಣದ ಮೂಲದ ಬಗ್ಗೆ ವಿಚಾರಣೆ ನಡೆಸಬೇಕು. ಬ್ಯಾಂಕ್‌ನಿಂದ ಸಾಲ ಪಡೆಯಲಾಗಿದೆ ಎಂದು ಗೋವಿಂದ ಬಾಬು ಪೂಜಾರಿ ಹೇಳಿ¨ªಾರೆ. ಸಾಲವಾಗಿ ಪಡೆದ ಹಣವನ್ನು ಹೀಗೆ ಬಳಸಿಕೊಳ್ಳುವುದೂ ತಪ್ಪು, ಅವರು ಮುಂಬಯಿಯಲ್ಲಿ ವ್ಯವಹಾರ ನಡೆೆಸಿರುವ ಹಿನ್ನೆಲೆಯಲ್ಲಿ ಹವಾಲ ಹಣ ಇರಬಹುದು ಎಂದು ನಟರಾಜ್‌ ಶರ್ಮಾ ಇಡಿಗೆ ದೂರು ನೀಡಿದ್ದಾರೆ.

ಇದುವರೆಗೆ 8 ಆರೋ ಪಿಗಳನ್ನು ಬಂಧಿಸ ಲಾಗಿದ್ದು, ಅವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಗಳಿಂದ ನಗದು ಸಹಿತ ಒಟ್ಟು 2.76 ಕೋಟಿ ರೂ.ಜಪ್ತಿ ಮಾಡಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ಪ್ರಣವ್‌ ಪ್ರಸಾದ್‌, ತಿಪ್ಪೇಸ್ವಾಮಿ ಸೇರಿ ನಾಲ್ವರಿಗೆ ಸಿಸಿಬಿ ನೋಟಿಸ್‌ ನೀಡಿದ್ದು, ಸದ್ಯ ಪ್ರಣವ್‌ ವಿಚಾರಣೆಗೆ ಹಾಜರಾಗಿ¨ªಾರೆ.
-ಬಿ.ದಯಾನಂದ, ನಗರ ಪೊಲೀಸ್‌ ಆಯುಕ್ತ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.