ತ್ರಿವಳಿ ಆಘಾತ! ದೀಪಕ್ ಚಹರ್ ನಿರ್ಗಮನ ಅಧಿಕೃತ
ಡೆಲ್ಲಿ ಫಿಸಿಯೋ ಪ್ಯಾಟ್ರಿಕ್ಗೆ ಕೋವಿಡ್ ; ಕೆಕೆಆರ್ನ ರಾಸಿಖ್ ಸಲಾಂ ಹೊರಕ್ಕೆ
Team Udayavani, Apr 16, 2022, 6:25 AM IST
ಮುಂಬಯಿ: ಶುಕ್ರವಾರ ಐಪಿಎಲ್ ಕೂಟಕ್ಕೆ ತ್ರಿವಳಿ ಆಘಾತ ಎದುರಾಗಿದೆ. ಗಾಯದ ಸಮಸ್ಯೆಗೆ ಸಿಲುಕಿದ್ದ ಚೆನ್ನೈ ಸೂಪರ್ ಕಿಂಗ್ಸ್ನ ಬೌಲಿಂಗ್ ಆಲ್ರೌಂಡರ್ ದೀಪಕ್ ಚಹರ್ ಅವರು ಕೂಟದಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ.
ಕೋಲ್ಕತಾ ನೈಟ್ರೈಡರ್ ನ ವೇಗಿ ರಾಸಿಖ್ ಸಲಾಂ ಕೂಡ ಗಾಯಾಳಾಗಿ ಕೂಟದಿಂದ ನಿರ್ಗಮಿಸಿದ್ದಾರೆ.
ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ನ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ!
ಮಂಡಿ ನೋವಿನಿಂದಾಗಿ ದೀಪಕ್ ಚಹರ್ ಕೂಟದಿಂದ ಹೊರಬಿದ್ದಿದ್ದಾರೆ ಎಂದು ಐಪಿಎಲ್ ಪ್ರಕಟನೆ ತಿಳಿಸಿದೆ.
ಕೆಕೆಆರ್ ವೇಗಿ ರಾಸಿಖ್ ಸಲಾಂ ಬೆನ್ನುನೋವಿನ ಸಮಸ್ಯೆಗೆ ಸಿಲುಕಿದ್ದು, ಅವರು ಕೂಟದಿಂದ ಬೇರ್ಪಡುವುದು ಅನಿವಾರ್ಯವಾಗಿದೆ. ಇವರ ಬದಲು ದಿಲ್ಲಿಯ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ಸೇರಿಸಿಕೊಳ್ಳಲಾಗಿದೆ. ಸಲಾಂ ಈ ಐಪಿಎಲ್ನಲ್ಲಿ ಕೆಕೆಆರ್ ಪರ ಎರಡು ಪಂದ್ಯಗಳನ್ನು ಆಡಿದ್ದರು. ಬದಲಿ ಆಟಗಾರ ಹರ್ಷಿತ್ ರಾಣಾ ಅವರೊಂದಿಗೆ ಕೆಕೆಆರ್ 20 ಲಕ್ಷ ರೂ. ಒಪ್ಪಂದ ಮಾಡಿಕೊಂಡಿದೆ.
ಇದನ್ನೂ ಓದಿ:ಎಫ್ಐಎಚ್ ಪ್ರೊ ಲೀಗ್ ಹಾಕಿ: ಜರ್ಮನಿಯೆದುರು ಭಾರತಕ್ಕೆ ಗೆಲುವು
ಫರ್ಹಾರ್ತ್ಗೆ ಸೋಂಕು
ಟೀಮ್ ಇಂಡಿಯಾದ ಫಿಸಿಯೋ ಆಗಿದ್ದ ಡೆಲ್ಲಿ ಕ್ಯಾಪಿಟಲ್ಸ್ನ ಪ್ಯಾಟ್ರಿಕ್ ಫರ್ಹಾರ್ತ್ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಫ್ರಾಂಚೈಸಿಯ ವೈದ್ಯಕೀಯ ತಂಡ ಅವರ ಬಗ್ಗೆ ತೀವ್ರ ನಿಗಾ ವಹಿಸುತ್ತಿದೆ. ಸದ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಪಿಎಲ್ಗೆ ಕೋವಿಡ್ ಅಪಾಯ ಎದುರಾಗಲೂಬಹುದು.
ಕಳೆದ ವರ್ಷ ಎರಡನೇ ಅಲೆ ತೀವ್ರಗೊಂಡಾಗ ಐಪಿಎಲ್ ಕೂಟವನ್ನು ಅಮಾನತುಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.