SC: ಸಿಂಧೂರಿ ವಿರುದ್ಧದ ಪೋಸ್ಟ್‌ ಡಿಲೀಟ್‌ ಮಾಡಿ: ರೂಪಾಗೆ ಸುಪ್ರೀಂ ಸೂಚನೆ


Team Udayavani, Dec 14, 2023, 10:27 PM IST

roopa rohini

ನವದೆಹಲಿ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಐಪಿಎಸ್‌ ಅಧಿಕಾರಿ ಡಿ.ರೂಪಾ ಅವರು ಸಮಾಜಿಕ ಜಾಲತಾಣದಲ್ಲಿ ಹಾಕಿದ್ದ ಎಲ್ಲ ಪೋಸ್ಟ್‌ಗಳನ್ನು 24 ಗಂಟೆ ಒಳಗಾಗಿ ಡಿಲೀಟ್‌ ಮಾಡುವಂತೆ ಸುಪ್ರೀಂಕೋರ್ಟ್‌ ಡಿ.ರೂಪಾ ಅವರಿಗೆ ಗುರುವಾರ ನಿರ್ದೇಶಿಸಿದೆ.

ರೂಪಾ ಅವರ ವಿರುದ್ಧ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಪಂಕಜ್‌ ಮಿಥಲ್‌ ಅವರ ನ್ಯಾಯಪೀಠ ವಿಚಾರಣೆ ನಡೆಸಿದೆ.

ಈ ವೇಳೆ ರೋಹಿಣಿ ವಿರುದ್ಧದ ಪೋಸ್ಟ್‌ಗಳನ್ನು ತೆಗದುಹಾಕಲು 24 ಗಂಟೆಗಳ ಗಡುವನ್ನು ಮೌಖೀಕವಾಗಿ ನ್ಯಾಯಾಲಯ ನೀಡಿದೆ. ಜತೆಗೆ ಎಲ್ಲ ಪೋಸ್ಟ್‌ಗಳನ್ನು ಡಿಲೀಟ್‌ ಮಾಡಲು ಸಾಧ್ಯವಾಗದಿದ್ದರೆ, ರೋಹಿಣಿ ಅವರ ವಿರುದ್ಧ ನಾನು ಈವರೆಗೆ ನೀಡಿದ ಎಲ್ಲ ಹೇಳಿಕೆಗಳನ್ನೂ ಹಿಂಪಡೆಯುತ್ತಿದ್ದೇನೆ ಎಂದು ಹೊಸ ಪೋಸ್ಟ್‌ ಒಂದನ್ನು ಹಾಕುವಂತೆ ರೂಪಾ ಅವರಿಗೆ ಸೂಚನೆ ನೀಡಿದೆ.

ಕರ್ನಾಕಟದ ಉನ್ನತ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ರೂಪಾ ನಡುವೆ ಜಾಲತಾಣದಲ್ಲೇ ಬಹಿರಂಗ ಜಟಾಪಟಿ ನಡೆದಿತ್ತು. ಈ ವೇಳೆ ರೋಹಿಣಿ ಅವರ ಕೆಲ ಖಾಸಗಿ ಫೋಟೋಗಳನ್ನು ರೂಪಾ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿ ಹಲವು ಆರೋಪಗಳನ್ನು ಮಾಡಿದ್ದರು. ಭ್ರಷ್ಟಾಚಾರದ ಆರೋಪಗಳೂ ರೋಹಿಣಿ ಅವರ ವಿರುದ್ಧ ಮಾಡಲಾಗಿತ್ತು. ಆ ಬಳಿಕ ರೋಹಿಣಿ ಸಿಂಧೂರಿ ಅವರು ಡಿ.ರೂಪಾ ವಿರುದ್ಧ ಮಾನನಷ್ಟ ಆರೋಪದ ಮೊಕದ್ದಮೆ ಹೂಡಿದ್ದರು.

ಪ್ರಕರಣವನ್ನು ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಲು ನ್ಯಾಯಾಲಯ ಸೂಚಿಸಿತ್ತು. ಅದೂ ವಿಫ‌ಲವಾದ ಹಿನ್ನೆಲೆಯಲ್ಲಿ ಆಡಳಿತದ ಬಗೆಗಿನ ಕಾಳಜಿಯಿಂದ ಅರ್ಜಿಯನ್ನು ಆಲಿಸಿದೆ. ಇಬ್ಬರೂ ಅಧಿಕಾರಿಗಳು ಖುದ್ದು ಹಾಜರಾಗಿದ್ದಾಗ ರೂಪಾ ಅವರಿಗೆ ಪೋಸ್ಟ್‌ಗಳನ್ನು ತೆಗೆಯಲು ಸೂಚನೆ ನೀಡಿದ್ದು, ಈ ಸಂಬಂಧಿಸಿದಂತೆ ಶುಕ್ರವಾರ ಅಫಿಡವಿಟ್‌ ಸಲ್ಲಿಸುವಂತೆಯೂ ತಿಳಿಸಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.