Desi Swara: ಅಪಹಾಸ್ಯ ನೀಡಿದ ಅದೃಷ್ಟ

ಆಲೋಚನೆಗಳನ್ನೆಲ್ಲ ಬದಿಗಿಟ್ಟು,ಅಮ್ಮನ ಬಳಿ ವಿಷಯ ಪ್ರಸ್ತಾಪ ಮಾಡುತ್ತಾಳೆ.

Team Udayavani, Apr 27, 2024, 4:58 PM IST

Desi Swara: ಅಪಹಾಸ್ಯ ನೀಡಿದ ಅದೃಷ್ಟ

ಬಾಲ್ಯದಲ್ಲೇ ತಂದೆಯನ್ನು ಕಳೆದು ಕೊಂಡ ಸುಪ್ರೀತಾ, ತನ್ನ ತಾಯಿಯೊಂದಿಗೆ ಜೀವನ ಸಾಗಿಸುತ್ತಿದ್ದಳು. ತಾಯಿ ಟೈಲರ್‌ ವೃತ್ತಿಯನ್ನು ಮನೆಯಲ್ಲೇ ಪುಟ್ಟದೊಂದು ಹೊಲಿಗೆ ಮಷಿನ್‌ ಇಟ್ಟುಕೊಂಡು ತನಗೆ ದೊರಕುವ ಅಲ್ಪ-ಸ್ವಲ್ಪ ಬಟ್ಟೆಗಳನ್ನು ಹೊಲಿದು ಕೊಟ್ಟು ಅದರಿಂದ ಬರುವ ಸಣ್ಣ ಆದಾಯದಿಂದ ತಮ್ಮ ಜೀವನ ಸಾಗಿಸುತ್ತಿದ್ದಳು. ಸುಪ್ರೀತಾ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ಟೈಲರ್‌ ವೃತ್ತಿಯೇ ಇವರ ಜೀವನಕ್ಕೆ ಆಧಾರವಾಗಿರುವುದರಿಂದ ಅದರಿಂದ ಸಿಗುವ ಅಲ್ಪ ಮೊತ್ತ ಕೇವಲ ಮೂರು ಹೊತ್ತು ಊಟಕ್ಕೂ ಸಾಲುತ್ತಿರಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಕಷ್ಟ ಪಟ್ಟು ಆಕೆಗೆ ಒಳ್ಳೆಯ ವಿದ್ಯಾಭ್ಯಾಸ ಕೊಟ್ಟು, ನಾಡಿನ ನಾಳೆಗೆ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಬೇಕು ಎಂಬ ಮಹದಾಸೆ ಸುಪ್ರೀತಾಳ ತಾಯಿಗೆ ಇತ್ತು. ಸುಪ್ರೀತಾ ಕೂಡಾ ಅಷ್ಟೇ ಚತುರೆ, ಜಾಣೆ, ಬುದ್ಧಿವಂತೆಯಾಗಿದ್ದಳು.

ಆಟ, ಓಟ ಸೇರಿದಂತೆ ಪಾಠದಲ್ಲೂ ಮುಂದೆ ಇದ್ದಳು, ಕೇವಲ ಎರಡೇ ಎರಡು ಜತೆಯ ಬಟ್ಟೆ ತೊಟ್ಟು ಶಾಲೆಗೆ ಬರುತ್ತಿದ್ದ ಆಕೆಯ ಉಡುಪಿನಲ್ಲಿ ಅಲ್ಲಲ್ಲಿ ಪ್ಯಾಚ್‌ ಕಾಣಿಸುತ್ತಿದ್ದರೂ, ತೊಡುವ ವಸ್ತ್ರಗಳು ಶುಭ್ರ ಮತ್ತು ಸ್ವಚ್ಛ ತೆಯಿಂದಲೇ ಕೂಡಿರುತ್ತಿತ್ತು. ಒಂದು ದಿನ ಶಾಲೆಯಲ್ಲಿ ವಾರ್ಷಿಕೋತ್ಸವದ ನಿಮಿತ್ತವಾಗಿ ಎಲ್ಲರೂ ಅಲಂಕಾರ ಭರಿತವಾಗಿ, ಹೊಸ ಹೊಸ ಬಟ್ಟೆಗಳನ್ನು ತೊಟ್ಟು ಬರಬೇಕು ಎಂಬ ಶಾಲಾ ಅಧ್ಯಾಪಕರ ಅಪ್ಪಣೆಯಂತೆ ಎಲ್ಲ ವಿದ್ಯಾರ್ಥಿಗಳು ರಂಗು-ರಂಗಿನ, ಉಡುಗೆ-ತೊಡುಗೆಯೊಂದಿಗೆ ಆಗಮಿಸಿದ್ದರು.

ಹೊಟ್ಟೆಗೆ ಭರ್ತಿ ಹಿಟ್ಟಿಲ್ಲದ ಪರಿಸ್ಥಿತಿಯಲ್ಲಿ ಹೊಸ ಬಟ್ಟೆ ಖರೀದಿಸಲು ಆರ್ಥಿಕ ಸಮಸ್ಯೆ ಸುಪ್ರೀತಾಗೆ ತಲೆದೂರಿರುವುದು ವಾಸ್ತವವೇ ಆದರೂ, ಶಾಲೆಗೆ ಹೋಗಲೇಬೇಕು, ಕಾರ್ಯಕ್ರಮಕ್ಕೆ ಭಾಗಿಯಾಗಲೇ ಬೇಕು ಇಂತಹ ಸಂದಿಗ್ನತೆ. ಸಹಪಾಠಿಗಳೆಲ್ಲರೂ ವಿಧ-ವಿಧವಾದ, ನವ-ನವೀನ ಉಡುಪಿನೊಂದಿಗೆ ಕಂಗೊಳಿಸುತ್ತಾರೆ,ನಾನು ಅವರುಗಳ ಜತೆಗೆ ಹೇಗೆ ಕಾಲ ಕಳೆಯಲಿ? ಅವರುಗಳ ಕೊಂಕು ನುಡಿ, ತಮಾಷೆಯ ಮಾತುಗಳಿಗೆ ಕಿವಿಯಾಗಬೇಕು ಎಂಬ ಆಲೋಚನೆಗಳನ್ನೆಲ್ಲ ಬದಿಗಿಟ್ಟು,ಅಮ್ಮನ ಬಳಿ ವಿಷಯ ಪ್ರಸ್ತಾಪ ಮಾಡುತ್ತಾಳೆ.

ಅವಳ ತಾಯಿಯೂ ಕೂಡಾ ಆ ಸಮಯಕ್ಕೆ ಅಸಹಾಯಕತೆಗೆ ಒಳಗಾದರೂ, ಒಂದು ಕ್ಷಣ ಆಲೋಚಿಸಿ ತನ್ನ ತಾಳ್ಮೆ, ಜಾಣ್ಮೆಯಿಂದ ಸುಪ್ರೀತಾಳ ಹಳೆಯ ಹರಿದು ಹೋದ ಬಟ್ಟೆಗಳನ್ನೆಲ್ಲ ಒಟ್ಟುಗೂಡಿಸಿ ಹೊಲಿದು, ತಾನೇ ಹೊಸ ಮಾದರಿಯಲ್ಲಿ ಒಂದು ಉಡುಗೆಯನ್ನು ತಯಾರು ಮಾಡುತ್ತಾಳೆ. ಅದು ಸುಂದರ ಮತ್ತು ವಿಭಿನ್ನತೆಯಿಂದ ಕೂಡಿರುತ್ತದೆ. ಅದನ್ನೇ ಖುಷಿಯಿಂದ ತೊಟ್ಟು ಸುಪ್ರೀತಾ ಶಾಲೆಗೇ ಆಗಮಿಸುತ್ತಾಳೆ.ಎಲ್ಲರ ಬಾಯಲ್ಲೂ ಆಹಾರವಾಗಿ ಅಪಹಾಸ್ಯಕ್ಕೆ ಒಳಗಾದರೂ, ಎಂದಿನಂತೆ ಆನಂದದಿಂದಲೇ ಇರುತ್ತಾಳೆ ಸುಪ್ರೀತಾ. ಮಧ್ಯಾಹ್ನದ ಅನಂತರ ಸಾಂಸ್ಕೃತಿಕ ಕಾರ್ಯಕ್ರಮ ಆರಂಭಗೊಳ್ಳುತ್ತದೆ ಅದರಲ್ಲಿ ಎಲ್ಲ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂಬ ಶಿಕ್ಷಕರ ಒತ್ತಾಯದ ಮೇರೆಗೆ ಸುಪ್ರೀತಾ ಕೂಡಾ ಕ್ಯಾಟ್‌ ವಾಕ್‌ ಸ್ಪರ್ಧೆಗೆ ಸೇರುತ್ತಾಳೆ ಹಾಗೂ ಯಾರೂ ನಿರೀಕ್ಷೆ ಮಾಡದಂತೆ ಪ್ರಥಮ ಬಹುಮಾನ ತನ್ನದಾಗಿಕೊಳ್ಳುತ್ತಾಳೆ.

ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ಬಂದ ದೊಡ್ಡ ದೊಡ್ಡ ಫ್ಯಾಷನ್‌ ಡಿಸೈನರ್‌ಗಳು ಇವಳನ್ನು ಕೊಂಡಾಡುತ್ತಾರೆ, ಉಡುಗೆಯನ್ನು ತಯಾರು ಮಾಡಿ ಕೊಟ್ಟ ಈಕೆಯ ತಾಯಿಗೆ ಬೆಂಗಳೂರಿಗೆ ಬುಲಾವ್‌ ಬರುತ್ತದೆ. ತಾಯಿಗೆ ಉಡುಗೆ ತಯಾರಿಸಿ ಕೊಡಲು ದೊಡ್ಡ ದೊಡ್ಡ ಆಫ‌ರ್‌ಗಳು ಬರುತ್ತವೆ. ಒಂದಿನಿತು ಬಿಡುವಿಲ್ಲದೆ ಬ್ಯುಸಿ ಆಗುತ್ತಾರೆ ಅಲ್ಪ ಸಮಯದಲ್ಲಿ ಜನಪ್ರಿಯರಾಗುತ್ತಾರೆ ಹಾಗೂ ಆರ್ಥಿಕ ಪರಿಸ್ಥಿತಿ ದೂರವಾಗುತ್ತದೆ. ತಾಯಿ ಹಾಗೂ ಮಗಳು ಹಳ್ಳಿ ಬಿಟ್ಟು ಬೆಂಗಳೂರಿನಲ್ಲಿ ನೆಲೆಸುತ್ತಾರೆ. ಅವರ ಜೀವನ ಸುಧಾರಣೆ ಕಂಡು ಹೊಸ ಬದುಕನ್ನು ಆರಂಭಿಸುತ್ತಾರೆ.

*ಶಿವಕುಮಾರ್‌ ಹೊಸಂಗಡಿ, ದುಬೈ

ಟಾಪ್ ನ್ಯೂಸ್

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

UAE ರಾಸ್‌ ಅಲ್‌ ಖೈಮಾ-ಪ್ರತಿಭಾನ್ವೇಷಣೆ ಸ್ಪರ್ಧೆ: ಮಿಂಚಿದ ಪ್ರತಿಭೆಗಳು

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ವೀರಶೈವವು ಬಸವಪೂರ್ವ ಯುಗದ ಸನಾತನ ಧರ್ಮ

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಏನೂ ಇಲ್ಲದೆಯೂ ಸಂತೋಷವಾಗಿರಿ!

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಗಾದೆ ಮಾತು ಹೇಳಿದರೆ ಕೇಳಬೇಕಮ್ಮಾ…

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

Desi Swara: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್‌ ಮದುವೆ ಕುರಿತು ತಾಯಿ ಮಾಲತಿ ಮಾತು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.