Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ

"ಮಿಸ್‌ ಫೆಸ್ಟಿವಲ್‌ ಆಫ್‌ ನೇಶನ್ಸ್‌ 2024'ರಲ್ಲಿ ಭಾರತವನ್ನು ಪ್ರತಿನಿಧಿಸಲು ಸಜ್ಜು!

Team Udayavani, Oct 26, 2024, 12:14 PM IST

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ

ನ್ಯೂಯಾರ್ಕ್‌:16 ವರ್ಷದ ಜೀವಿಕಾ ಬೆಂಕಿ ನ್ಯೂಯಾರ್ಕ್‌ ರಾಜ್ಯದ ರಾಜಧಾನಿ ಆಲ್ಬನಿಯಲ್ಲಿ ನಡೆದ “ಮಿಸ್‌ ಇಂಡಿಯಾ’ ಸ್ಪರ್ಧೆಯಲ್ಲಿ ಗೆದ್ದಿದ್ದಾರೆ. ಈ ಸ್ಪರ್ಧೆ ಕೇವಲ ಸೌಂದರ್ಯದ ಸ್ಪರ್ಧೆ ಅಲ್ಲ. ಇದರಲ್ಲಿ ಅಭ್ಯರ್ಥಿಯ ಶೈಕ್ಷಣಿಕ, ಕ್ರೀಡೆ, ಕಲೆ, ನೃತ್ಯ, ನಾಯಕತ್ವ, ಸಮಾಜ ಸೇವೆ, ಸ್ಥಳೀಯ ಮತ್ತು ಅಂತಾರಾಷ್ಟ್ರೀಯ ಘಟನೆಗಳ ಪರಿಜ್ಞಾನ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಗಳನ್ನು ಪರೀಕ್ಷಿಸಿ ಆಯ್ಕೆ ಮಾಡಲಾಗುತ್ತದೆ. ಜೀವಿಕಾ ಬೆಂಕಿ ಅ.27ರಂದು ನಡೆಯಲಿರುವ “ಮಿಸ್‌ ಫೆಸ್ಟಿವಲ್‌ ಆಫ್‌ ನೇಶನ್ಸ್‌’ ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲಿದ್ದಾರೆ.

“ಮಿಸ್‌ ಫೆಸ್ಟಿವಲ್‌ ಆಫ್‌ ನೇಶನ್ಸ್‌’ ಒಂದು ಸಣ್ಣ ಪ್ರಮಾಣದ “ಮಿಸ್‌ ಯುನಿವರ್ಸ್‌’ ತರಹದ ಸ್ಪರ್ಧೆಯಾಗಿದ್ದು ಇದರಲ್ಲಿ 30ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ.

53 ವರ್ಷಗಳ ಇತಿಹಾಸ ಇರುವ “ಫೆಸ್ಟಿವಲ್‌ ಆಫ್‌ ನೇಶನ್‌’ನಲ್ಲಿ “ಮಿಸ್‌ ಇಂಡಿಯಾ’ ಗೆದ್ದ ಮೊಟ್ಟಮೊದಲ ಕನ್ನಡತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾಳೆ. ಅಪ್ಪಟ ಕನ್ನಡ ಪ್ರೇಮಿ ಬೆಂಕಿ ಬಸಣ್ಣ ಮತ್ತು ಉಮಾ ಇವರ ಪುತ್ರಿ ಜೀವಿಕಾ ಬೆಂಕಿ ಈಗ ನಿಸ್ಕಯುನಾ ಸರಕಾರಿ ಹೈಸ್ಕೂಲ್‌ನಲ್ಲಿ 11ನೇ ತರಗತಿ ಓದುತ್ತಿದ್ದಾಳೆ.

ಭವಿಷ್ಯದಲ್ಲಿ ಪೈಲೆಟ್‌ ಆಗುವ ಕನಸು ಹೊಂದಿರುವ ಜೀವಿಕಾ, ತನ್ನ ಹೈಸ್ಕೂಲ್‌ ಅಭ್ಯಾಸದ ಜತೆಗೆ ವೀಕೆಂಡ್‌ಗಳಲ್ಲಿ ಈಗಾಗಲೇ ರಿಚ್ಮೋರ್‌ ಫ್ಲೈಟ್‌ ಸ್ಕೂಲ್‌ನಲ್ಲಿ ಚಿಕ್ಕ ವಿಮಾನಗಳನ್ನು ಹಾರಿಸುವ ತರಬೇತಿ ಪಡೆಯುತ್ತಿದ್ದಾಳೆ. ಹೈಸ್ಕೂಲಿನ ಟೆನ್ನಿಸ್‌ ಮತ್ತು ಲಕ್ರಾಸ್‌ ತಂಡಗಳ ಕ್ಯಾಪ್ಟನ್‌ ಆಗಿ ನಾಯಕತ್ವದ ಗುಣ ಪ್ರದರ್ಶಿಸುತ್ತಿದ್ದಾಳೆ. ಸ್ಥಳೀಯ ಆಲ್ಬನಿ ಕನ್ನಡ ಸಂಘದ ಯೂಥ್‌ ಕ್ಲಬ್‌ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾಳೆ.

ಕೋವಿಡ್‌ ಮಹಾಮಾರಿಯ ಸಂದರ್ಭದಲ್ಲಿ ನಾವಿಕ ಸಂಸ್ಥೆ ರೋಟರಿ ಕ್ಲಬ್‌ ಹಾಗೂ ಮಾಧ್ಯಮದ “ಜ್ಞಾನ ದೀವಿಗೆ’ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕರ್ನಾಟಕದ ಹಳ್ಳಿಯ ಎಸೆಸೆಲ್ಸಿ ಮಕ್ಕಳಿಗೆ ಟ್ಯಾಬ್ಲೆಟ್‌ ಹಂಚುವ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾಳೆ.

“ಮಿಸ್‌ ಫೆಸ್ಟಿವಲ್‌ ಆಫ್‌ ನೇಶನ್ಸ್‌’ ನ ಮೊದಲ ಹಂತದ ಸ್ಪರ್ಧೆ ಅ.14ರಂದು ನಡೆಯಿತು. ಇದರ ಕೊನೆಯ ಸ್ಪರ್ಧೆ ಅ.27ರಂದು ಸಾವಿರಾರು ಪ್ರೇಕ್ಷಕರ ಮುಂದೆ ಆಲ್ಬನಿಯ ಎಂಪೈರ್‌ಸ್ಟೇಟ್‌ ಪ್ಲಾಜಾದ ಕನ್ವೆನ್‌ಶನ್‌ ಸೆಂಟರ್‌ನಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಜೀವಿಕಾ ಗೆದ್ದು “ಮಿಸ್‌ ಫೆಸ್ಟಿವಲ್‌ ಆಫ್‌ ನೇಶನ್ಸ್‌’ನಲ್ಲಿ ಗೆಲ್ಲಲಿ ಎಂದು ನಾವೆಲ್ಲರೂ ಹಾರೈಸುತ್ತೇವೆ.

ಟಾಪ್ ನ್ಯೂಸ್

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

Hardik Pandya

Hardik Pandya: ಶೀಘ್ರ ದೊಡ್ಡ ವಿಷಯ ಪ್ರಕಟ: ಹಾರ್ದಿಕ್‌ ಪೋಸ್ಟ್‌ ಕುತೂಹಲ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

Desi Swara: ಪ್ರಸಿದ್ಧ ದುಬೈ ಗಡಿನಾಡ ಉತ್ಸವ ಸಂಭ್ರಮ

Desi Swara: ಪ್ರಸಿದ್ಧ ದುಬೈ ಗಡಿನಾಡ ಉತ್ಸವ ಸಂಭ್ರಮ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ

yashasvi jaiswal

INDvsNZ: ಒಂದು ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಸಿಕ್ಸರ್‌ ಬಾರಿಸಿದ ದಾಖಲೆ ಮಾಡಿದ ಜೈಸ್ವಾಲ್

14-katapady

Katapady:ಸೂರ್ಯನ ಶಾಖದಿಂದ ಮರದ ಹಲಗೆಯಲ್ಲಿ ರಚಿಸಿದ ಕಲಾಕೃತಿಗೆ ರಾಷ್ಟ್ರಪತಿಗಳಿಂದ ಮೆಚ್ಚುಗೆ

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

ಲಂಡನ್: ಶ್ರೀ ರಾಘವೇಂದ್ರ ತೀರ್ಥರ ಹೊಸ ಆವರಣಕ್ಕೆ ಸಂಗೀತ ನೃತ್ಯ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.