ಹೊಸಪೇಟೆ-ಗುತ್ತಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ : ಕೇಂದ್ರ ಸಚಿವರಿಗೆ ಮನವಿ ಸಲ್ಲಿಕೆ
Team Udayavani, Apr 4, 2022, 4:35 PM IST
ಬಳ್ಳಾರಿ: ಕೇಂದ್ರ ಸರ್ಕಾರದ ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ಭಾಗವಹಿಸಿದ್ದ
ಬಳ್ಳಾರಿಯ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಕಾರ್ಯದರ್ಶಿ ಯಶ್ವಂತ್ರಾಜ್ ನಾಗಿರೆಡ್ಡಿ ಹಲವು ಬೇಡಿಕೆಗಳನ್ನು ಪ್ರಸ್ತಾಪಿಸಿ ಈಡೇರಿಸುವಂತೆ ಮನವಿ ಮಾಡಿದ್ದಾರೆ.
ರಾಜ್ಯದ ಸಂಸದರಾದ ಜಿ.ಎಂ.ಸಿದ್ದೇಶ್ವರ್, ಶಿವಕುಮಾರ್ ಉದಾಸಿ, ಕರಡಿ ಸಂಗಣ್ಣ, ವೈ.ದೇವೇಂದ್ರಪ್ಪ, ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ, ಕೆ.ಸಿ.ರಾಮ ಮೂರ್ತಿ, ಪಿ.ಸಿ.ಗದ್ದಿಗೌಡರ್
ಇನ್ನಿತರೆ ರಾಜ್ಯದ ಸಂಸದರು ಮತ್ತು ಸಚಿವರು ಉಪಸ್ಥಿತರಿದ್ದ ಸಭೆಯಲ್ಲಿ ಯಶ್ವಂತ್ರಾಜ್ ಅವರು, ನಗರದ ಸುಧಾ ಕ್ರಾಸ್ ಬಳಿ ಫ್ಲೈ ಓವರ್ ನಿರ್ಮಾಣ ಮಾಡುವುದು, ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಲಿಫ್ಟ್ ಮತ್ತು ಎಸ್ಕ್ಲೇಟರ್ ಅಳವಡಿಸಲು ಟೆಂಡರ್ ಪ್ರಕ್ರಿಯೆ ಪ್ರಾರಂಭವಾಗಿದ್ದು, ಸರ್ಕಾರದ ಕ್ರಮಗಳನ್ನು ಬೇಗನೆ ಪೂರೈಸಿ ಜನತೆಗೆ ಲಿಫ್ಟ್ ಮತ್ತು ಎಸ್ಕೆಲೇಟರ್ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಬಳ್ಳಾರಿ ಬೆಂಗಳೂರು ನಡುವೆ ಇಂಟರ್ಸಿಟಿ ರೈಲನ್ನು ಆರಂಭಿಸಬೇಕು.
ಹೊಸಪೇಟೆ-ಗುತ್ತಿ ನಡುವಿನ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರೈಸಬೇಕು. 2010ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸುಮಾರು 900 ಎಕರೆ
ರೈತರ ಭೂಮಿ ವಶಪಡಿಸಿಕೊಂಡು ಹನ್ನೆರೆಡು ವರ್ಷಗಳು ಕಳೆದರೂ ನಿರ್ಮಾಣವಾಗದ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೂಡಲೇ ಚಾಲನೆ ನೀಡಬೇಕು. ತೋರಣಗಲ್ಲು-ಬಳ್ಳಾರಿ
ಮಧ್ಯದಲ್ಲಿ ಎಂಎಂಟಿಸಿ ಮತ್ತು ಮಿತ್ತಲ್ ಗ್ರೂಪ್ ಗೆ ನೀಡಿರುವ ನೂರಾರು ಎಕರೆ ಭೂಮಿಯಲ್ಲಿ ತ್ವರಿತವಾಗಿ ಕೈಗಾರಿಕೆಗಳ ಸ್ಥಾಪನೆಯಾಗಬೇಕು, ಇಲ್ಲದೇ ಹೋದರೆ ರೈತರ ಭೂಮಿಯನ್ನು
ರೈತರಿಗೆ ಹಿಂದಿರುಗಿಸಬೇಕು ಎಂದವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಬಿಜೆಪಿ ವಿರುದ್ಧ ಯಾವುದೇ ರಂಗವನ್ನು ಮುನ್ನಡೆಸಲು ಹೋಗುವುದಿಲ್ಲ: ಶರದ್ ಪವಾರ್
ಇತ್ತೀಚಿನ ಕೇಂದ್ರದ ಆಯವ್ಯಯದಲ್ಲಿ ರಫ್ತಿಗೆ ಹೆಚ್ಚು ಒತ್ತು ನೀಡಲಾಗಿದ್ದು, ಇದರಿಂದಾಗಿ ರಾಜ್ಯದ ಮತ್ತು ದೇಶದ ಉದ್ಯಮಿಗಳಿಗೆ ಆರ್ಥಿಕ ಸಂಕಷ್ಟ ಎದುರಾಗುತ್ತದೆ. ಅದರ ಬದಲಾಗಿ ನಮ್ಮಲ್ಲಿಯೇ ಸಿದ್ಧವಸ್ತುಗಳನ್ನು ತಯಾರು ಮಾಡಿ ರಫ್ತು ಮಾಡಿದರೆ ನಮ್ಮ ಉದ್ಯಮಿಗಳಿಗೆ ಸಹಕಾರವಾಗುತ್ತದೆ ಅಲ್ಲದೇ ನಮ್ಮ ದೇಶದ ಬೊಕ್ಕಸಕ್ಕೂ ಹೆಚ್ಚಿನ ಆರ್ಥಿಕ ಹರಿವು ಬರುತ್ತದೆ ಎಂದು ಇನ್ನಿತರೆ ವಿಷಯಗಳನ್ನು ಸಭೆಯಲ್ಲಿ ಮಂಡಿಸಿ ತ್ವರಿತವಾಗಿ ಇತ್ಯರ್ಥ ಪಡಿಸುವಂತೆ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್ಲೈನ್ ಕಣ್ಣು !
Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !
State Govt: ಗಂಗಾರತಿ ಮಾದರಿಯಲ್ಲಿ ಅ. 3ರಿಂದ ಕಾವೇರಿ ಆರತಿ
BJP: ವರಿಷ್ಠರ ಖಡಕ್ ಎಚ್ಚರಿಕೆ: ಬಿಜೆಪಿ ಭಿನ್ನರ ಸಭೆ ವಿಫಲ
Election Bond: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Israel: ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ.. ನಾಲ್ವರು ಮೃತ್ಯು, ಹಲವರು ಗಂಭೀರ
Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ
Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!
Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!
State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್ಲೈನ್ ಕಣ್ಣು !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.