ದೇವೀರಮ್ಮ ಸುಗ್ಗಿ ಹಬ್ಬದಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ತಡೆ


Team Udayavani, Apr 4, 2022, 5:07 PM IST

ದೇವೀರಮ್ಮ ಸುಗ್ಗಿ ಹಬ್ಬದಲ್ಲಿ ಅನ್ಯಧರ್ಮೀಯರ ವ್ಯಾಪಾರಕ್ಕೆ ತಡೆ

ಆಲ್ದೂರು : ಸಮೀಪದ ಚಿಕ್ಕಮಾಗರವಳ್ಳಿ, ದೊಡ್ಡಮಾಗರವಳ್ಳಿ, ಹಳಿಯೂರು, ಸಾರಳ್ಳಿ, ದೋಣಗುಡಿಗೆ, ಹಳ್ಳಿ ಗ್ರಾಮಗಳಲ್ಲಿ ಸೋಮವಾರದಿಂದ ಆರಂಭವಾಗುವ ದೇವೀರಮ್ಮ
ದೇವಿಯ ಸುಗ್ಗಿ ಹಬ್ಬದಲ್ಲಿ ಹಿಂದೂ ಧರ್ಮದವರನ್ನು ಬಿಟ್ಟು ಅನ್ಯಧರ್ಮದವರಿಗೆ ವ್ಯಾಪಾರ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಈ 5 ಗ್ರಾಮಗಳ ಗ್ರಾಮಸ್ಥರು ಒಟ್ಟಾಗಿ ಭಾನುವಾರ ಆಲ್ದೂರಿನ ಕೆಳ ಬಸ್‌ ನಿಲ್ದಾಣದ ಬಳಿ ಬ್ಯಾನರ್‌ ಅವಳಡಿಸಿದ್ದಾರೆ.

ಹಿಂದು ಸಂಘಟನೆಯ ಪ್ರಮುಖ ಸಿ.ಡಿ. ಶಿವಕಮಾರ್‌ ಈ ಕುರಿತು ಮಾತನಾಡಿ, ಈ ದೇಶದ ಕಾನೂನಿಗೆ ಗೌರವ ನೀಡದೆ ನ್ಯಾಯಾಲಯದ ತೀರ್ಪನ್ನು ವಿರೋಧಿಸಿ ಕಾನೂನಿಗೆ ಅಗೌರವ
ತೋರಿರುವ ಮುಸ್ಲಿಂ ಸಮುದಾಯಕ್ಕೆ ನಾವು ನಮ್ಮ ಊರಿನ ದೇವರ ಉತ್ಸವದಲ್ಲಿ ವ್ಯಾಪಾರಕ್ಕೆ ಅವಕಾಶ ಕೊಡುವುದಿಲ್ಲ. ನಾವು ಪೂಜಿಸುವ ಗೋವುಗಳನ್ನು ಕಡಿದು ತಿನ್ನುವ, ದೇಶದ ಅಖಂಡತೆಗೆ ಸವಾಲು ಹಾಕುವ ಅವರಿಗೆ ನಾವು ಸಹಕಾರ ನೀಡುವುದಿಲ್ಲ.

ನಮ್ಮ ಊರಿನ ದೇವಿರಮ್ಮ ದೇವಿಯ ಸುಗ್ಗಿ ಹಬ್ಬವನ್ನು ಬಹಳ ನಿಷ್ಟೆ ಹಾಗೂ ಸಂಪ್ರದಾಯಗಳನ್ನು ಪಾಲಿಸಿ ಆಚರಿಸುತ್ತೇವೆ. ಎಲ್ಲಾ ಗ್ರಾಮಗಳ ಹಿರಿಯರು, ಪ್ರಮುಖರು ಒಟ್ಟಾಗಿ ಚರ್ಚಿಸಿ ಪಕ್ಷ ಬೇಧ ಮರೆತು ಒಗ್ಗಟ್ಟಿನಿಂದ ಈ ತೀರ್ಮಾನ ಕೈಗೊಂಡಿದ್ದು ನಮ್ಮ ಊರಿನ ಸುಗ್ಗಿ ಹಬ್ಬದಲ್ಲಿ ಹಿಂದೂಗಳನ್ನು ಹೊರತುಪಡಿಸಿ ಅನ್ಯಧರ್ಮದವರಿಗೆ ನಾವು ವ್ಯಾಪಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಪತ್ರಿಕೆಗೆ ತಿಳಿಸಿದರು. ಗ್ರಾಮಸ್ಥರಾದ ನಿಶ್ಚಲ್‌ , ಸುಪ್ರಿತ್‌, ನವೀನ್‌, ಮಿಥುನ್‌, ಶರತ್‌, ಪ್ರಜ್ವಲ್‌, ತೇಜಸ್‌, ಸತೀಶ್‌, ಶಿವರಾಂ, ಅನುಜಿತ್‌, ಸನ್ಮಯ್‌, ಸಚಿನ್‌,
ಅರ್ಜುನ್‌. ಭರತ್‌ ಇದ್ದರು.

ಇದನ್ನೂ ಓದಿ : ಹೊಸಪೇಟೆ-ಗುತ್ತಿ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ : ಕೇಂದ್ರ ಸಚಿವರಿಗೆ ಮನವಿ ಸಲ್ಲಿಕೆ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.